ನೆಲ-ಜಲ, ನಾಡು-ದೇಶ ರಕ್ಷಣೆ ನಿರಂತರವಾಗಿರಲಿ


Team Udayavani, Mar 1, 2021, 4:15 PM IST

ನೆಲ-ಜಲ, ನಾಡು-ದೇಶ ರಕ್ಷಣೆ ನಿರಂತರವಾಗಿರಲಿ

ಗದಗ: ಕರ್ನಾಟಕ ಸರ್ವ ಧರ್ಮಗಳ ಸಮನ್ವಯದ ಬೀಡು. ಸಾಹಿತ್ಯ ಹಾಗೂ ಕನ್ನಡ ಮನಸ್ಸುಗಳನ್ನು ಕಟ್ಟುವ ಕೆಲಸದಲ್ಲಿ ಜಿಲ್ಲೆಯ ಪಾತ್ರ ಮಹತ್ವ ಹಾಗೂ ಹೆಮ್ಮಯ ಸಂಗತಿ. ಸಾಹಿತ್ಯಿಕ ಕೆಲಸದೊಂದಿಗೆ ನಮ್ಮ ನೆಲ, ಜಲ, ನಾಡು ಮತ್ತು ದೇಶ ಸಂರಕ್ಷಣೆ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದು ಮುಂಡರಗಿ ನಾಡೋಜ ಡಾ| ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ರವಿವಾರ ಸಂಜೆ ನಡೆದ 9ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಕನ್ನಡ ಅತ್ಯಂತ ಅರ್ಥಪೂರ್ಣವಾದ ಭಾಷೆ. ಕನ್ನಡವೇ ಸಂಸ್ಕೃತಿ, ಸಾಹಿತ್ಯ, ಕನ್ನಡವೇ ನಾಡು, ಕನ್ನಡವೇ ನುಡಿ, ಕನ್ನಡವೇ ಸರ್ವಸ್ವ ಆಗಬೇಕು. ಕನ್ನಡ ಎಂಬುದುಮೂರಕ್ಷರಗಳ ಪದಪುಂಜವಯ್ಯ, ಕನ್ನಡ ಕನ್ನಡಾಂಬೆ ಕೀರ್ತಿ ಪ್ರತೀಕ. ಕನ್ನಡತನ ನಮ್ಮದಾಗಬೇಕು. ಕನ್ನಡ ಭಾಷೆ, ನಾಡುಕಟ್ಟುವ ಕೆಲಸಗಳು ಮತ್ತಷ್ಟು ಗಟ್ಟಿಯಾಗಬೇಕು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಯಾರೂಮಾಡದಿರುವ ಕೆಲಸ ಡಾ| ಶರಣು ಗೋಗೇರಿ ಮಾಡಿದ್ದಾರೆ. ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಾಹಿತ್ಯ ಭವನಗಳು ತಲೆ ಎತ್ತುತ್ತಿವೆ. ಇದರಿಂದ ತಳ ಮಟ್ಟದಲ್ಲಿ ಸಾಹಿತ್ಯಪಸರಿಸುವಿಕೆ ಹಾಗೂ ಸಾಹಿತ್ಯದ ನಿರಂತರ ಬೆಳವಣಿಗೆ ನೆರವಾಗುತ್ತದೆ. ಕನ್ನಡ ಸಾಹಿತ್ಯಿಕ ಕಾರ್ಯಚಟುವಟಿಕೆಗಳಿಗೆಸಾರ್ವಜನಿಕರು ಕೂಡ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ಮಾಜಿ ಸಚಿವ ಎಸ್‌.ಎಸ್‌. ಪಾಟೀಲ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗ್ರಾಪಂನಿಂದ ಹಿಡಿದು ಎಲ್ಲಹಂತದ ಚುನಾವಣೆಗಳು ಕಲುಷಿತವಾಗಿದೆ. ಹಣ, ಮದ್ಯ ಆಮಿಷ ಹೆಚ್ಚುತ್ತಿದೆ. ಇಂತಹ ಪ್ರವೃತ್ತಿಯಿಂದ ದೇಶದಲ್ಲಿಭ್ರಷ್ಟಾಚಾರಕ್ಕೆ ಕಾರಣವಾಗುತ್ತದೆ.ಇದರಿಂದ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆಯೂ ಹೊರತಾಗಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ನೂರು ವರ್ಷ ಕಂಡಿರುವ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಇಂದು ಕೆಲವೇ ಲಕ್ಷಗಳಲ್ಲಿ ಆಜೀವ ಸದಸ್ಯರಿದ್ದಾರೆ. ಸದಸ್ಯತ್ವ ನೋಂದಣಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದರೆ, ಇಂದು ಕನಿಷ್ಟ 3 ಕೋಟಿ ಜನ ಸದಸ್ಯತ್ವ ಹೊಂದಿರುತ್ತಿದ್ದರು. ಸದಸ್ಯತ್ವದ ಸಂಖ್ಯೆಹೆಚ್ಚಿದರೆ ಕಸಾಪ ಚುನಾವಣೆಯಲ್ಲಿ ಸ್ಪರ್ಧೆ ಬಿಗಿಯಾಗುತ್ತದೆ ಎಂಬ ಹೆದರಿಕೆಯೇ ಹಿನ್ನಡೆಗೆ ಕಾರಣ ಎಂದು ದೂರಿದರು. ಈ ಬಾರಿ ಕಸಾಪ ಚುನಾವಣೆಯಲ್ಲಿ ಸ್ಪರ್ಧಿಸುವವರರು ಕೇವಲ ನಾಮಪತ್ರ ಸಲ್ಲಿಕೆಗೆ ಸೀಮಿತವಾಗಬೇಕು. ತಂತ್ರಜ್ಞಾನದ ಮೂಲಕ ಪ್ರಚಾರ ನಡೆಸಿ, ವಿನೂತನ ಮತ್ತುಆದರ್ಶಪ್ರಾಯವಾಗಿ ಚುನಾವಣೆ ಎದುರಿಸುವಂತೆ ಸಲಹೆ ನೀಡಿದರು.

ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯಿಂದ ಮನುಷ್ಯ ಮಾನಸಿಕವಾಗಿಸದೃಢರಾಗಿರುತ್ತಿದ್ದ. ಕೃಷಿ ಹಾಗೂ ಕಾಯಕ ಚಟುವಟಿಕೆಗಳ ದೈಹಿಕವಾಗಿ ಆರೋಗ್ಯವಂತರಾಗಿರುತ್ತಿದ್ದರು. ಆದರೆ, ಅಂತಹಆಹಾರ ಮತ್ತು ಚಟಿವಟಿಕೆಗಳಿಲ್ಲದೇ ನವ ಯುವಕರಲ್ಲಿ ಸಕ್ಕರೆಕಾಯಿಲೆ, ರಕ್ತದೊತ್ತಡ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಎಚ್ಚರಿಸಿದರು. ವೀರೇಶ್ವರ ಪುಣ್ಯಾಶ್ರಮದ ಪೀಠಾ  ಧಿಪತಿ ಕಲ್ಲಯ್ಯಜ್ಜನವರು, ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಡಾ|ಶರಣು ಗೋಗೇರಿ, ಎ.ಓ. ಪಾಟೀಲ, ಪ್ರಕಾಶ ಮಂಗಳೂರು, ಅಶೋಕ ಹಾದಿ, ಡಾ| ಜಿ.ಎಸ್‌. ಯತ್ನಟ್ಟಿ, ಅಶೋಕ ನವಲಗುಂದ ಉಪಸ್ಥಿತರಿದ್ದರು.

ಸಮ್ಮೇಳನದ ನಿರ್ಣಯಗಳು :

  • ಜಿಲ್ಲೆಯ ಎಲ್ಲ ಜನವಸತಿ ಇತರೆ ಪ್ರದೇಶಗಳಲ್ಲಿ ಅಂಗಡಿಗಳ ನಾಮಫಲಕಗಳು ಕನ್ನಡ ಭಾಷೆಯಲ್ಲಿ ಬರೆಸಲು ಸರ್ಕಾರ ಹಾಗೂ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು.
  • ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣ ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿಯೇ ಇರುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು.
  • ಜಿಲ್ಲೆಯ ಜೀವನಾಡಿಯಾದ ಮಹದಾಯಿ ನದಿ ನೀರಿನ ಯೋಜನೆ ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಬೇಕು.
  • ಜಿಲ್ಲೆಯ ದಿಗ್ಗಜ ಸಾಹಿತಿಗಳಾದ ಕುಮಾರವ್ಯಾಸ, ಚಾಮರಸ, ನಯಸೇನ, ದುರ್ಗಸಿಂಹ ಸ್ಮರಣಾರ್ಥ ಪ್ರತಿಷ್ಠಾನಗಳ ರಚನೆಗೆ ಜಿಲ್ಲಾಡಳಿತ ಕ್ರಮ ವಹಿಸಬೇಕು.
  • ಜಿಲ್ಲೆಯ ಹೆಸರಾಂತ ಶಿಲ್ಪಕಲೆಯುಳ್ಳ ದೇವಾಲಯಗಳು, ನಿಸರ್ಗ ತಾಣವಾದ ಕಪ್ಪತಗುಡ್ಡ, ಗಜೇಂದ್ರ ಗಡ ಕೋಟೆ, ನರಗುಂದ ಗುಡ್ಡ, ಶ್ರೀಮಂತಗಡಕೋಟೆಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು.

ಎರಡು ದಿನಗಳ ಕಾಲ ನಡೆದ 9ನೇ ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನ ತೃಪ್ತಿ ತಂದಿದೆ. ಜಿಲ್ಲಹಾಗೂ ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಸುದೀರ್ಘ‌ಚರ್ಚೆಯಾಗಿ ಪರಿಹಾರ ಕ್ರಮಗಳ ಬಗ್ಗೆಯೂ ಗಮನ ಸೆಳೆದಿದೆ. ನಾಡು-ನುಡಿ ಬೇರು ಮಟ್ಟದಿಂದಗಟ್ಟಿಗೊಳಿಸಲು ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮ್ಮೇಳನದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.– ಪ್ರೊ| ರವೀಂದ್ರ ಕೊಪ್ಪರ, ಸಮ್ಮೇಳನಾಧ್ಯಕ್ಷ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.