ಬೇಡ-ಜಂಗಮರಿಗೆ ಎಸ್ಸಿ ಪ್ರಮಾಣ ಪತ್ರ ನೀಡದಿರಿ
Team Udayavani, Jul 13, 2019, 4:36 PM IST
ಲಕ್ಷ್ಮೇಶ್ವರ: ಬೇಡ, ಜಂಗಮ ಜನಾಂಗದವರಿಗೆ ಎಸ್ಸಿ ಜಾತಿ ಪ್ರಮಾಣ ಪತ್ರ ನೀಡದಂತೆ ಆಗ್ರಹಿಸಿ ಶುಕ್ರವಾರ ಪಟ್ಟಣದ ಅಂಬೇಡ್ಕರ್ ಸೇನೆ ಹಾಗೂ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಪುರಸಭೆ ಸದಸ್ಯ ರಾಮಣ್ಣ ಗಡದವರ ಮತ್ತು ಸುರೇಶ ಬೀರಣ್ಣವರ ಮಾತನಾಡಿ, ಅಖಂಡ ಧಾರವಾಡ ಜಿಲ್ಲೆಯಲ್ಲಿ ಮೂಲ ಎಸ್ಸಿ ಜನಾಂಗದವರನ್ನು ಹೊರತುಪಡಿಸಿ ಬೇರೆ ಯಾರೂ ಈ ಜಾತಿಯ ಪ್ರಮಾಣ ಪತ್ರ ಪಡೆದಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಬೇಡ ಜಂಗಮರು ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ಒಂದೊಮ್ಮೆ ಈ ಪ್ರಮಾಣ ಪತ್ರ ನೀಡಿದ್ದರೆ ಅದನ್ನು ಅಸಿಂಧುಗೊಳಿಸಬೇಕು. ನಿಜವಾದ ಎಸ್ಸಿ ಜನಾಂಗದವರಿಗೆ ಅನ್ಯಾಯವಾಗುವುದನ್ನು ತಡೆಗಟ್ಟಲು ದಲಿತಪರ ಸಂಘಟನೆಗಳು ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಎಚ್ಚರಿಸಿದರು.
ಹುಲ್ಲೇಶ ಗಡದವರ, ಬಸವರಾಜ ಹಿರೇಮನಿ, ಪೃಥ್ವಿರಾಜ ನಂದೆಣ್ಣವರ, ಸದಾಶಿವ ನಂದೆಣ್ಣವರ, ಮಂಜುನಾಥ ಗಡದವರ, ಮಂಜುನಾಥ ಅಯ್ಯಣ್ಣವರ, ಪ್ರಕಾಶ ಹಿತ್ತಲಮನಿ, ಸುರೇಶ ಬೀರಣ್ಣವರ, ವಿಶ್ವ ಭಜಕ್ಕನವರ, ಶಿವಾನಂದ ಅಡಗಿಮನಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ