ದಿನಸಿ ದರಕ್ಕೆ ಮಾರಿದರೆ ಕಠಿಣ ಕ್ರಮ
Team Udayavani, Apr 22, 2020, 5:16 PM IST
ನರೇಗಲ್ಲ: ಅಗತ್ಯ ವಸ್ತುಗಳನ್ನು ಕಿರಾಣಿ ಅಂಗಡಿಗಳ ಮಾಲೀಕರು ನಿಗದಿತ ಬೆಲೆಗಿಂತ ಎರಡು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ತಾಲೂಕು ಆಡಳಿತ ನೀಡಿರುವ ದರಪಟ್ಟಿಯಂತೆ ಅಗತ್ಯ ವಸ್ತುಗಳನ್ನು ಮಾರಾಟ ಮಾಡಬೇಕು ಎಂದು ಆಹಾರ ನಿರೀಕ್ಷಕ ಮಂಜುನಾಥ ತಳ್ಳಿಹಾಳ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಅಂಗಡಿಗಳಿಗೆ ತಾಲೂಕು ಆಡಳಿತ ಹೊರಡಿಸಿರುವ ದರಪಟ್ಟಿ ವಿತರಿಸಿ ಅವರು ಮಾತನಾಡಿದರು. ಅಂಗಡಿಗಳಿಗೆ ಬರುವ ಗ್ರಾಹಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಬೇಕು. ಅಲ್ಲದೇ ದಿನಸಿ ವಸ್ತುಗಳನ್ನು ಅಧಿಕ ಬೆಲೆ ಮಾರಾಟ ಮಾಡುವುದು ಕಂಡು ಬಂದರೆ ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ವ್ಯಾಪಾರಸ್ಥರು ಈ ಕೋವಿಡ್ 19 ವೈರಸ್ ತಡೆಗಟ್ಟುವಲ್ಲಿ ತಾವು ಒಬ್ಬ ಸೇವಕರಾಗಿ ಕಾರ್ಯ ನಿರ್ವಹಿಸಬೇಕು ಎಂದರು. ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕ ಎಸ್.ಎಸ್. ಕುಷ್ಟಗಿ ಮಾತನಾಡಿದರು. ರಾಮಚಂದ್ರ ಕಜ್ಜಿ, ಪಿಎಸ್ಐ ಬಿ.ಬಿ. ಕೊಳ್ಳಿ, ನೀಲಪ್ಪ ಚಳ್ಳಮರದ, ಎಸ್.ಎ. ಜಕ್ಕಲಿ, ಆರೀಫ್ ಮಿರ್ಜಾ, ನಿಂಗಪ್ಪ ಮಡಿವಾಳರ, ಮಹದೇವಪ್ಪ ಮ್ಯಾಗೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ