ಎಚ್.ಕೆ.ಪಾಟೀಲ್ ಮತ್ತು ಅಶೋಕ ಮಹದೇವಗೆ ಗೌರವ ಡಾಕ್ಟರೇಟ್
Team Udayavani, Apr 9, 2021, 2:41 PM IST
ಗದಗ : ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಅಶೋಕ ಮಹದೇವ ದಳವಾಯಿ ಅವರಿಗೆ ಇಲ್ಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಕಟಿಸಿದೆ.
ಸಾರ್ವಜನಿಕ ನೀತಿ ಮತ್ತು ಸಮಾಜ ಸೇವೆಗೆ ನೀಡಿದ ಗಮನಾರ್ಹ ಕೊಡುಗೆಯನ್ನು ಗುರುತಿಸಿ ಎಚ್.ಕೆ.ಪಾಟೀಲ್ ಅವರಿಗೆ ಹಾಗೂ ದೇಶದ ಗ್ರಾಮೀಣ ಮತ್ತು ಬುಡಕಟ್ಟು ಜನಾಂಗಗಳ ಪುನರ್ ನಿರ್ಮಾಣದಲ್ಲಿ ಸಲ್ಲಿಸಿರುವ ಮಹತ್ತರ ಸೇವೆಯನ್ನು ಪರಿಗಣಿಸಿ ಡಾ|ಅಶೋಕ ಮಹಾದೇವ ದಳವಾಯಿ ಅವರಿಗೆ ಡಾಕ್ಟರ್ ಆಫ್ ಲಿಟರೇಚರ್ ಗೌರವ ನೀಡಲು ನಿರ್ಧರಿಸಲಾಗಿದೆ. ಏ.10 ರಂದು ನಡೆಯಲಿರುವ ಪ್ರಥಮ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಗ್ರಾವಿವಿ ಕುಲಪತಿ ಪ್ರೊ| ವಿಷ್ಣುಕಾಂತ ಎಸ್.ಚಟಪಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಇದಾಗಿದ್ದು, ಒಟ್ಟು 7 ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳ 250 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗ್ರಾ.ಪಂ.ಗಳಲ್ಲಿ ಅಮೃತ ಆರೋಗ್ಯ ಅಭಿಯಾನ : ದಕ್ಷಿಣ ಕನ್ನಡ, ಉಡುಪಿ ಗ್ರಾ.ಪಂ.ಗಳಲ್ಲೂ ಜಾರಿ
ಕರ್ತವ್ಯನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣ : ನಗರಸಭೆಯ ಕಾಂಗ್ರೇಸ್ ಸದಸ್ಯನ ವಿರುದ್ಧ FIR
ಮಹಾರಾಷ್ಟ್ರ:ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಢಿಕ್ಕಿ, 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಲಪಾಡಿ-ಕಾಸರಗೋಡು ಷಟ್ಪಥ 2024ರಲ್ಲಿ ಪೂರ್ತಿ : ರಿಯಾಸ್
ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ : ಬಸ್ ಪಲ್ಟಿಯಾಗಿ ದಂಪತಿ ಸಾವು, 15 ಕ್ಕೂ ಹೆಚ್ಚು ಮಂದಿ ಗಾಯ