ಸೂಡಿ ಉತ್ಸವ ನಡೆಸುವುದೇ ಸರ್ಕಾರ?


Team Udayavani, Jan 3, 2020, 4:05 PM IST

gadaga-tdy-1

ಗಜೇಂದ್ರಗಡ: ನಾಡಿನ ಪ್ರವಾಸಿ ಆಕರ್ಷಕ ತಾಣಗಳಲ್ಲೊಂದಾದ ಸೂಡಿಯಲ್ಲಿ ಉತ್ಸವ ಆಗಬೇಕೆನ್ನುವ ಆಸೆ-ಒತ್ತಾಯ ಇಂದು ನಿನ್ನೆಯದಲ್ಲ. ಇದಕ್ಕೆ ದಶಕಗಳ ಬೇಡಿಕೆ ಇದೆ. ಈವರ್ಷವಾದರೂ ಸರ್ಕಾರ “ಸೂಡಿ ಉತ್ಸವ’ ಆಚರಿಸಲು ಮುಂದಾಗುವುದೇ ಎಂಬುದು ಇತಿಹಾಸ ಪ್ರಿಯರ, ಈ ನಾಡಿನ ಜನರ ಒತ್ತಾಸೆಯಾಗಿದೆ

ಕಲ್ಯಾಣ ಚಾಲುಕ್ಯರ ಕಾಲದ ಅಕ್ಕಾದೇವಿ ಆಡಳಿತದಲ್ಲಿ ವಿದ್ಯಾ ಕೇಂದ್ರವಾಗಿದ್ದ ಸೂಡಿ ಗ್ರಾಮವನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸುವ ನಿಟ್ಟಿನಲ್ಲಿ ಸರ್ಕಾರ “ಸೂಡಿ ಉತ್ಸವ’ ಮಾಡಬೇಕೆಂಬ ಕೂಗು ಬಲವಾಗಿ ಕೇಳಿ ಬಂದಿದೆ. ಕಲೆ, ಇತಿಹಾಸ, ಧಾರ್ಮಿಕ, ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಭವ್ಯ ಪರಂಪರೆ ಬಿಂಬಿಸುವಂತಹ “ಸೂಡಿ ಉತ್ಸವ’ವನ್ನು ಜಿಲ್ಲಾಡಳಿತ ನಡೆಸಬೇಕೆನ್ನುವುದು ದಶಕದ ಕನಸಾಗಿದೆ

ಅಕ್ಕಾದೇವಿ ರಾಜಧಾನಿಯಾಗಿತ್ತು: 10ನೇ ಶತಮಾನದ ಕಲ್ಯಾಣರ ಚಾಲುಕ್ಯ ರಾಣಿ ಅಕ್ಕಾದೇವಿ ರಾಜಧಾನಿಯಾಗಿದ್ದ ಸೂಡಿ ಅತ್ಯಂತ ಉಚ್ಚಾಯ ಸ್ಥಿತಿಯಲ್ಲಿದ್ದಾಗ ನಿರ್ಮಾಣವಾಗಿರುವ ಜೋಡು ಕಳಸದ ದೇಗುಲ, ಅಕ್ಕೇಶ್ವರ (ಅನಂತಶಯನ,ಮಲ್ಲಿಕಾರ್ಜುನ) ದೇವಾಲಯ, ನಗರೇಶ್ವರ ದೇವಾಲಯ, ನಾಗಕುಂಡ ಪುಷ್ಕರಣಿ, ಹಂಪಿ ಸ್ವರೂಪದ ಬೃಹದಾಕಾರದ ಏಕಶಿಲೆ ಕಡಲೆಕಾಳು ಗಣಪತಿ, ನಂದಿ ಹಾಗೂ ಈಶ್ವರ ವಿಗ್ರಹ ಇರುವ ಮಂಟಪಗಳು, ಅರವತ್ತು ಅಡಿ ಎತ್ತರದ ಹುಡೆ ಸೇರಿ ಗ್ರಾಮದಲ್ಲಿ ಎಲ್ಲೇ ನೋಡಿದರಲ್ಲಿ ಮೈ ನವಿರೇಳಿಸುವಂತಹ ಶಿಲ್ಪಕಲೆಗಳು ಕಲ್ಯಾಣ ಚಾಲುಕ್ಯರ ಇತಿಹಾಸ ಸಾರಿ ಹೇಳುವಂತಿವೆ.

ಉತ್ಸವ ಹಲವರ ಆಸೆ: ಸ್ವಾತಂತ್ರ್ಯ ಹೋರಾಟಗಾರ ಸೂಡಿ ಗ್ರಾಮದ ದಿ| ವಿರುಪಾಕ್ಷಪ್ಪ ಅಬ್ಬಿಗೇರಿ ಅವರು ಅಂದಿನ ಧಾರವಾಡ ಜಿಲ್ಲಾಧಿಕಾರಿಯಾಗಿದ್ದ ಡಾ| ಶಂಕರಲಿಂಗೇಗೌಡ ಅವರಿಗೆ “ಸೂಡಿ ಉತ್ಸವ’ ನಡೆಸಬೇಕೆಂದು ಮನವಿ ಮಾಡಿದ್ದರು. ಹಿಂದೆ ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಹಾಗೂ ಹಾಲಿ ಸಚಿವ ಬಿ. ಶ್ರೀರಾಮಲು, ಮತ್ತು ಶಾಸಕ ಕಳಕಪ್ಪ ಬಂಡಿ ಅವರ ಮೂಲಕವೂ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಹಲವರ ಆಸೆ-ಕನಸು ಇಂದಿಗೂ ಈಡೇರಿಲ್ಲ.

ಉತ್ಸವ ವಿಶೇಷತೆ: ಸರ್ಕಾರ ನಡೆಸುವ ಉತ್ಸವಗಳಲ್ಲಿ ಕಲೆ, ಸಂಗೀತ, ಸಾಹಿತ್ಯ, ನಾಟಕ, ನೃತ್ಯ, ಜಾನಪದ ಹಾಗೂ ಕಲಾ ಮಾಧ್ಯಮ ಅಲ್ಲದೇ ದೇಶದ ಹೆಸರಾಂತ ಕವಿಗಳು, ವಿದ್ವಾಂಸರು, ನೃತ್ಯ ಪಟುಗಳು, ಅಭಿನಯ ಚತುರರು, ಸಂಗೀತಗಾರರು ಕನ್ನಡ ನಾಡಿನ ಇತಿಹಾಸ ಸಂಸ್ಕೃತಿ ಪರಂಪರೆ ಬೆಳಗಿಸಿ ಜನರ ಮನದಾಳದಲ್ಲಿ ಬೇರೂರುವಂತೆ ಮಾಡುವುದೇ ಉತ್ಸವದ ಉದ್ದೇಶ. ಜಿಲ್ಲಾಡಳಿತ ಮತ್ತು ಶಾಸಕರು ಗ್ರಾಮದಲ್ಲಿ ಉತ್ಸವ ಆಚರಿಸಿ ಇಲ್ಲಿನ ಇತಿಹಾಸ ಪರಿಚಯಿಸುವ ಕಾರ್ಯ ಆಗಬೇಕಿದೆ ಎನ್ನುವುದು ಇತಿಹಾಸ ತಜ್ಞರ ಅಭಿಪ್ರಾಯ.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.