‘ಬರ’ದ ನಾಡಿನಲ್ಲೂ ವಿದೇಶಿ ಹಣ್ಣಿನ ಘಮ: ಡ್ರ್ಯಾಗನ್ ಫ್ರೂಟ್

'ಡ್ರ್ಯಾಗನ್ ಫ್ರೂಟ್ʼ ಬೆಳೆದು ಮಾದರಿಯಾದ ರೈತ ; ಎಕರೆಗೆ ವರ್ಷಕ್ಕೆ 20ರಿಂದ 22 ಟನ್ ಇಳುವರಿ

Team Udayavani, Jul 24, 2022, 4:32 PM IST

14

ಗದಗ: ಸತತ ಬರಗಾಲ, ಬಿತ್ತಿದರೂ ಬಾರದ ಫಲ. ಇದರಿಂದ ಬೇಸತ್ತ ಜಿಲ್ಲೆಯ ರೈತರೊಬ್ಬರು ತಮ್ಮ ಜಮೀನಿನಲ್ಲಿ ವಿದೇಶಿ ಹಣ್ಣು ‘ಡ್ರ್ಯಾಗನ್ ಫ್ರೂಟ್ʼ ಬೆಳೆದು ಅಧಿಕ ಲಾಭಾಂಶ ಪಡೆಯುವುದರ ಮೂಲಕ ಇತರೆ ರೈತರಿಗೆ ಮಾದರಿಯಾಗಿದ್ದಾರೆ.

ಜಿಲ್ಲೆಯ ಮುಂಡರಗಿ ತಾಲೂಕಿನ ಗಂಗಾಪೂರ ಗ್ರಾಮದ ರೈತ ಕುಟುಂಬದ ಮಣ್ಣೆ ವೇಣುಗೋಪಾಲ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಡ್ರ್ಯಾಗನ್ ಫ್ರೂಟ್ ಬೆಲೆದು ಎಲ್ಲರ ಗಮನ ಸೆಳೆದಿದ್ದಾರೆ. 2016-17 ನೇ ಸಾಲಿನಲ್ಲಿ ತಮ್ಮ 2 ಎಕರೆ ಪ್ರದೇಶದಲ್ಲಿ ‘ಡ್ರ್ಯಾಗನ್ ಫ್ರೂಟ್ʼ ಸಸಿ ನಾಟಿ ಮಾಡಿದ ಅವರು, ಇಂದು ಎಕರೆಗೆ ವರ್ಷಕ್ಕೆ 20-22 ಟನ್‌ ಇಳುವರಿ ಪಡೆಯುವುದರೊಂದಿಗೆ 20 ಲಕ್ಷ ರೂ. ಆದಾಯ ಪಡೆಯುತ್ತಿದ್ದಾರೆ.

ತಮ್ಮ 13 ಎಕರೆ ಜಮೀನಿನಲ್ಲಿ ಕೇವಲ 4 ಎಕರೆ ಪ್ರದೇಶದಲ್ಲಿ ಜಂಬೋ ರೆಡ್‌ ತಳಿಯ ‘ಡ್ರ್ಯಾಗನ್ ಫ್ರೂಟ್ʼ ಬೆಳೆದ ಅವರು, ಕಡಿಮೆ ನಿರ್ವಹಣೆ, ಅಧಿಕ ಇಳುವರಿ, ಲಾಭಾಂಶದ ಬೆಳೆಯಾಗಿರುವ ಇದನ್ನು ಬೆಳೆಯಲು ಇತರೆ ಪ್ರೋತ್ಸಾಹ ನೀಡುತ್ತಿದ್ದಾರೆ.

2004ರಲ್ಲಿ ತಮ್ಮ ಜಮೀನಿನಲ್ಲಿ ಮೆಕ್ಕೆಜೋಳ, ಸೂರ್ಯಕಾಂತಿ ಬೆಳೆಯುತ್ತಿದ್ದ ವೇಣುಗೋಪಾಲ ಅವರು, ವರ್ಷಕ್ಕೆ ಎಕರೆಗೆ 25 ರಿಂದ 30 ಸಾವಿರ ರೂ. ಆದಾಯ ಪಡೆಯುತ್ತಿದ್ದರು. ನಂತರ ಆವರಿಸಿದ ಬರಗಾಲದಿಂದ ತತ್ತರಿಸಿದ ಅವರು, ಸಂಬಂಧಿಕರ ಮಾರ್ಗದರ್ಶನದೊಂದಿಗೆ ಮುಂಬೈ, ಔರಂಗಬಾದ್‌ ಸೇರಿದಂತೆ ಮಹಾರಾಷ್ಟ್ರದ ವಿವಿಧ ಪ್ರದೇಶಗಳಿಗೆ ಬೇಟಿ ನೀಡಿ ಡ್ರ್ಯಾಗನ್ ಫ್ರೂಟ್ ಬೆಳೆಯ ಮಾಹಿತಿ ಪಡೆದರು.

ನಂತರ ತಮ್ಮ ಜಮೀನಿನಲ್ಲೂ ಈ ಬೆಳೆಯನ್ನು ಯಾಕೆ ಬೆಳೆಯಬಾರದೆಂದು ಯೋಚಿಸಿ, ಬೆಳೆದು ಯಶಸ್ವಿಯಾಗಿದ್ದಾರೆ.

ಬೆಂಗಳೂರು, ಹೈದರಾಬಾದ್‌, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಇತರೆ ಪ್ರದೇಶಗಳಿಂದ ಆಗಮಿಸುವ ರೈತರು ಜಂಬೋ ರೆಡ್‌ ತಳಿಯ ಡ್ರ್ಯಾಗನ್ ಫ್ರೂಟ್ ಬೆಳೆ ವೀಕ್ಷಿಸಿ ಮಾಹಿತಿ ಪಡೆಯುತ್ತಿದ್ದಾರೆ. ಮಾತ್ರವಲ್ಲ ಹಣ್ಣುಗಳ ಜತೆಗೆ ತಮ್ಮ ಜಮೀನುಗಳಲ್ಲಿ ಕೊಯ್ಲು ಮಾಡಲು ಜಂಬೋ ರೆಡ್‌ ತಳಿಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ.

ಜಿಲ್ಲೆಯ 25 ಹೆಕ್ಟೇರ್ ನಲ್ಲಿ ಡ್ರ್ಯಾಗನ್ ಫ್ರೂಟ್: 2016 ರಲ್ಲಿ 2 ಎಕರೆ ಪ್ರದೇಶದಲ್ಲಿ ಮಾತ್ರ ಆರಂಭವಾದ ಡ್ರ್ಯಾಗನ್ ಫ್ರೂಟ್ ಈವರೆಗೆ ಜಿಲ್ಲೆಯ ನರಗುಂದ ತಾಲೂಕು ಹೊರತುಪಡಿಸಿ ಮುಂಡರಗಿ, ಗದಗ ಗಜೇಂದ್ರಗಡ, ರೋಣ, ಲಕ್ಷ್ಮೇಶ್ವರ, ಶಿರಹಟ್ಟಿ ಭಾಗದ 25ಕ್ಕೂ ಹೆಚ್ಚು ಹೆಕ್ಟೇರ್‌ ಪ್ರದೇಶ ಆವರಿಸಿದೆ.

ಮಸಾರಿಯಲ್ಲಿ ಉತ್ತಮ ಬೆಲೆ: ನೀರು ಸರಾಗವಾಗಿ ಹರಿದು ಹೋಗುವ ಮಾಸರಿ(ಕೆಂಪು) ಭೂಮಿಯಲ್ಲಿ ಡ್ರ್ಯಾಗನ್ ಫ್ರೂಟ್ ಉತ್ತಮವಾಗಿ ಬೆಳೆಯುತ್ತದೆ. ಕಡಿಮೆ ನಿರ್ವಹಣೆ, ಕಡಿಮೆ ನೀರು ಹಾಗೂ ಬರಗಾಲ ಪ್ರದೇಶದಲ್ಲೂ ಬೆಳೆಯಬಹುದಾದ ಬೆಳೆಯಾಗಿದೆ.

ಡ್ರ್ಯಾಗನ್ ಫ್ರೂಟ್ ಕೊಯ್ಲು ಮಾಡಿದ ವರ್ಷದಲ್ಲಿ ಹೂವು ಬಿಡಲು ಆರಂಭಿಸುತ್ತದೆ. ಎರಡನೇ ವರ್ಷದಲ್ಲಿ ಹಣ್ಣು ಬಿಡುತ್ತದೆ.

ಪೋಷಕಾಂಶಗಳ ಆಗರ: ಕಾರ್ಬೋಹೈಡ್ರೇಟ್‌, ಶರ್ಕರ ಪಿಷ್ಠ, ಲವಣಾಂಶ, ವಿಟಮಿನ್‌ ಎ ಮತ್ತು ಸಿ ಹೊಂದಿರುವ ಡ್ರ್ಯಾಗನ್ ಫ್ರೂಟ್ ಪೋಷಕಾಂಶಗಳ ಆಗರವಾಗಿದೆ. ಹೃದಯ ಸಂಬಂಧಿ, ಮಧುಮೇಹ, ರಕ್ತದೊತ್ತಡ, ಯಕೃತ್‌ ಸಮಸ್ಯೆ ಅಷ್ಟೇ ಅಲ್ಲ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಉತ್ತಮ ಹಣ್ಣಾಗಿದೆ. ಜತೆಗೆ ಗರ್ಭಿಣಿಯರಿಗೂ ಉತ್ತಮ ಪೋಷಾಂಶ ಒದಗಿಸುತ್ತದೆ. ಕಜಿ ಹಣ್ಣಿಗೆ 150ರೊಂದ 200 ರೂ. ವರೆಗೆ ಮಾರಾಟವಾಗುತ್ತದೆ.

ಸಹಾಯಧನ ಲಭ್ಯ: ಡ್ರ್ಯಾಗನ್ ಫ್ರೂಟ್ ಬೆಳೆ ಬೆಳೆಯಲು ಮುಂದಾಗುವ ರೈತರಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್‌ ಯೋಜನೆಯಡಿ ಪ್ರತೀ ಹೆಕ್ಟೇರ್‌ ಗೆ 30 ಸಾವಿರ ರೂ. ಸಹಾಯ ಧನ ನೀಡಲಾಗುತ್ತದೆ. ಜತೆಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೂಗ ಖಾತ್ರಿ ಯೋಜನೆಯಡಿ ಎಸ್ಸಿ-ಎಸ್ಟಿ, ಬಿಪಿಎಲ್‌, ಸಣ್ಣ-ಅತೀ ಸಣ್ಣ ರೈತರಿಗೆ ಪ್ರತೀ ಹೆಕ್ಟೇರ್‌ ಗೆ 1.5 ಲಕ್ಷ ರೂ. ಸಹಾಯ ಧನ ನೀಡಲಾಗುತ್ತಿದೆ.

ಡ್ರ್ಯಾಗನ್ ಫ್ರೂಟ್ ಲಾಭ ನೀಡುವ ಬೆಳೆಯಾಗಿದ್ದು, 4 ಎಕರೆ ಪ್ರದೇಶದಲದಲಿ ಬೆಳೆಯಲಾಗಿದೆ. ಮೊದ ಮೊದಲು ಎಕರೆಗೆ 7 ರಿಂದ 8 ಟನ್‌ ಇಳುವರಿ ಇತ್ತು. ಈಗ 20 ರಿಂದ 22 ಟನ್‌ ಇಳುವರಿ ಇದೆ. ಡ್ರ್ಯಾಗನ್ ಫ್ರೂಟ್ ಅನ್ನು ಬೆಂಗಳೂರು, ತುಮಕೂರು, ದಾವಣಗೆರೆ ಸೇರಿದಂತೆ ಬೇಡಿಕೆಯಿರುವ ಜಿಲ್ಲೆಗಳಿಗೆ ಕಳುಹಿಸಲಾಗುತ್ತಿದೆ. – ವೇಣುಗೋಪಾಲ ಮಣ್ಣೆ, ಗಂಗಾಪೂರಾ ಗ್ರಾಮದ ರೈತ

ಡ್ರ್ಯಾಗನ್ ಫ್ರೂಟ್ ಬರಗಾಲ ಪ್ರದೇಶದಲ್ಲಿ ಬೆಳೆಯುವಂತಹ ಸೂಕ್ತ ಬೆಳೆಯಾಗಿದೆ. ಜಿಲ್ಲೆಯ ರೈತರು ಡ್ರ್ಯಾಗನ್ ಫ್ರೂಟ್ ಬೆಳೆಯಲು ಮುಂದೆ ಬರುತ್ತಿದ್ದಾರೆ. ಅವರಿಗೆ ತೋಟಗಾರಿಕೆ ಇಲಾಖೆಯಿಂದ ಸಹಾಯಧನ ನೀಡಲಾಗುತ್ತಿದೆ. –ಸುರೇಶ ಕುಂಬಾರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು.

-ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.