ಮುಗ್ಧ ಜನರ ದಾರಿ ತಪ್ಪಿಸಬೇಡಿ: ಪಾಟೀಲ


Team Udayavani, Mar 13, 2021, 4:03 PM IST

ಮುಗ್ಧ ಜನರ ದಾರಿ ತಪ್ಪಿಸಬೇಡಿ: ಪಾಟೀಲ

ಹೊಳೆಆಲೂರ: ಸಮೀಪದ ಗಾಡಗೋಳಿ ನವ ಗ್ರಾಮದಲ್ಲಿ ಮನೆ ಹಂಚಿಕೆ ಸಂಬಂಧಸಾರ್ವಜನಿಕರು ಬುಧವಾರ ರೋಣದಲ್ಲಿಸತ್ಯಾಗ್ರಹ ನಡೆಸಿರುವುದರ ಹಿಂದೆ ಕ್ಷೇತ್ರದ ವಿರೋಧ ಪಕ್ಷದ ನಾಯಕರ ಕೈವಾಡವಿದೆ ಎಂದು ಸಚಿವ ಸಿ.ಸಿ.ಪಾಟೀಲ ಗರಂ ಆದ ಘಟನೆ ಗಾಡಗೋಳಿ ಗ್ರಾಮದಲ್ಲಿ ಶುಕ್ರವಾರ ನಡೆಯಿತು.

ಮೆಣಸಗಿ ಗ್ರಾಮದಲ್ಲಿ 98.18 ಲಕ್ಷ, ಹೊಳೆಮಣ್ಣೂರ ಗ್ರಾಮದಲ್ಲಿ 58.12 ಲಕ್ಷ ಹಾಗೂ ಗಾಡಗೋಳಿ 45.94 ಲಕ್ಷ ವೆಚ್ಚದಲ್ಲಿ ಜಲ ಜೀವನ್‌ ಮಷಿನ್‌ ಯೋಜನೆಯಡಿ ಶುದ್ಧ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಸಚಿವರು ಮಾತನಾಡಿದರು.

2009ರಲ್ಲಿ ಸಂಭವಿಸಿದ ಮಲಪ್ರಭಾ  ಪ್ರವಾಹದಲ್ಲಿ ಮನೆ ಕಳೆದುಕೊಂಡ 14ಗ್ರಾಮಗಳ ಜನರಿಗೆ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಮನೆ ನಿರ್ಮಿಸಿ ಹಂಚಿಕೆ ಮಾಡಿದೆ. ಆದರೆ ಸ್ಥಳೀಯ ಕಾರಣದಿಂದ ಗಾಡಗೋಳಿ ಹಾಗೂಹೊಳೆಮಣ್ಣೂರ ಗ್ರಾಮದಲ್ಲಿ ಹಂಚಿಕೆ ಕಾರ್ಯನನೆಗುದಿಗೆ ಬಿದ್ದಿತ್ತು. ನಂತರ ಐದು ವರ್ಷ ಅಧಿ  ಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷದ ನಿಮಗೆ ಮನೆ ಹಂಚಿಕೆ ಮಾಡುವುದನ್ನು ಬಿಟ್ಟು ಈಗ ತಾಪಂ, ಜಿಪಂ ಚುನಾವಣೆ ಗಮನದಲ್ಲಿಟ್ಟುಕೊಂಡು ಮುಗ್ಧ ಜನರನ್ನು ದಾರಿ ತಪ್ಪಿಸಿ ನೀವೇ ಸತ್ಯಾಗ್ರಹಕ್ಕೆ ಪ್ರೇರೇಪಿಸಿ ನಂತರ ಸಮಾಧಾನಮಾಡುವ ನಾಟಕ ಮಾಡುತ್ತೀರಿ. ಇಂತಹರಾಜಕಾರಣ ನನ್ನ ಮುಂದೆ ನಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ನೀವು ರಾಜಕಾರಣ ಮಾಡುತ್ತಾ ಹೋಗಿ, ನಾನು ಅಭಿವೃದ್ಧಿ ಕೆಲಸ ಮಾಡುತ್ತಾ ಸಾಗುತ್ತೇನೆಎಂದು ಹೆಸರು ಹೇಳದೆ ಮಾಜಿ ಶಾಸಕರಮೇಲೆ ಹರಿಹಾಯ್ದರು. ಮಾ.31ರ ವರೆಗೆ ಅಧಿವೇಶನದಲ್ಲಿ ಭಾಗವಹಿಸುತ್ತೇನೆ. ನಂತರ ಏಪ್ರಿಲ್ ಮೂದಲನೆಯ ವಾರ ಗಾಡಗೋಳಿ ಹಾಗೂ ಹೊಳೆಮಣ್ಣೂರ ಗ್ರಾಮಕ್ಕೆ ಸ್ವತಃನಾನೇ ಆಗಮಿಸಿ ಅ ಧಿಕಾರಿಗಳ ಸಮ್ಮುಖದಲ್ಲಿ ಸಾರ್ವಜನಿಕರ ಸಭೆ ಮಾಡಿ 10 ವರ್ಷಗಳಮನೆ ಹಂಚಿಕೆಯ ಈ ಕಗ್ಗಂಟಿಗೆ ನ್ಯಾಯಯುತಮಂಗಳ ಹಾಡುತ್ತನೆ. ನಾನು ತಪ್ಪಿದರೆನರಗುಂದದ ನನ್ನ ಮನೆ ಮುಂದೆ ಧರಣಿ ಸತ್ಯಾಗ್ರಹ ಮಾಡಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿ.ಪಂ, ಸದಸ್ಯಶಿವಕುಮಾರ ನೀಲಗುಂದ, ಬಿಜೆಪಿ ಜಿಲ್ಲಾಹಿಂದುಳಿದ ಮೊರ್ಚಾ ಅಧ್ಯಕ್ಷ ಅಶೋಕ ಹೆಬ್ಬಳ್ಳಿ, ಹೊಳೆಆಲೂರ ಮಂಡಲ ಅಧ್ಯಕ್ಷ ಮುತ್ತಣ್ಣ ಜಂಗಣ್ಣವರ, ಜಿಲ್ಲಾ ಕಿಸಾನ ರೈತ ಮೊರ್ಚಾ ಉಪಾಧ್ಯಕ್ಷ ಶಶಿಧರಗೌಡ ಪಾಟೀಲ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಸಿ.ಪಾಟೀಲ,ನಿಂಗಬಸು ಬಾಣದ, ಬಸವಂತಪ್ಪ ತಳವಾರ, ತಾ.ಪಂ. ಅಧ್ಯಕ್ಷೆ ಪ್ರೇಮಾ ನಾಯಕ, ಸದಸ್ಯ ಜಗದೀಶ ಬ್ಯಾಡಗಿ, ಎ.ಪಿ.ಕುಲಕರ್ಣಿ,ಸೋಮು ಹುಡೇದಮನಿ, ವೀರಸಂಗಯ್ಯ ಮೊಕಾಸಿಮಠ. ಗ್ರಾ.ಪಂ. ಅಧ್ಯಕ್ಷ ಲಿಂಗಬಸು ಅಂಗಡಿ ಇತರರು ಭಾಗವಹಿಸಿದ್ದರು.

 

ಹತ್ತು ಕುಟುಂಬಗಳಿಗೆ ತಕ್ಷಣ ಮನೆ ನೀಡಿ :

ಮೆಣಸಗಿ ಮೂಲ ಗ್ರಾಮದಲ್ಲಿ ನಮಗೆ ಯಾವುದೇ ಮನೆ ಇರಲಿಲ್ಲ. ಹೀಗಾಗಿ, ನಮ್ಮ ಹೆಸರಿನಲ್ಲಿಯಾವದೇ ಉತಾರ ಇಲ್ಲ. ಆದರೆ, ನವ ಗ್ರಾಮದಲ್ಲಿ 11 ವರ್ಷದಿಂದ ನಾವು ಬಂದು ನೆಲೆಸಿದ್ದು,ಗ್ರಾ.ಪಂ.ನವರು ನಮಗೆ ಮನೆ ಬಿಡಿ ಎಂದು ತಾಕೀತು ಮಾಡುತ್ತಿದ್ದಾರೆ. ನಿರ್ಗತಿಕರಾದ ನಾವು ಎಲ್ಲಿಹೋಗಬೇಕು ಎಂದು 10 ಜನರು ಸಚಿವರ ಮುಂದೆ ಬೇಡಿಕೊಂಡರು. ಅವರ ಮನವಿಗೆ ಸ್ಪಂದಿಸಿದ ಸಚಿವ ಸಿ.ಸಿ.ಪಾಟೀಲ, ಪಿಡಿಒ ಅವರನ್ನು ಸ್ಥಳಕ್ಕೆ ಕರೆಸಿ ನವ ಗ್ರಾಮದಲ್ಲಿ ಹೆಚ್ಚುವರಿಯಾಗಿರುವ 39 ಮನೆಗಳಲ್ಲಿ ಈ ಹತ್ತು ಕುಟುಂಬಗಳಿಗೆ ತಕ್ಷಣ ಮನೆ ನೀಡಿ ಎಂದು ಸೂಚನೆ ನೀಡಿದರು.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.