ಭೂಮಿಯಲ್ಲಿ ತೇವಾಂಶ ಕೊರತೆ: ಬಾಡುತ್ತಿದೆ ಹಿಂಗಾರು ಬೆಳೆ


Team Udayavani, Nov 14, 2018, 4:43 PM IST

14-november-18.gif

ನರೇಗಲ್ಲ: ಮುಂಗಾರು ವೈಫಲ್ಯದಿಂದ ಸಂಕಷ್ಟದ ಸ್ಥಿತಿಯಲ್ಲಿರುವ ಹೋಬಳಿ ಅನ್ನದಾತರಿಗೆ ಮತ್ತೊಂ ದು ಸಂಕಷ್ಟ ಎದುರಾಗಿದೆ. ಮಳೆ ಅಭಾವದಿಂದ ನರೇಗಲ್ಲ ಹೋಬಳಿ ವ್ಯಾಪ್ತಿಯಲ್ಲಿ ಶೇ. 75ಕ್ಕೂ ಹೆಚ್ಚು ಭೂಮಿಯಲ್ಲಿ ಹಿಂಗಾರು ಬಿತ್ತನೆಯಾಗಿಲ್ಲ. ಭೂಮಿಯಲ್ಲಿ ಅಲ್ಪಸ್ವಲ್ಪ ಬಿತ್ತನೆಯಾಗಿದ್ದರೂ ತೇವಾಂಶದ ಕೊರತೆಯಿಂದ ಬಿತ್ತಿದ ಬೆಳೆಗಳೆಲ್ಲ ನಾಟಿ ಹಂತದಲ್ಲಿಯೇ ಬಿಸಿಲಿನ ಧಗೆಗೆ ಬಾಡಲಾರಂಭಿಸಿವೆ.

ಹಿಂಗಾರು ಹಂಗಾಮಾದರೂ ಒಂದಿಷ್ಟು ಕೈ ಹಿಡಿದೀತು ಎಂಬ ನಿರೀಕ್ಷೆ ರೈತರದಾಗಿತ್ತು. ಹಿಂಗಾರು ಮಳೆಗಳೆಲ್ಲವೂ ಅವಕೃಪೆ ತೋರಿದ ಕಾರಣ ಪ್ರಸಕ್ತ ಕೃಷಿ ಚಟುವಟಿಕೆಗಳು ಸ್ತಬ್ಧಗೊಂಡಿವೆ. ಪ್ರಮುಖ ಮಳೆಗಳಾದ ಹುಬ್ಬೆ, ಉತ್ತರೆ, ಹಸ್ತ, ಚಿತ್ತಿ, ಸ್ವಾತಿ ಮಳೆಗಳು ಸಂಪೂರ್ಣ ಕೈಕೊಟ್ಟಿದ್ದರಿಂದ ಬೀಜ, ಗೊಬ್ಬರಕ್ಕೆ ಖರ್ಚು ಮಾಡಿ ಬಿತ್ತನೆ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದು ಬಹುತೇಕ ರೈತರು ಬಿತ್ತನೆ ಮಾಡುವ ಗೋಜಿಗೆ ಹೋಗಲಿಲ್ಲ. ಮುಂದೆ ಮಳೆಯಾಗಬಹುದು ಎಂಬ ಆಶಾಭಾವನೆಯಿಂದ ಅಲ್ಪಸ್ವಲ್ಪ ರೈತರು ಬಿತ್ತನೆ ಮಾಡಿದರಾದರೂ ಮಳೆಯಾಗದ ಕಾರಣ ಭೂಮಿಯಲ್ಲಿ ತೇವಾಂಶದ ಕೊರತೆಯಾಗಿ ಬಿತ್ತಿದ ಬೆಳೆಗಳೆಲ್ಲ ಬಾಡಲಾರಂಭಿಸಿವೆ.

23,500 ಸಾವಿರ ಹೆಕ್ಟೇರ್‌ ಬಿತ್ತನೆ: ನರೇಗಲ್ಲ ಹೋಬಳಿ ವ್ಯಾಪ್ತಿಯಲ್ಲಿ 32 ಸಾವಿರ ಹೆಕ್ಟೇರ್‌ ಒಣಬೇಸಾಯದ ಹಿಂಗಾರು ಬಿತ್ತನೆಗೆ ಗುರಿ ಹೊಂದಲಾಗಿತ್ತು. ಆದರೆ, ಇದುವರೆಗೂ ಬಿತ್ತನೆಯಾದ ಕ್ಷೇತ್ರ 23,500 ಸಾವಿರ ಹೆಕ್ಟೇರ್‌ ಎಂದು ಕೃಷಿ ಇಲಾಖೆ ಮೂಲಗಳು ಹೇಳಿವೆ. ವಾಸ್ತವಾಗಿ ಈ ಪ್ರಮಾಣದ ಬಿತ್ತನೆಯಾಗಿಲ್ಲ ಎಂಬುದು ರೈತರ ಅಭಿಪ್ರಾಯವಾಗಿದೆ. ಬಿತ್ತನೆಯಾದ 23,500 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ 5 ಸಾವಿರ ಹೆಕ್ಟೇರ್‌ ಜೋಳ, 18 ಸಾವಿರ ಹೆಕ್ಟೇರ್‌ ಕಡಲೆ, 500 ಹೆಕ್ಟೇರ್‌ ಕ್ಷೇತ್ರದಲ್ಲಿ ಗೋವಿನ ಜೋಳ, ಸೂರ್ಯಕಾಂತಿ, ಕುಸುಬೆ ಸೇರಿದಂತೆ ಇತರೆ ಬೆಳೆ ಬಿತ್ತಲಾಗಿದೆ ಎಂದು ಕೃಷಿ ಅಧಿಕಾರಿ ಸಾವಿತ್ರಿ ಶಿವನಗೌಡ್ರ ತಿಳಿಸಿದ್ದಾರೆ. ಬಿತ್ತಿದ ಬೆಳೆಗಳೆಲ್ಲವೂ ಬಾಡುವ ಹಂತದಲ್ಲಿದ್ದರೂ ಮುಂದೆ ಮಳೆಯಾಗಬಹುದೆಂಬ ಭರವಸೆಯೊಂದಿಗೆ ಕೀಟ ನಿಯಂತ್ರಣಕ್ಕೆ ರೈತರು ಕ್ರಿಮಿನಾಶಕ ಔಷಧ ಸಿಂಪರಣೆ ಮಾಡುವಲ್ಲಿ ನಿರತರಾಗಿದ್ದಾರೆ. ಇದರಿಂದ ರೈತರ ಸಾಲದ ಮೊತ್ತ ಮತ್ತಷ್ಟು ಹೆಚ್ಚುತ್ತಲೇ ಇದೆ.

ಬಿತ್ತನೆಯಾದ ಬೆಳೆ ಉಳಿಯಬೇಕಾದರೆ ಕಾರ್ತಿಕ ಮಳೆ ಉತ್ತಮವಾಗಿ ಸುರಿದರೆ ಮಾತ್ರ ಹಿಂಗಾರು ಹಂಗಾಮು ಅಷ್ಟು ಇಷ್ಟು ಫಸಲು ನೀಡಲಿದೆ. ಇಲ್ಲದಿದ್ದರೆ ಬೆಳೆಗಳು ಹಾನಿಗೀಡಾಗಿ ಜನರಿಗೆ ಕಾಳು, ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿ ಕೃಷಿ ಕಾರ್ಮಿಕರು ಕೆಲಸ ಹುಡುಕಿಕೊಂಡು ಗುಳೆ ಹೋಗುವುದು ಅನಿವಾರ್ಯವಾಗಲಿದೆ.

ಬಿತ್ತನೆಗಾಗಿ ಸಾವಿರಾರು ರೂಪಾಯಿ ಖರ್ಚು ಮಾಡಿದ ರೈತರ ಮುಖದಲ್ಲಿ ಚಿಂತೆಯ ಕಾರ್ಮೋಡಗಳು ಕವಿಯಲಾರಂಭಿಸಿವೆ. ಬಿತ್ತನೆ ಸಂದರ್ಭದಲ್ಲಿ ಅಲ್ಪಸ್ವಲ್ಪ ಮಳೆಯಾಗಿದ್ದರಿಂದ ಹಸಿಯಾಗಿದ್ದ ಭೂಮಿಯಲ್ಲಿ ಬೀಜಗಳು ಮೊಳಕೆ ಒಡೆದು ನೆಲ ಬಿಟ್ಟು ಮೇಲೆ ಬಂದಿದ್ದು, ಈ ಸಮಯದಲ್ಲಿ ಮಳೆಯಾಗದಿದ್ದರೆ ಬೆಳೆಗಳು ತೇವಾಂಶ ಕೊರತೆಯಿಂದ ಬಿಸಿಲಿಗೆ ಕಮರಿ ಹೋಗುತ್ತಿರುವುದು ನಡೆದಿದೆ.
ಯಲ್ಲಪ್ಪ ಕುರಿ, ನರೇಗಲ್ಲ ರೈತ

ಒಂದು ವಾರದೊಳಗೆ ಭೂಮಿ ಹಸಿಯಾಗುವಷ್ಟು ಮಳೆ ಬಾರದಿದ್ದರೆ ಬೆಳೆದು ನಿಂತ ಬೆಳೆಗಳು ಕಮರಿಹೋಗಲಿವೆ. ಸಾಲ ಮಾಡಿ ಬಿತ್ತನೆ ಮಾಡಿದ್ದರೂ ಮಳೆ ಬಾರದಿದ್ದರೆ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವ ಪರಿಸ್ಥಿತಿ ಬರಲಿದೆ.
ರಮೇಶ ಹತ್ತಿಕಟ್ಟಗಿ, ರೈತ 

ಸಿಕಂದರ ಎಂ. ಆರಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.