ಡಂಬಳ ಗ್ರಂಥಾಲಯಕ್ಕೆ ಧೂಳಿನ ಮಜ್ಜನ!


Team Udayavani, Dec 2, 2019, 2:19 PM IST

gadaga-tdy-1

ಮುಂಡರಗಿ: ವಾಹನ ಸಂಚಾರದ ಧೂಳಿನಿಂದ ಧೂಳು ತಿನ್ನುತ್ತಿರುವ ಪುಸ್ತಕಗಳು..ಸುತ್ತಲೂ ಬೆಳೆದ ಗಿಡಗಂಟಿ, ಕಸದಿಂದ ಸೊಳ್ಳೆಗಳ ನೀನಾದ. ಸೋರುತ್ತಿರುವ ಮೇಲ್ಛಾವಣೆ, ವಿದ್ಯುತ್‌ ಸಂಪರ್ಕವಿಲ್ಲದೇ ಕತ್ತಲೆ ವಾತಾವರಣ. ಇದು ಡಂಬಳದ ಸಾರ್ವಜನಿಕ ಗ್ರಂಥಾಲಯದ ದುಸ್ಥಿತಿ.

ಈ ಗ್ರಂಥಾಲಯ ರಸ್ತೆ ಪಕ್ಕದಲ್ಲಿಯೇ ಇದ್ದು, ನಿತ್ಯ ಸಂಚರಿಸುವ ವಾಹನಗಳಿಂದ ಪುಸ್ತಕಗಳೆಲ್ಲವೂ ಧೂಳುಮಯವಾಗಿವೆ. ಧೂಳಿನಿಂದಾಗಿ ಟೇಬಲ್‌ ಮೇಲೆ ಪತ್ರಿಕೆಗಳನ್ನಿಡಲುಕುರ್ಚಿಗಳಲ್ಲಿ ಓದುಗರು ಕುಳಿತುಕೊಳ್ಳಲು ಹಿಂಜರಿಯುವ ವಾತಾವರಣವಿದ್ದು, ಧೂಳಿನಲ್ಲಿಯೇ ಅನಿವಾರ್ಯವಾಗಿ ಓದುಗರು ಪತ್ರಿಕೆ ಓದುವ ಪರಿಸ್ಥಿತಿ ಎದುರಾಗಿದೆ.

ಗ್ರಂಥಾಲಯದ ಸುತ್ತಲೂ ಕಸ ಬೆಳೆದಿದೆ. ಮುಂದೆ ಇರುವ ಚರಂಡಿ ಮತ್ತುಆವರಣದಲ್ಲಿರುವ ಕಸದಿಂದ ಸೊಳ್ಳಗಳ ಕಾಟ ಹೆಚ್ಚಾಗಿದ್ದು, ಓದುಗರು ನೆಮ್ಮದಿಯಿಂದ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. 1992ರಲ್ಲಿ ಪ್ರಾರಂಭವಾಗಿರುವ ಗ್ರಂಥಾಲಯ ಕಳೆದ 27 ವರ್ಷಗಳಿಂದಲೂ ಗ್ರಾಪಂ ಕಟ್ಟಡದಲ್ಲಿಯೇ ಗ್ರಂಥಾಲಯವಿದೆ.

ಗ್ರಂಥಾಲಯದ ಮೇಲ್ಛಾವಣಿಗೆ ಸಿಮೆಂಟ್‌ ಸೀಟು ಹಾಕಿದ್ದು, ಮಳೆಗಾಲದಲ್ಲಿ ಸೋರುತ್ತಿರುವುದು ಒಂದೆಡೆಯಾದರೆ ವಿದ್ಯುತ್‌ ಸಂಪರ್ಕವಿಲ್ಲದೇ ಲೈಟುಗಳು ಬೆಳಗದಿರುವುದು ಇನ್ನೊಂದೆಡೆ.

ಸ್ಫರ್ಧಾತ್ಮಕ ಪುಸ್ತಕಮಾಸಪತ್ರಿಕೆಗಳೇ ಇಲ್ಲ: ಗ್ರಂಥಾಲಯದ ಅವಧಿ ಬೆಳಗ್ಗೆ ಎರಡು ತಾಸು ಮತ್ತು ಸಂಜೆ ಎರಡು ತಾಸು ಎಂದು ನಿಗದಿಯಾಗಿದ್ದರೂ ಮುಂಜಾನೆಯಿಂದ ಸಂಜೆಯವರೆಗೂ ಗ್ರಂಥಾಲಯ ತೆರೆದಿರುವುದು ಸಮಾಧಾನದ ಸಂಗತಿ. ಗ್ರಾಮದಲ್ಲಿ ಅಂದಾಜು 15 ಸಾವಿರ ಜನಸಂಖ್ಯೆಇದೆ. ಜೊತೆಗೆ ರಾಣಿ ಚನ್ನಮ್ಮ ವಸತಿ ಶಾಲೆ,ಕಸ್ತೂರ ಬಾ ವಸತಿ ಶಾಲೆ, ಎರಡು ಮೆಟ್ರಿಕ್‌ಪೂರ್ವ ವಸತಿ ನಿಲಯಗಳು, ಒಂದು ಖಾಸಗಿ ಪ್ರೌಢಶಾಲೆ, ಒಂದು ಪ.ಪೂ ಕಾಲೇಜು, ಒಂದು ಕೈಗಾರಿಕಾ ತರಬೇತಿ ಸಂಸ್ಥೆ ಕೂಡ ಇದೆ.ಆದರೆ ಗ್ರಾಮದ ಯುವಕರು, ವಿದ್ಯಾರ್ಥಿಗಳುಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಪುಸ್ತಕಗಳುಮಾಸಪತ್ರಿಕೆಗಳೇ ಇಲ್ಲಿಲ್ಲ.

ತೀರದ ಜ್ಞಾನದಾಹ: ಗ್ರಾಮೀಣ ಪ್ರದೇಶದ ಗ್ರಂಥಾಲಯಗಳಿಗೆ ದಿನಪತ್ರಿಕೆ ಕೊಳ್ಳಲು ಮಾಸಿಕವಾಗಿ ಬರುವ ಅನುದಾನವೇ ಬರೀ 400 ರೂ. ಅದು ಮೂರು ದಿನಪತ್ರಿಕೆ ಕೊಳ್ಳಲು ಸಾಧ್ಯವಾಗುತ್ತದೆ. ಕರ್ನಾಟಕ ಸರಕಾರದ ಜನಪದ, ಕರ್ನಾಟಕ ವಿಕಾಸ ಎಂಬ ಎರಡು ಮಾಸಿಕ ಪತ್ರಿಕೆಗಳು ಬರುತ್ತವೆ. ಈ ಐದು ಪತ್ರಿಕೆಗಳಲ್ಲಿಯೇ ಗ್ರಾಮದ ಓದುಗರು, ವಿದ್ಯಾರ್ಥಿಗಳು, ಯುವಜನರು ಜ್ಞಾನದಾಹ ಇಂಗಿಸಿಕೊಳ್ಳಬೇಕಿದೆ.

ಗೆದ್ದಲು ಹುಳುಗಳ ಕಾಟ: ಗ್ರಂಥಾಲಯದ ಸುತ್ತಲೂ ಕಸ ಬೆಳೆದಿರುವುದರಿಂದ ಗೋಡೆಗಳಿಗೆ ಗೆದ್ದಲು ಹುಳುಗಳ ಕಾಟ ಹೆಚ್ಚಾಗಿದೆ. ಈ ಕಾರಣಕ್ಕಾಗಿಯೇ ಸುಮಾರು 5 ಸಾವಿರಕ್ಕೂ ಹೆಚ್ಚಿನ ಪುಸ್ತಕಗಳನ್ನು ಗಂಟುಕಟ್ಟಿ ಚೀಲದಲ್ಲಿಡಲಾಗಿದೆ.

ಪುಸ್ತಕ ಆಯ್ಕೆಯೇ ಸಮಸ್ಯೆ: ಕಾಯಂ ಸದಸ್ಯರು 236 ಜನರು ಇದ್ದು, ಪ್ರತಿದಿನವೂಇಬ್ಬರು ಇಲ್ಲವೇ ಮೂರು ಜನ ಎರವಲು ಗ್ರಂಥಗಳನ್ನು ಮನೆಗೆ ತೆಗೆದುಕೊಂಡುಹೋಗುತ್ತಾರೆ. ಗಂಟು ಇಲ್ಲವೇ ಚೀಲದಲ್ಲಿ ಪುಸ್ತಕಗಳನ್ನು ಕಟ್ಟಿ ಇಟ್ಟಿರುವುದರಿಂದಾಗಿ ಪುಸ್ತಕ ಎರವಲು ತೆಗೆದುಕೊಂಡು ಹೋಗುವಾಗ ಆಯ್ಕೆ ಮಾಡುವುದೇ ದೊಡ್ಡ ತೆಲೆನೋವು. ರಸ್ತೆಯಿಂದ ದೂರವಿರುವ ಸುಸಜ್ಜಿತ ಪಂಚಾಯಿತಿ ಆವರಣದಲ್ಲಿರುವ ಕಟ್ಟಡಕ್ಕೆ ಗ್ರಂಥಾಲಯ ಸ್ಥಳಾಂತರಿಸಿದರೆ ಓದುಗರಿಗೆ ಅನುಕೂಲವಾಗಲಿದೆ. ಧೂಳಿನಿಂದ ಓದುಗರು ಮುಕ್ತಿ ಪಡೆದು ನೆಮ್ಮದಿಯಿಂದ ಕುಳಿತು ಓದಲು ಅನುಕೂಲವಾಗಲಿದ್ದು, ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆಯೂ ಓದುಗರು ಒತ್ತಾಯಿಸುತ್ತಿದ್ದಾರೆ. ಗ್ರಾಪಂ ಕೂಡ ಗ್ರಂಥಾಲಯಕ್ಕೆ ಅನುದಾನ ನೀಡಿದರೆ ಮತ್ತಷ್ಟು ಬಲ ಬರುತ್ತದೆ ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯ.

 

-ಹು.ಬಾ.ವಡ್ಡಟ್ಟಿ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.