ಇಟಗಿ-ಸಾಸರವಾಡ ನೀರಾವರಿ ಯೋಜನೆಗೆ ಗ್ರಹಣ?


Team Udayavani, Jan 17, 2020, 3:19 PM IST

gadaga-tdy-1

ಶಿರಹಟ್ಟಿ: ತಾಲೂಕಿನ ಹೊಳೆ-ಇಟಗಿ ಗ್ರಾಮದ ಹತ್ತಿರ 2006ರಲ್ಲಿ ಇಟಗಿ-ಸಾಸರವಾಡ ಏತ ನೀರಾವರಿ ಯೋಜನೆ ಸಮಸ್ಯೆಗಳ ಸುಳಿಗೆ ಸಿಲುಕಿದೆ.

ರೈತರ ಹಿತ ಕಾಯುವುದಕ್ಕಾಗಿ ತಾಲೂಕಿನಲ್ಲಿರುವ ತುಂಗಭದ್ರಾ ನದಿ ನೀರನ್ನು ಸದ್ಬಳಕೆ ಮಾಡಿಕೊಂಡು ನೀರಾವರಿ ಯೋಜನೆ ಅರಂಭಿಸಲಾಗಿತ್ತು. ರೈತರ ಮೊಗದಲ್ಲಿ ಮಂದಹಾಸ ಮೂಡಿಸಬೇಕಾದ ಯೋಜನೆ ಹಳ್ಳ ಹಿಡಿದಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ.

14 ಗ್ರಾಮಗಳ 4000 ಹೆಕ್ಟೇರ ಪ್ರದೇಶ ನೀರಾವರಿ: ಯೋಜನೆಯಿಂದ ಇಟಗಿ-ಸಾಸರವಾಡ, ತಂಗೋಡ, ಕನಕವಾಡ, ಹೆಬ್ಟಾಳ, ಚೌಡಾಳ, ಬಸ್ಸಾಪುರ, ತೊಳಲಿ, ಕಲ್ಲಾಗನೂರ ಸೇರಿದಂತೆ ಒಟ್ಟು 11 ಗ್ರಾಮಗಳ ರೈತರ ಜಮೀನಿಗೆ ನೀರಾವರಿ ಒದಗಿಸಿ 1984 ಹೆಕ್ಟೇರ್‌ ನೀರಾವರಿಗೆ ಒಳಪಡಿಸುವ ಸಾಮರ್ಥ್ಯವನ್ನು ಈ ಯೋಜನೆಯಲ್ಲಿ ಅಳವಡಿಸಲಾಗಿದೆ. ಆದರೆ ವಿಪರ್ಯಾಸವೆಂದರೆ ಆರಂಭವಾದಾಗಿನಿಂದಲೂ ಒಂದಿಲ್ಲ ಒಂದು ಸಮಸ್ಯೆಯ ಸುಳಿಯಲ್ಲಿ ಸಿಲುಕುತ್ತಾ ಬಂದಿದೆ. ಆದರೆ ಒಂದು ಹನಿ ನೀರು ರೈತರ ಜಮೀನುಗಳಿಗೆ ತಲುಪಿಲ್ಲ. ರೈತರ ಆಶಾದಾಯಕವಾದ ಈ ಯೋಜನೆಗೆ ಅನುಷ್ಠಾನ ಎಂದು? ಎನ್ನುವ ಪ್ರಶ್ನೆ ಸದಾ ಕಾಡುತ್ತಿದೆ.

ಕಾಲುವೆ ತುಂಬೆಲ್ಲ ಮುಳ್ಳಿನ ಕಂಟೆಗಳು: ತಾಲೂಕಿನ ಇಟಗಿ ಗ್ರಾಮದಲ್ಲಿ ನಿರ್ಮಾಣವಾದಂತಹ ಈ ಯೋಜನೆಯಿಂದ ನಿರ್ಮಾಣವಾದ ಜಾಕ್‌ವೆಲ್‌ ಮೂಲ ಸ್ಥಿತಿಯಿಂದ ಸಾಕಷ್ಟು ದುರಸ್ತಿಯಲ್ಲಿದೆ. ಅಲ್ಲಿ ಸರಿಯಾದ ನಿರ್ವಹಣೆ ಇಲ್ಲದೇ ಅಲ್ಲಿರುವ ಸಾಮಗ್ರಿಗಳು ಇಲ್ಲದಾಗಿವೆ. ಸಭೆಯಲ್ಲಿ ಹೆಬ್ಟಾಳ ಜಿಪಂ ಸದಸ್ಯ ಈಶ್ವರಣ್ಣ ಹುಲ್ಲಲ್ಲಿ ತುಂಗಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಯೋಜನೆಯಸ್ಥಿತಿಗತಿಗೆ ಛೀಮಾರಿ ಹಾಕಿದರು. ಯೋಜನೆಯ ಅಭಿವೃದ್ಧಿಗಾಗಿ ಮತ್ತು ದುರಸ್ತಿಗಾಗಿ ಸಾಕಷ್ಟು ಅನುದಾನವಿದ್ದರು ಸಹಿತ ಕುಂಟು ನೆಪ ಹೇಳುತ್ತಾ ಬರುತ್ತಿದ್ದಾರೆ. ಹಲವಾರು ಗಡುವುಗಳನ್ನು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಒಡೆದ ಕಾಲುವೆ: ಸತತ ಬರಗಾಲದಿಂದ ತತ್ತರಿಸುತ್ತಿರುವ ರೈತ ಸಮೂಹ ಮಳೆಯಿಲ್ಲದೇ ಬದುಕು ಬರಡಾಗಿದೆ. ನೀರಾವರಿ ಯೋಜನೆ ಆಶ್ರಯ ನೀಡುತ್ತದೆ ಎಂದರೆ ಅದು ಮರೀಚಿಕೆಯಾಗಿದೆ. 10 ಹತ್ತು ವರ್ಷಗಳಿಂದ ಒಂದು ಹನಿ ನೀರು ಬಂದಿಲ್ಲ. ತುಂಗಭದ್ರಾ ನದಿಯನ್ನು ಸಮರ್ಪಕವಾಗಿ ಬಳಕೆ ಮಾಡುವ ಸಾಕಷ್ಟು ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸಲಾಗುತ್ತಿದೆ. ಈ ಭಾರಿ ಮುಂಗಾರು ಮಳೆಯ ಮತ್ತು ಹಿಂಗಾರು ಮಳೆ ರೈತರಿಗೆ ಅನುಕೂಲವಾಗಿದ್ದರೂ ಕೈಯಲ್ಲಿರುವ ಬೆಣ್ಣೆ ಬಿಟ್ಟು ಪಕ್ಕದ ಮನೆಯಲ್ಲಿ ತುಪ್ಪಕ್ಕಾಗಿ ಅಂಗಲಾಚಿದಂತಾಗಿದೆ. ಸದ್ಯ ಕಾಲುವೆ ಒಡೆದು ನೀರು ಪೋಲಾಗಿದೆ. ಆದರೆ ಈವರೆಗೆ ಅಧಿಕಾರಿಗಳು ಗಮನ ಹರಿಸದೇ ಇರುವುದು ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

 

-ಪ್ರಕಾಶ.ಶಿ.ಮೇಟಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.