ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ: ಶ್ರೀರಾಮುಲು ಭರವಸೆ
Team Udayavani, Mar 13, 2022, 3:04 PM IST
ಶಿರಹಟ್ಟಿ (ಗದಗ): ಸಂಸ್ಥೆಯ ಸಿಬ್ಬಂದಿಗಳ ಬಹುದಿಗಳ ಬೇಡಿಕೆಯಾದ ವೇತನ ಪರಿಷ್ಕರಣೆ ಜೊತೆಗೆ ಮುಷ್ಕರದ ವೇಳೆ ಅಮಾನತುಗೊಂಡವರನ್ನು ಮೂಲ ಸ್ಥಾನಕ್ಕೆ ನಿಯೋಜಿಸಲು ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದರು.
ಶಿರಹಟ್ಟಿಯಲ್ಲಿ ನೂತನ ಸಾರಿಗೆ ಘಟಕ ಉದ್ಘಾಟನೆ ಹಾಗೂ ವಾಯುವ್ಯ ಸಾರಿಗೆ ನಿಗಮದ ಒಂಬತ್ತು ವಿಭಾಗಗಳ ಅಪಘಾತ ರಹಿತ ಚಾಲಕರಿಗೆ ಬಂಗಾರ ಮತ್ತು ಬೆಳ್ಳಿ ಪದಕ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜೀವನವೆಂಬ ಯುದ್ಧದಲ್ಲಿ ಸಾರಿಗೆ ಬಸ್ ಚಾಲಕರು ಶ್ರೀಕೃಷ್ಣನಂತೆ ಸಾರಥಿಯಾಗಿದ್ದಾರೆ. ದಿನ ನಿತ್ಯ ಸಂಚಾರದಲ್ಲಿ ಪ್ರಯಾಣಿಕರನ್ನು ಸುರಕ್ಷಿತವಾಗಿ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವರು. ಹೀಗಾಗಿ ಅಪಘಾತ ರಹಿತವಾಗಿ 15 ವರ್ಷ ಸೇವೆ ಸಲ್ಲಿಸಿದದವರಿಗೆ ಚಿನ್ನ ಹಾಗೂ ಐದು ವರ್ಷ ಸೇವೆ ಸಲ್ಲಿಸಿದವರಿಗೆ ಬೆಳ್ಳಿ ಪದಕ ನೀಡಲಾಗಿದೆ ಎಂದು ಪದಕ ಪುರಸ್ಕೃತರಿಗೆ ಅಭಿನಂದಿಸಿದರು.
ಇದನ್ನೂ ಓದಿ:ನಾನು ಸಚಿವ ಸ್ಥಾನಾಕಾಂಕ್ಷಿ ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ: ವಿಜಯೇಂದ್ರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಮಂಡಿಸಿದ ಬಜೆಟ್ ವೇಳೆ ಸಾರಿಗೆ ಸಿಬ್ಬಂದಿಗಳ ವೇತನ ಪರಿಷ್ಕರಣೆ ಕುರಿತು ಪ್ರಸ್ತಾಪಿಸಲಾಗಿತ್ತು. ಆದರೆ, ಕೋವಿಡ್ ಕಾರಣದಿಂದ ಈ ಬಾರಿ ಸಾಧ್ಯವಾಗಿಲ್ಲ. ಆದರೆ, ಮುಂದಿನ ದಿನಗಳಲ್ಲಿ ವೇತನ ಪರಿಷ್ಕರಣೆ ಮಾಡಿಕೊಡುವುದಾಗಿ ಹೇಳಿದರು.
ಅಲ್ಲದೇ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ನಡೆಸಿದ ಮುಷ್ಕರದ ವೇಳೆ ಅಮಾನತುಗೊಂಡ ಸಿಬ್ಬಂದಿಯನ್ನು ಮಾನವೀಯತೆ ದೃಷ್ಟಿಯಿಂದ ಮತ್ತೆ ಸೇವೆಗೆ ನೇಮಿಸಿಕೊಳ್ಳಲಾಗಿದೆ. ಅವರನ್ನು ಮೂಲ ಘಟಕಗಳಿಗೆ ನಿಯೋಜಿಸಬೇಕು ಎಂಬ ಬೇಡಿಕೆಯಿದೆ. ಆದರೆ, ಮುಷ್ಕರ ನಿರತರ ಆ ಪೈಕಿ 800 ಜನರ ಪ್ರಕರಣಗಳು ಕೋರ್ಟ್ ನಲ್ಲಿವೆ. ಅವು ಕಾರ್ಮಿಕ ನ್ಯಾಯಾಲಯದಲ್ಲಿ ಇತ್ಯರ್ಥಗೊಂಡ ಬಳಿಕ ಸೂಕ್ತ ಕ್ರಮ ವಹಿಸಲು ಪ್ರಯತ್ನಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ