ಹಸಿ-ಒಣ ಕಸ ವಿಂಗಡಣೆಗೆ ಒತ್ತು


Team Udayavani, Oct 1, 2019, 2:07 PM IST

gadaga-tdy-1

ಗದಗ: “ಸ್ವಚ್ಛತಾ ಸೇವಾ’ ಅಭಿಯಾನ ಭಾಗವಾಗಿ ಅ. 2ರ ಒಳಗಾಗಿ ಪ್ಲಾಸ್ಟಿಕ್‌ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತ ಉದ್ದೇಶಿಸಿದೆ. ಅದಕ್ಕಿಂತ ಒಂದು ಹೆಜ್ಜೆ ಮುಂದಿಟ್ಟಿರುವ ಗದಗ-ಬೆಟಗೇರಿ ನಗರಸಭೆ ಆಡಳಿತ ಮನೆಯಿಂದಲೇ ಹಸಿ ಒಣ ಕಸ ವಿಂಗಡಿಸಲು ಮನೆಗೆರಡು ಕಸದು ಡಬ್ಬಿಗಳನ್ನು ವಿತರಿಸಲು ಮುಂದಾಗಿದೆ. ಅದಕ್ಕಾಗಿ ಸುಮಾರು 1.31 ಕೋಟಿ ರೂ. ವೆಚ್ಚದಲ್ಲಿ ಕಸದ ಡಬ್ಬಿಗಳ ಖರೀದಿಗೆ ಮುಂದಾಗಿದೆ.

ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ 35 ವಾರ್ಡ್ಗ ಳಲ್ಲಿ ಸುಮಾರು 42 ಸಾವಿರ ಕುಟುಂಬಗಳಿದ್ದು, ಪ್ರತಿದಿನ 50 ರಿಂದ 60 ಟನ್‌ ಕಸ ಸಂಗ್ರಹವಾಗುತ್ತದೆ. ಈ ಪೈಕಿ ಶೇ. 50ರಷ್ಟು ಹಸಿಕಸ, ಶೇ. 30ರಷ್ಟು ಒಣ ಕಸ ಹಾಗೂ ಶೇ. 20ರಷ್ಟು ಕಟ್ಟಡಗಳ ಅವಶೇಷಗಳನ್ನು ಒಳಗೊಂಡಿರುತ್ತವೆ. ಮನೆಗಳಲ್ಲಿ ಸಂಗ್ರಹವಾಗುವ ತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಿಸುವುದು ನಗರಸಭೆಗೆ ಪ್ರತಿನಿತ್ಯ ಸವಾಲಿನ ಕೆಲಸ.

ಹಳೆ ಪದ್ಧತಿಗೆ ಗುಡ್‌ ಬೈ: ನಗರಸಭೆ ವ್ಯಾಪ್ತಿಯ 35 ವಾರ್ಡ್ ಗಳಲ್ಲಿ ಅಲ್ಲಲ್ಲಿ ಕಂಟೇನರ್‌ಗಳನ್ನು ಇಟ್ಟು ಕಸ ಸಂಗ್ರಹಿಸುವ ಹಳೇ ಪದ್ಧತಿಯನ್ನು ಕೈಬಿಟ್ಟು, ನಗರಸಭೆ ವಾಹನಗಳ ಮೂಲಕ ಮನೆಯಿಂದಲೇ ಕಸ ಸಂಗ್ರಹ ಪ್ರಕ್ರಿಯೆಗೆ ಚಾಲನೆ ನೀಡಿದೆ. ಈಗಾಗಲೇ ಅವಳಿ ನಗರದಲ್ಲಿ ಪ್ಲಾಸ್ಟಿಕ್‌ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ಪ್ಲಾಸ್ಟಿಕ್‌ ಬಳಕೆ ಮಾಡಬೇಡಿ, ಎಲ್ಲೆಂದರಲ್ಲಿ ಕಸ ಚೆಲ್ಲಬೇಡಿ, ನಗರಸಭೆ ಕಸದ ವಾಹನಗಳಿಗೆ ಕಸ ನೀಡಿ, ಸ್ವತ್ಛತೆ ಕಾಪಾಡಿ ಎಂದು ಸ್ಥಳೀಯ ಆಡಳಿತ ಧ್ವನಿವರ್ದಕಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಜೊತೆಗೆ ಕಸದ ಸಮಸ್ಯೆಯನ್ನು ಮೂಲದಲ್ಲೇ ಪರಿಹರಿಸಲು ಅವಳಿ ನಗರದಲ್ಲಿರುವ ಎಲ್ಲ ಮನೆಗಳಿಗೆ ತಲಾ ಎರಡು ಪ್ಲಾಸ್ಟಿಕ್‌ ಕಸದ ಡಬ್ಬಿಗಳನ್ನು ನೀಡಲು ಉದ್ದೇಶಿಸಿದೆ. ಅದಕ್ಕಾಗಿ ಗದಗ-ಬೆಟಗೇರಿ ನಗರಸಭೆಯಿಂದ 1.31 ಕೋಟಿ ರೂ. ಮೊತ್ತದಲ್ಲಿ 10 ಲೀಟರ್‌ ಸಾವರ್ಥ್ಯದ 82,486 ಪ್ಲಾಸ್ಟಿಕ್‌ ಕಸದ ಡಬ್ಬಿಗಳ ಖರೀದಿಗೆ ಟೆಂಡರ್‌ ಪ್ರಕ್ರಿಯೆ ಆರಂಭಿಸಿದೆ. ಡಬ್ಬಿಗಳನ್ನು ಪಡೆಯುವ ಸಾರ್ವಜನಿಕರು, ತಮ್ಮ ಮನೆಯಲ್ಲಿ ಉತ್ಪತ್ತಿಯಾಗುವ ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕ ಡಬ್ಬಿಗಳಲ್ಲಿ ಸಂಗ್ರಹಿಸಬೇಕು. ಮರುದಿನ ಬೆಳಗ್ಗೆ ಮನೆ ಬಾಗಿಲಿಗೆ ಬರುವ ನಗರಸಭೆ ವಾಹನಗಳಿಗೆ ಅದನ್ನು ನೀಡಬೇಕು. ಇದರಿಂದ ವೇಸ್ಟ್‌ ಮ್ಯಾನೇಜ್‌ಮೆಂಟ್‌ ಸುಲಭವಾಗಲಿದೆ ಎನ್ನುತ್ತಾರೆ ನಗರಸಭೆ ಪರಿಸರ ವಿಭಾಗದ  ಅಧಿಕಾರಿಗಳು.

ಮನೆಯಿಂದಲೇ ಕಸ ವಿಭಜನೆಯಾಗುವುದರಿಂದ ಅಳಿದುಳಿದ ಆಹಾರ ಪದಾರ್ಥ, ತರಕಾರಿ ಮತ್ತಿತರೆ ಹಸಿ ಕಸ(ಕೊಳೆಯಬಹುದಾದ)ವನ್ನು ನೇರವಾಗಿ ನಗರಸಭೆಯ ಕಾಂಪೋಸ್ಟ್‌ ಗೊಬ್ಬರ ಯಾರ್ಡ್‌ಗೆ ಸಾಗಿಸಬಹುದು. ಇನ್ನುಳಿದಂತೆ ಒಣ ಕಸದಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್‌ ಕವರ್‌, ಪ್ಲಾಸ್ಟಿ ಕ್‌ ಬಾಟಲ್‌ ಹಾಗೂ ರಬ್ಬರ್‌ ಚಪ್ಪಲ್‌, ಟೈ ಮತ್ತು ಟ್ಯೂಬ್‌, ಬಟ್ಟೆಯನ್ನು ಪ್ರತ್ಯೇಕವಾಗಿ ಸಾಗಾಣಿಕೆ ಮತ್ತು ವೈಜ್ಞಾನಿಕ ರೀತಿಯ ಸಂಸ್ಕರಣೆಗೆ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ಅವಳಿ ನಗರದ ಪ್ರತಿ ಮನೆಗೆ ಎರಡು ಕಸದ ಡಬ್ಬಿಗಳನ್ನು ನೀಡಲು ಉದ್ದೇಶಿಸಿದ್ದು, ಇನ್ನೂ 15- 20 ದಿನಗಳಲ್ಲಿ ಡಬ್ಬಿಗಳನ್ನು ಮನೆ ಮನೆಗೆ ಉಚಿತವಾಗಿ ತಲುಪಿಸಲಿದೆ ಎನ್ನಲಾಗಿದೆ.

 

ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.