ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಒತ್ತು
Team Udayavani, Jul 21, 2019, 11:41 AM IST
ಗದಗ: ಜಿಲ್ಲಾಡಳಿತ ಭವನದ ಜಿ.ಪಂ. ಸಭಾಂಗಣದಲ್ಲಿ ಜಿ.ಪಂ. ಅಧ್ಯಕ್ಷ ಎಸ್.ಪಿ. ಬಳಿಗಾರ ಅಧ್ಯಕ್ಷತೆಯಲ್ಲಿ ಮಾಸಿಕ ಕೆಡಿಪಿ ಸಭೆ ಜರುಗಿತು.
ಗದಗ: ಜಿಲ್ಲೆ ಸಮಗ್ರ ಅಭಿವೃದ್ಧಿ ಮತ್ತು ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಆಯಾ ಇಲಾಖೆ ಅಧಿಕಾರಿಗಳು ಹೆಚ್ಚಿನ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಪಂ ಅಧ್ಯಕ್ಷ ಎಸ್.ಪಿ. ಬಳಿಗಾರ ಹೇಳಿದರು.
ಇಲ್ಲಿನ ಜಿಲ್ಲಾಡಳಿತ ಭವನದ ಜಿ.ಪಂ. ಸಭಾಂಗಣದಲ್ಲಿ ಶನಿವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ರಸ್ತೆ, ಚೆಕ್ ಡ್ಯಾಂ ನಿರ್ಮಾಣ, ಕೆರೆ ಸ್ವಚ್ಛತೆ ಮತ್ತು ದುರಸ್ತಿ, ನಿರ್ವಹಣೆ, ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಬಿಡುಗಡೆಯಾದ ಅನುದಾನ, ಖರ್ಚು ಕುರಿತು ವಿವರವಾದ ವರದಿ ಸಲ್ಲಿಸುವಂತೆ ಆಯಾ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಪ್ರಾರಂಭವಾಗಿದ್ದು, ರೈತರಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜ ವಿತರಣೆ ಹಾಗೂ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಕೇಂದ್ರ ಸರ್ಕಾರವು ಬರಗಾಲದಿಂದ ಸಂಕಷ್ಟ ಎದುರಿಸುತ್ತಿರುವ ಜಿಲ್ಲೆಗಳನ್ನು ಗುರುತಿಸಿ ಅಂತಹ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅರಣ್ಯೀಕರಣ, ಅಂತರ್ಜಲ ಪುನಶ್ಚೇತನ, ಮಳೆ ನೀರು ಸಂಗ್ರಹಣೆ ಕುರಿತಾಗಿ ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ಜಲಶಕ್ತಿ ಯೋಜನೆ ಜಾರಿಗೆ ತಂದಿದೆ. ಈ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಕೆರೆಗಳ ಮಾಹಿತಿಯನ್ನು ಜಿ.ಪಂ.ಗೆ ಸಲ್ಲಿಸುವಂತೆ ಸಿಇಒ ಮಂಜುನಾಥ ಚವ್ಹಾಣ ತಿಳಿಸಿದರು.
ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ವಿರೂಪಾಕ್ಷರೆಡ್ಡಿ ಮಾದಿನೂರು ಮಾತನಾಡಿ, ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಕ್ಷಯ ರೋಗಿಗಳ ನಿಯಂತ್ರಣಕ್ಕೆ ಪ್ರತಿ ತಿಂಗಳು ಸಮುದಾಯ ಮಟ್ಟದ ಸಭೆ, ಶಾಲಾ-ಕಾಲೇಜುಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆಗಳ ನಿಯಂತ್ರಣಕ್ಕಾಗಿ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರೊಂದಿಗೆ ಸಮೀಕ್ಷೆ ನಡೆಸಿ ಅಗತ್ಯವಿದ್ದಲ್ಲಿ ಟೆಮಿಸಾಸ್ ರಾಸಾಯನಿಕ ಸಿಂಪಡಣೆ, ಡಿಡಿಟಿ ಪೌಡರ್ ಸಿಂಪರಣೆ ಮಾಡಲಾಗುವುದು ಎಂದು ಸಭೆಗೆ ಉತ್ತರಿಸಿದರು.
ಪ್ರಾಥಮಿಕ ಹಾಜರಾತಿಯನ್ನು ಹೆಚ್ಚಿಸಲು ಮೇ 30ರಂದು ಅಕ್ಷರ ಗುಡಿ ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಮಕ್ಕಳಿಗೆ ಯೋಗದ ಕುರಿತು ಅರಿವು ಮೂಡಿಸುವ ಸಲುವಾಗಿ ಜೂ. 21ರಂದು ಎಲ್ಲ ಶಾಲೆಗಳಲ್ಲಿ ಯೋಗ ಕಾರ್ಯಕ್ರಮ ನಡೆಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಚ್. ನಾಗೂರ ಸಭೆಗೆ ತಿಳಿಸಿದರು.
ಜಿ.ಪಂ. ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಹನುಮಂತಪ್ಪ ಪೂಜಾರ, ಶಿಕ್ಷಣ ಮತ್ತು ಆರೋಗ್ಯ ಸಮಿತಿ ಅಧ್ಯಕ್ಷ ಶಿವಕುಮಾರ್ ನೀಲಗುಂದ, ಕೃಷಿ ಮತ್ತು ಕೈಗಾರಿಕಾ ಸಮಿತಿ ಅಧ್ಯಕ್ಷ ಈರಪ್ಪ ನಾಡಗೌಡ್ರ, ಜಿ.ಪಂ. ಯೋಜನಾ ನಿರ್ದೇಶಕ ಟಿ. ದಿನೇಶ, ಜಿ.ಪಂ. ಉಪಕಾರ್ಯದರ್ಶಿ ಪ್ರಾಣೇಶ ರಾವ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ