ಪರಿಸರ ಕಾಳಜಿ ನಿತ್ಯ ಕಾಯಕವಾಗಲಿ: ಕಿತ್ತಲಿ

ಅರಣ್ಯ ಸಂರಕ್ಷಣೆ ಮಾಡಿದಲ್ಲಿ ಉತ್ತಮ ಆರೋಗ್ಯ ಸಾಧ್ಯ

Team Udayavani, Jul 8, 2019, 3:11 PM IST

gadaga-tdy-6..

ರೋಣ: ಮಾಲಗೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರೀಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ರೋಣ: ಪರಿಸರ ಕಾಳಜಿ ಕೇವಲ ವರ್ಷದಲ್ಲಿ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ ಅದು ನಿತ್ಯದ ಕಾಯಕವಾಗಬೇಕು. ಅಂದಾಗ ಸಮೃದ್ಧ ಪರಿಸರ ನಿರ್ಮಾಣವಾಗಿ ಉತ್ತಮ ಮಳೆ, ಬೆಳೆ ಕಾಣಲು ಸಾಧ್ಯ ಎಂದು ಮುಖ್ಯೋಪಾಧ್ಯಾಯ ಎಸ್‌.ಬಿ. ಕಿತ್ತಲಿ ಹೇಳಿದರು.

ತಾಲೂಕಿನ ಮಾಡಲಗೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆವರಣ ಹಸಿರೀಕರಣ ಕಾರ್ಯಕ್ರಮಕ್ಕೆ ನೂರು ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಪರಿಸರ ಸ್ವಚ್ಚತೆ ಮತ್ತು ಸಂರಕ್ಷಣೆ ನಮ್ಮ ಮನೆ ಹಾಗೂ ಶಾಲೆಯಿಂದಲೇ ಆರಂಭವಾಗಬೇಕು. ಪರಿಸರ ದಿನಾಚರಣೆಯಂದು ಪರಿಸರ ಸಂರಕ್ಷಣೆ ಬಗ್ಗೆ ಎಚ್ಚೆತ್ತುಕೊಂಡರೆ ಸಾಲದು. ಚಿನ್ನ,ಬೆಳ್ಳಿ, ಹಣ ಕೂಡಿಡುವ ಬದಲು ಪರಿಸರ, ಅರಣ್ಯ ಸಂರಕ್ಷಣೆ ಮಾಡಿದಲ್ಲಿ ನಮ್ಮ ಮತ್ತು ಮಕ್ಕಳ ಆರೋಗ್ಯ ಚೆನ್ನಾಗಿರುತ್ತದೆ. ಪ್ರತಿಯೊಬ್ಬರಲ್ಲೂ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ಮೂಡಬೇಕು. ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಲ್ಲಬೇಕು. ಹಸಿರುಮಯ ವಾತಾವರಣ ನಿರ್ಮಾಣ ಮಾಡುವ ಹಾಗೂ ಅದನ್ನು ಉಳಿಸಿಕೊಳ್ಳುವ ಅವಶ್ಯಕತೆ ನಮಗಿದೆ ಎಂದು ಹೇಳಿದರು.

ಸಮಯಕ್ಕೆ ಸರಿಯಾಗಿ ಮಳೆಯಾಗದಿರುವುದರಿಂದ ಬರಗಾಲ ಎದುರಾಗುತ್ತದೆ. ಇವುಗಳನ್ನು ತೊಡೆದುಹಾಕಿ ನಿರ್ಮಲ ಮನಸ್ಸಿನ ಆರೋಗ್ಯವಂತ ನಾಡು ಕಟ್ಟಲು ನಮ್ಮ ಸುತ್ತ ಮುತ್ತಲಿನ ಪರಿಸರ ಸಂರಕ್ಷಿಸುವುದು ಅವಶ್ಯವಾಗಿದೆ. ಅದು ನಮ್ಮೆಲ್ಲರ ಮೇಲಿರುವ ಗುರುತರ ಜವಾಬ್ದಾರಿಯಾಗಿದೆ. ನಾವು ಪರಿಸರ ಸಂರಕ್ಷಿಸುವುದರಿಂದ ಪರಿಸರ ನಮ್ಮನ್ನು ಸಂರಕ್ಷಿಸುತ್ತದೆ. ಪ್ರತಿಯೊಬ್ಬರು ಮನೆಗೊಂದು ಗಿಡ ನೆಡಬೇಕು. ಅದರ ಪಾಲನೆ ಪೋಷಣೆ ಮಾಡಬೇಕು. ಇದರಿಂದ ಭೂಮಿ ಮೇಲಿನ ಉಷ್ಟಾಂಶ ತಡೆಗಬಹುದು. ಸಮಯಕ್ಕೆ ಸರಿಯಾಗಿ ಮಳೆಯಾಗುವುದರಿಂದ ರೈತರು ಉತ್ತಮ ಬೆಳೆ ಬೆಳೆದು ದೇಶದಲ್ಲಿ ಉದ್ಭವಾಗುವ ಆಹಾರ ಸಮಸ್ಯೆ ನೀಗಿಸಬಹುದು ಎಂದು ಹೇಳಿದರು.

ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ವೈ.ಡಿ. ಗಾಣಿಗೇರ ಮಾತನಾಡಿ, ಜಲಮಾಲಿನ್ಯ, ವಾಯುಮಾಲಿನ್ಯ ಹಾಗೂ ಶಬ್ದ ಮಾಲಿನ್ಯಗಳಿಂದ ವಾತಾವರಣ ಸಂಪೂರ್ಣ ಹದಗೆಟ್ಟು ಹೋಗುತ್ತಿದೆ. ಈ ವ್ಯವಸ್ಥೆ ಹಾಗೇ ಮುಂದೂವರಿದರೆ ನಮ್ಮ ದುರಂತಕ್ಕೆ ನಾವೇ ಹೋಣೆಯಾಗಬೇಕಾಗುತ್ತದೆ. ಆದ್ದರಿಂದ ಇವುಗಳನ್ನು ತಡೆಯುವ ನಿಟ್ಟಿನಲ್ಲಿ ಪ್ರಾಮಾಣಿಕ ಕೆಲಸಕ್ಕೆ ಮುಮದಾಗುವ ಗುರುತರ ಜವಾಬ್ದಾರಿ ಸರ್ವರ ಮೇಲಿದೆ ಎಂದು ಹೇಳಿದರು

ಪರಿಸರ ಮಾಲಿನ್ಯದಂತಹ ದುಷ್ಪರಿಣಾಮದಿಂದ ಅದೇಷ್ಟೋ ಜನರು ವಿವಿಧ ರೋಗ, ರುಜಿನುಗಳಿಗೆ ತುತ್ತಾಗುತ್ತಿದ್ದಾರೆ. ಆರೋಗ್ಯವಂತ ನಾಡು, ಸದೃಢವಾದ ಜನರು ಬೆಳೆಯಲು ಪರಿಶುದ್ಧ ಪರಿಸರದ ಅವಶ್ಯಕತೆ ಬಹಳಷ್ಠಿದೆ. ಹೀಗಾಗಿ ಪ್ರತಿಯೊಬ್ಬರು ಸಸಿಗಳನ್ನು ಮಕ್ಕಳಂತೆ ಲಾಲನೆ, ಪಾಲನೆ,ಪೋಷಣೆ ಮಾಡಿ ಪರಿಸರ ಸಂವರಕ್ಷಣೆಗೆ ಪಣತೋಡಬೇಕು. ಅಲ್ಲದೇ ಮುಂದಿನ ಪೀಳಿಗೆ ಉಜ್ವಲ ಭವಿಷ್ಯ ರಹದಾರಿ ಮಾಡೋಣ ಎಂದು ಕರೆ ನೀಡಿದರು.

ಎಸ್‌ಡಿಎಂಸಿ ಅಧ್ಯಕ್ಷ ಬಸಲಿಂಗನಗೌಡ ರಾಯನಗೌಡ್ರ ಮಾತನಾಡಿದರು. ಎಂ.ಎಂ. ಗುಡಿಮನಿ, ಕೆ.ಬಿ. ತಂಬ್ರಳ್ಳಿ, ಎಂ.ಬಿ. ಮಾದರ, ವಿ.ಎಚ್. ನವಲೆ, ಶ್ರುತಿ ಲೂತಿಮಠ, ಎ.ವಿ. ಪೂಜಾರ ಸೇರಿದಂತೆ ಎಸ್‌ಡಿಎಂಸಿ ಸದಸ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.