ಜೋಳ ಐದು ಸಾವಿರ ಆಸುಪಾಸು


Team Udayavani, Dec 18, 2019, 12:53 PM IST

gadaga-tdy-1

ರೋಣ: ನೆರೆಯಿಂದ ಈ ಬಾರಿ ಜೋಳದ ದರ ಗಗನಕ್ಕೇರಿದ್ದು, ಕ್ವಿಂಟಲ್‌ಗೆ ಐದು ಸಾವಿರ ಆಸುಪಾಸು ಬಂದು ನಿಂತಿದೆ. ಆಗಸ್ಟ್‌ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಸತತ ಮೂರು ಬಾರಿ ಪ್ರವಾಹ ಬಂದು ಕೈಗೆ ಬರುವ ಜೋಳ ಬಾಯಿಗೆ ಬರದಂತಾಗಿದೆ. ಪ್ರವಾಹಕ್ಕೆ ಸಿಕ್ಕು ರೈತರು ಹೊಲಗಳಲ್ಲಿ ಬೆಳೆದಿದ್ದ ಬೆಳೆ ಹಾಗೂ ಮನೆಗಳಲ್ಲಿ ಕೂಡಿಟ್ಟ ವಿವಿಧ ಧಾನ್ಯಗಳು ಕೊಳೆತು ಹೋಗಿದ್ದರಿಂದ ಜೋಳ, ಸಜ್ಜೆ,ನವಣೆ ಸೇರಿದಂತೆ ಅನೇಕ ಆಹಾರ ಧಾನ್ಯಗಳ ಧಾರಣಿಯಲ್ಲಿ ಜಿಗಿತ ಕಂಡಿದೆ.

ಕಳೆದ ತಿಂಗಳು ಕ್ವಿಂಟಲ್‌ ಗೆ 2000-2500 ರೂ. ಇದ್ದ ಜೋಳದ ಬೆಲೆಯಲ್ಲಿ ಭಾರೀ ಬದಲಾವಣೆ ಕಂಡು ಬಂದಿದೆ. ಸದ್ಯ ಕ್ವಿಂಟಲ್‌ ಬಿಳಿ ಜೋಳ 4000-5000 ರೂ. ದರದಲ್ಲಿ ಮಾರಾಟವಾಗುತ್ತಿದೆ. ಉತ್ತರ ಕರ್ನಾಟಕದ ಪ್ರಮುಖ ಆಹಾರವಾಗಿರುವ “ರೊಟ್ಟಿ’ಯನ್ನು ಇನ್ನು ಎಣಿಸಿ ತಿನ್ನುವಂತಾಗಿದೆ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಜೋಳದ ರೊಟ್ಟಿ ಮಾಡಿ ಮಾರಾಟ ಮಾಡುತ್ತ ಬಂದಿರುವ ಕೆಲ ವ್ಯಾಪಾರಸ್ಥರು ಜೋಳದ ಮಾಡುವುದಾ, ಬಿಡುವುದಾ ಅಥವಾ ಸಜ್ಜಿ ರೊಟ್ಟಿ ಮಾಡುವುದಾ ಎಂಬ ಚಿಂತೆಯಲ್ಲಿದ್ದಾರೆ.

ಪಟ್ಟಣದಲ್ಲಿ ಮೊದಲು 4-5 ರೂ.ಗಳಿಗೆ ಮಾರಾಟವಾಗುತ್ತಿದ್ದ ರೊಟ್ಟಿ ಈಗ 8-10 ರೂ.ಗಳಿಗೆ ಮಾರಾಟವಾಗುತ್ತಿವೆ. ಬರಲಿಲ್ಲ ನೀರಿಕ್ಷಿಸಿದಷ್ಟು ಫಲ: ಪ್ರಸಕ್ತ ವರ್ಷ ಮುಂಗಾರು ಮಳೆ ಆರಂಭದಲ್ಲಿ ತುಸು ಹಿನ್ನಡೆಯಾಗಿ ಆ ನಂತರ ಘರ್ಜಿಸಿದ್ದರಿಂದ ಮುಂಗಾರು ಬೆಳೆಗಳು ಸಂಪೂರ್ಣ ಕೊಳೆತು ಹೋದವು. ಇತ್ತ ಹಿಂಗಾರು ಮಳೆ ವಿಪರೀತವಾಗಿ ಸುರಿದ ಪರಿಣಾಮ ಹಿಂಗಾರಿ ಬೆಳೆಗಳಾದ ಜೋಳ, ಕಡಲೆ, ಕುಸುಬಿ ಸೇರಿದಂತೆ ಅನೇಕ ಬೆಳೆಗಳನ್ನು ಎರಡು ಬಾರಿ ಬಿತ್ತನೆ ಮಾಡಿದ್ದಾರೆ. ಎರಡು ಬಾರಿ ಬಿತ್ತನೆ ಮಾಡಿದರೂ ಸರಿಯಾಗಿ ಮೊಳಕೆ ಒಡೆಯದ ಕಾರಣ ನಿರೀಕ್ಷಿಸಿದಷ್ಟು ಫಲ ಬರದೇ ರೈತರನ್ನು ಚಿಂತೆಗೀಡು ಮಾಡಿದೆ.

ತ್ರಿಶಂಕು ಸ್ಥಿತಿಯಲ್ಲಿ ರೈತರು: ಕಳೆದ ವರ್ಷದಲ್ಲಿ ಅಲ್ಪಸ್ವಲ್ಪ ಮಳೆಯಲ್ಲಿ ಬೆಳೆದ ಜೋಳವನ್ನು ರೈತರು ತಮ್ಮ ತಮ್ಮ ಹಗೆಗಳಲ್ಲಿ ಕೂಡಿಟ್ಟಿದ್ದರು. ಆದರೆ ಭಾರೀ ಪ್ರಮಾಣದ ಮಳೆ ಸುರಿದು ಗ್ರಾಮಗಳಲ್ಲಿ ನೀರು ನುಗ್ಗಿದ್ದರಿಂದ ಅವು ಕೊಳೆತು ಹೋಗಿವೆ. ಅದರಲ್ಲಿಯೇ ಅಳಿದುಳಿದ ಅಲ್ಪ ಸ್ವಲ್ಪ ಜೋಳದ ಧಾರಣಿ ಚೆನ್ನಾಗಿದೆ. ಆದರೆ ಈಗ ಮಾರಾಟ ಮಾಡಬೇಕೋ ಅಥವಾ ಈ ಬಾರಿಯ ಜೋಳ ಬರುವವರೆಗೆ ಅವುಗಳನ್ನು ಆಹಾರಕ್ಕೆ ಬಳಸಬೇಕೋ ಎಂಬುದು ತಿಳಿಯದೆ ತ್ರಿಶಂಕು ಸ್ಥಿತಿಯಲ್ಲಿದ್ದಾರೆ ರೈತರು.

ರೊಟ್ಟಿ ರುಚಿಗೆ ವಿದೇಶಿಗರ ಮೆಚ್ಚುಗೆ: ಉತ್ತರ ಕರ್ನಾಟಕದ ಪ್ರಸಿದ್ಧ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡುವ ವಿದೇಶಿಗರು ಈ ಭಾಗದಲ್ಲಿ ದೊರೆಯುವ ಜೋಳದ ರೊಟ್ಟಿ ರುಚಿ ಸವಿಯುತ್ತಾರೆ. ಅಷ್ಟೇ ಅಲ್ಲ ಅದನ್ನು ಮಾಡುವ ವಿಧಾನವನ್ನು ಸಹ ತಿಳಿಯುತ್ತಾರೆ. “ರೊಟ್ಟಿ ರುಚಿಗೆ ನಾವು ಮಾರು ಹೋಗಿದ್ದೇವೆ. ರೊಟ್ಟಿ ಮಾಡುವ ವಿಧಾನವನ್ನು ತಿಳಿದುಕೊಂಡು ನಮ್ಮ ದೇಶದಲ್ಲೂ ತಯಾರಿಸುವ ಪ್ರಯತ್ನ ಮಾಡುತ್ತೇವೆ ಎನ್ನುತ್ತಾರೆ ಬದಾಮಿ ಗುಹೆ ವೀಕ್ಷಿಸಲು ಬಂದ ಫ್ರಾನ್ಸ್‌ ದೇಶದ ಪ್ರವಾಸಿ ಡಾ| ಪೈನಾಸ್‌.

ದಲ್ಲಾಳಿಗಳಿಗೇ ಹೆಚ್ಚು ಲಾಭ: ರೈತರು ತಮ್ಮ ಹತ್ತಿರವಿರುವ ಜೋಳವನ್ನು ಮಾರುಕಟ್ಟೆಗೆ ತರದೆ ಇರುವುದರಿಂದ ದಲ್ಲಾಳಿಗಳು ತಮ್ಮಲ್ಲಿ ಸಂಗ್ರಹ ಮಾಡಿರುವ ಜೋಳವನ್ನು ಸುಮಾರು 4500-5000 ರೂ. ದರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಕಷ್ಟ ಪಟ್ಟ ಬೆಳೆದ ರೈತರಿಗೆ ಈ ಬೆಲೆ ರೈತರಿಂದಲೇ ಖರೀದಿಸುವ ದಲ್ಲಾಳಿಗಳಿಗೆ ಸಿಗುತ್ತದೆ ಎನ್ನುತ್ತಾರೆ ಹಿರೇಹಾಳ ಗ್ರಾಮದ ರೈತ ಶಿವುಕುಮಾರ ಸಾಲಮನಿ

 

-ಯಚ್ಚರಗೌಡ ಗೋವಿಂದಗೌಡ್ರ

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.