ಅಕ್ಕಡಿ ಕಾಳುಗಳ ಬೆಲೆ ಮೂರಂಕಿ ಸುತ್ತ

•ಶೇಂಗಾ ಕಾಳು 100ರೂ., ಪುಟಾಣಿ 70ರೂ, ಹೆಸರು 85, ಕಡಲೆ ಬೇಳೆ 74 •ಜನಸಾಮಾನ್ಯರ ಪ್ರೋಟಿನ್‌ಗೆ ನಿಲುಕದ ಬೆಲೆ

Team Udayavani, Jul 23, 2019, 10:12 AM IST

gadaga-tdy-1

ಬೇಳೆ ಕಾಳುಗಳು.

ಗಜೇಂದ್ರಗಡ: ಬೇಳೆ ಕಾಳುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು ಗ್ರಾಹಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಕಳೆದ ಒಂದು ತಿಂಗಳಲ್ಲಿ ಬೇಳೆ ಕಾಳುಗಳ ಬೆಲೆಯಲ್ಲಿ ಸಾಕಷ್ಟು ಹೆಚ್ಚಳ ಆಗಿದ್ದು, ತೊಗರಿ, ಉದ್ದಿನ ಬೇಳೆ, ಚಣಗಿ ಬೇಳೆ, ಕಡಲೆ ಬೇಳೆ, ಹೆಸರು ಸೇರಿ ಮತ್ತಿತರ ಬೇಳೆ ಕಾಳುಗಳ ಬೆಲೆ ಗಗನಕ್ಕೇರಿದೆ. ಜನ ಬೆಲೆ ಕೇಳಿ ಬೆಚ್ಚಿ ಬೀಳುವಂತಾಗಿದೆ. ಜನಸಾಮಾನ್ಯರ ನೆಮ್ಮದಿ ಕದಡುತ್ತಿವೆ.

ತಿಂಗಳ ಹಿಂದೆ ಕೆ.ಜಿ ಒಂದಕ್ಕೆ 80 ರೂ. ಇದ್ದ ತೊಗರಿ ಬೇಳೆ ಈಗ 95ರೂ. ಆಗಿದೆ. ಕಡಲೆ ಬೆಳೆ 74 ರೂ., ಚಣಗಿ 96 ರೂ., ಶೇಂಗಾ ಕಾಳು 100 ರೂ., ಪುಟಾಣಿ 70 ರೂ., ಹೆಸರು 85 ರೂ. ಇದ್ದು ಗ್ರಾಹಕರನ್ನು ಚಿಂತೆಗೀಡು ಮಾಡಿದೆ.

ವರ್ಷದ ಹಿಂದೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದಾಗ ಬಹುತೇಕರು ಹಣದುಬ್ಬರದತ್ತ ಬೊಟ್ಟು ಮಾಡಿದ್ದರು. ಹಣದುಬ್ಬರದಲ್ಲಿ ಇಳಿಕೆ ಕಂಡಿದೆಯಾದರೂ ಅಗತ್ಯ ವಸ್ತುಗಳ ಬೆಲೆ ಮಾತ್ರ ಇಳಿಮುಖವಾಗಿಲ್ಲ. ಬದಲು ಏರುತ್ತಲೇ ಇದೆ.

ಕಳೆದೆರೆಡು ತಿಂಗಳ ಹಿಂದೆ ಕ್ವಿಂಟಲ್ವೊಂದಕ್ಕೆ 8 ಸಾವಿರ ರೂ.ಬೆಲೆಯಿದ್ದ ತೊಗರಿ ಬೇಳೆ ಈಗ 9 ಸಾವಿರಕ್ಕೂ ಅಧಿಕ ಏರಿ ಗಗನ ಮುಖೀಯಾಗಿದೆ. ಕೆ.ಜಿಗೆ ಮೂರಂಕಿ ತಲುಪುತ್ತಿದೆ. ಜನಸಾಮಾನ್ಯರ ಪ್ರೋಟಿನ್‌ ಎಂದೇ ಪರಿಗಣಿತವಾದ ತೊಗರಿ ಬೇಳೆಯ ಬೆಲೆ ನಿಲುಕದ ರೀತಿಯಲ್ಲಿದೆ.

ಶಾಲೆಯಲ್ಲಿ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟಕ್ಕೆ ಬೇಳೆಯನ್ನೇ ಕಡ್ಡಾಯವಾಗಿ ಬಳಸಬೇಕೆಂಬ ಕೇಂದ್ರದ ನಿರ್ದೇಶನ ತೊಗರಿ ಬೇಳೆಯ ಬೇಡಿಕೆ ಹೆಚ್ಚಲು ಕಾರಣವಾಗಿದೆ ಎನ್ನುವುದು ವಾಣಿಜ್ಯ ತಜ್ಞರ ಮಾತು. ಇದೀಗ ಒಂದಾದ ಮೇಲೊಂದರಂತೆ ಹಬ್ಬಗಳು ಬರುತ್ತಿವೆ. ಎಲ್ಲ ಬೆಲೆಗಳು ತುಟ್ಟಿ, ಕೈಗೆಟುಕುವಂಥವು ಅನ್ನಿಸಿದರೂ ಸಾಲ ಶೂಲ ಮಾಡಿ ಖರೀದಿಸಿ ಹಬ್ಬ ಆಚರಿಸದೇ ವಿಧಿಯಿಲ್ಲ ಎಂದು ಗ್ರಾಹಕರು ಅಸಹಾಯಕತೆ ವ್ಯಕ್ತಪಡಿಸುತ್ತಾರೆ.

ಒಂದೆಡೆ ಬೇಳೆ ಕಾಳುಗಳ ಚಿಲ್ಲರೆ ಮಾರಾಟ ದರವೂ ಹೆಚ್ಚಿದ್ದು, ಆಮದು ಬೆಲೆಯೂ ಅಧಿಕವಾಗಿದೆ. ಆದರೆ ಇದರ ಲಾಭ ಬೆಳೆಗಾರರಿಗೆ ಸಿಗದೇ ಮಧ್ಯವರ್ತಿಗಳ ಪಾಲಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಹೀಗಾಗಿ ರೈತರು ಇತ್ತೀಚಿನ ದಿನಗಳಲ್ಲಿ ಕೃಷಿಗೆ ಒತ್ತು ನೀಡದಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ ಎನ್ನುವುದು ಕೃಷಿ ತಜ್ಞರ ಅಭಿಪ್ರಾಯ.

ಆಗಸ್ಟ್‌ ತಿಂಗಳಿಂದ ಒಂದಾದ ಮೇಲೊಂದರಂತೆ ಹಬ್ಬಗಳು ಬರುತ್ತವೆ. ಆಹಾರ ಪದಾರ್ಥಗಳ ಬೆಲೆಗಳು ತುಟ್ಟಿಯಾಗುತ್ತಲೆ ಇವೆ. ಸಾಲ ಶೂಲ ಮಾಡಿ ದಿನಸಿ ಖರೀದಿಸಿ ಹಬ್ಬ ಆಚರಿಸದೇ ವಿಧಿಯಿಲ್ಲ. ಆದರೆ ಅಧಿಕಾರ ನಡೆಸುತ್ತಿರುವ ಸರ್ಕಾರಗಳು ಮಾತ್ರ ಬೆಲೆ ಏರಿಕೆ ಕಡಿವಾಣಕ್ಕೆ ಮುಂದಾಗುತ್ತಿಲ್ಲ. •ಸಿದ್ದು ಗೌಡರ, ಗ್ರಾಹಕ

ನಗರ-ಪಟ್ಟಣಗಳಿಗೆ ವಲಸೆ ಬರುವ ಕೃಷಿ ಕಾರ್ಮಿಕರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದರಿಂದ ಹಳ್ಳಿಗಳಲ್ಲಿ ಬೇಸಾಯಕ್ಕೆ ಕೂಲಿ ಕಾರ್ಮಿಕರೇ ಸಿಗುತ್ತಿಲ್ಲ. ಮಳೆ ಕಣ್ಣಾ ಮುಚ್ಚಾಲೆ ಆಡುತ್ತಿದೆ. ಅದನ್ನೇ ನೆಚ್ಚಿಕೊಂಡ ಬೇಸಾಯ ಸೋತು ಸೊರಗಿದೆ. ಹೀಗಾಗಿ ಬೆಲೆ ಏರಿಕೆ ಸಾಮಾನ್ಯವಾಗಿದೆ. •ಕೂಡ್ಲೆಪ್ಪ ಗುಡಿಮನಿ, ಪ್ರಗತಿಪರ ರೈತ.
•ಡಿ.ಜಿ ಮೋಮಿನ್‌

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.