ಟೊಮೆಟೊ ಬೆಲೆ ಗಗನಕ್ಕೆ: ಗ್ರಾಹಕರ ಜೇಬಿಗೆ ಕತ್ತರಿ


Team Udayavani, May 22, 2019, 1:01 PM IST

gadaga-tdy-1..

ಗಜೇಂದ್ರಗಡ: ವಾರದ ಸಂತೆಯಲ್ಲಿ ಟೊಮೆಟೊ ಮಾರಾಟಕ್ಕಿಟ್ಟಿರುವುದು.

ಗಜೇಂದ್ರಗಡ: ಪಟ್ಟಣದ ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಕಳೆದೊಂದು ವಾರದಿಂದ ನಿರಂತರವಾಗಿ ಹೆಚ್ಚಾಗುತ್ತಿದೆ. ಕಳೆದ ಹಂಗಾಮಿನಲ್ಲಿ ಟೊಮೆಟೊ ಬೆಳೆದ ನೇಗಿಲ ಯೋಗಿಗೆ ಲಾಭವಾಗದೇ ಕಣ್ಣೀರಧಾರೆ ಹರಿಸಿತ್ತು. ಆದರೆ ಪ್ರಸ್ತುತ ಮಾರುಕಟ್ಟೆಯಲ್ಲಿ ಅದೇ ಟೊಮೆಟೊ ಬೆಲೆ ಮೂರಂಕಿ ತಲುಪುವ ಹಂತಕ್ಕೆ ಬಂದಿದೆ.

ಕಳೆದ ಏಪ್ರಿಲ್ ಮತ್ತು ಮೇ ತಿಂಗಳ ಮೊದಲ ವಾರದಲ್ಲಿ ಕೆಜಿಗೆ 30ರಿಂದ 40 ಇತ್ತು. ಆದರೀಗ ಟೊಮೆಟೊ ಬೆಲೆ ಹೆಚ್ಚಾಗುತ್ತಲೇ ಇದ್ದು, ಕೆಜಿಗೆ 60 ರಿಂದ 70ಕ್ಕೆ ಏರಿಕೆಯಾಗಿದೆ. ಇದು ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಕಂಗೆಡಿಸಿದೆ.

ಮಳೆ ಕೊರತೆಯೇ ಕಾರಣ: ಸತತ ಮಳೆಯ ಕೊರತೆಯಿಂದಾಗಿ ಬೋರ್‌ವೆಲ್ಗಳಲ್ಲಿಯೂ ನೀರಿನ ಪ್ರಮಾಣ ಕಡಿಮೆಯಾದ ಪರಿಣಾಮ ಬೋರ್‌ವೆಲ್ ಆಶ್ರಿತ ಜಮೀನುಗಳಲ್ಲಿ ಬೆಳೆದ ಟೊಮೆಟೊ ಇಳುವರಿ ಕುಸಿದೆ. ಈ ಬಾರಿ ಮುಂಗಾರು ಪ್ರವೇಶದಲ್ಲಿ ವಿಳಂಬವಾಗಲಿದೆ ಎನ್ನುವ ಹವಾಮಾನ ಇಲಾಖೆಯ ವರದಿ ಅನ್ನದಾತರ ನಿದ್ದೆಗೆಡಿಸಿದೆ.

ಕೊಳ್ಳಲು ಗ್ರಾಹಕರ ಹಿಂದೇಟು:

ನೀರಿನ ಸಮಸ್ಯೆಯಿಂದ ಇಳುವರಿ ಕುಂಠಿತಗೊಂಡಿದೆ. ಬಿಸಿಲಿನ ಪ್ರತಾಪಕ್ಕೆ ಟೊಮೆಟೊ ಗಿಡಗಳು ಒಣಗುತ್ತಿವೆ. ಹೀಗಾಗಿ ಕಡಿಮೆ ದರದಲ್ಲಿ ತರಕಾರಿ ಸಿಗುವುದೇ ಕಷ್ಟ ಸಾಧ್ಯವಾಗಿದೆ. ಆದ್ದರಿಂದ ತರಕಾರಿ ಖರೀದಿಗೆ ಬರುವ ಗ್ರಾಹಕರು ಇಷ್ಟೊಂದು ದರವಾ ಎಂದು ಪ್ರಶ್ನಿಸುತ್ತಿದ್ದಾರೆ. ಬೆಲೆ ಏರಿಕೆಯಿಂದಾಗಿ ಟೊಮೆಟೊ ಸೇರಿ ಇನ್ನಿತರ ತರಕಾರಿ ಕೊಳ್ಳಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ.

ಆಹಾರ ಪದಾರ್ಥಗಳ ತಯಾರಿಕೆಗೆ ಟೊಮೆಟೊ ಅಗತ್ಯವಾಗಿರುವುದರಿಂದ ಜನರು ಸ್ವಲ್ಪ ಪ್ರಮಾಣದಲ್ಲಿ ಖರೀದಿಸುತ್ತಿದ್ದಾರೆ.

ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದರಿಂದ ಸೂರ್ಯನ ಪ್ರಖರತೆ ಹೆಚ್ಚಾಗಿದೆ. ಜನಸಾಮಾನ್ಯರೇ ಬದುಕುವುದು ಕಷ್ಟಕರವಾದ ಸಂದರ್ಭದಲ್ಲಿ ತರಕಾರಿ ಬೆಳೆಯುವುದು ದುಸ್ತರವಾಗಿದೆ. ಹೀಗಾಗಿ ತರಕಾರಿ ಬೆಲೆಗಳು ಮಾರುಕಟ್ಟೆಯಲ್ಲಿ ಗಗನಕ್ಕೇರಿವೆ. -ಬಸಪ್ಪ
ಕುಮುಟಳ್ಳಿ, ರೈತಸಂತ್ಯಾಗ ಕಾಯಿಪಲ್ಲೆ ತರಾಕಂತ ಎರಡನೂರ ರೂಪಾಯಿ ಒಯ್ದರ ಕೈಚೀಲ ತುಂಬುವಷ್ಟು ಸಹ ಕಾಯಿಪಲ್ಲೆ ಆಗುತ್ತಿಲ್ಲ. ಅದ್ರಾಗ ಟೊಮೆಟೊ ರೇಟ್ ಮತ್ತಷ್ಟು ಹೆಚ್ಚಾಗೈತ್ರಿ. ಹೀಂಗಾದ್ರ ಜೀವನಾ ಸಾಗಿಸೋದು ಕಷ್ಟ ಐತ್ರಿ. -ಜಯದೇವಿ ರೇವಡಿ, ಮಹಿಳೆ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.