ಫಕೀರ ದಿಂಗಾಲೇಶ್ವರ ಶ್ರೀ ಹೇಳಿಕೆಗೆ ಖಂಡನೆ


Team Udayavani, Apr 27, 2022, 1:31 PM IST

17

ಶಿರಹಟ್ಟಿ: ಮಠದ ಶ್ರೀಗಳು ಧಾರ್ಮಿಕ, ಆಧ್ಯಾತ್ಮಿಕ, ಪ್ರವಚನ ಹಾಗೂ ಸಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮಾಜ ತಿದ್ದುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ಕಾಂಗ್ರೆಸ್‌ ಮುಖಂಡರನ್ನು ಮೆಚ್ಚಿಸುವ ಭರದಲ್ಲಿ ಶ್ರೀ ಫಕೀರ ದಿಂಗಾಲೇಶ್ವರ ಶ್ರೀಗಳು 3012 ಪರ್ಸಂಟೇಜ್‌ ಸರ್ಕಾರ ಎಂಬ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ಜಿಪಂ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ ಹೇಳಿದರು.

ಪಟ್ಟಣದ ಕಪ್ಪತ್ತನವರ ಸರ್ಕಲ್‌ ಹತ್ತಿರ ರಾಜಾ ಟಾಕೀಸ್‌ ನಲ್ಲಿ ಬಿಜೆಪಿ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ಶಿರಹಟ್ಟಿಯ ಜಗದ್ಗುರು ಫಕೀರೇಶ್ವರ ಮಠ ಅತ್ಯಂತ ಪುರಾತನ ಹಾಗೂ ಐತಿಹಾಸಿಕ ಕುರುಹು ಹೊಂದಿರುವ ಹಿಂದೂ-ಮುಸ್ಲಿಂ ಭಾವೈಕ್ಯ ಮಠ, ಸರ್ಕಾರದ ಮಟ್ಟದಲ್ಲಿ ಭಾವೈಕ್ಯತೆ ದಿನಾಚರಣೆ ಆಚರಿಸುವ ನಿರ್ಧಾರದ ಸಮಯದಲ್ಲಿ ನಮ್ಮ ಮಠವನ್ನು ಪರಿಗಣಿಸಬೇಕೆಂದು ನಾವು ಸಹ ವಿನಂತಿಸುತ್ತೇವೆ. ಆದರೆ ಕಾಣದ ಕೈಗಳನ್ನು ಮೆಚ್ಚಿಸಲು ಸರ್ಕಾರ ಹಾಗೂ ಸಚಿವ ಸಿಸಿ ಪಾಟೀಲ ವಿರುದ್ಧ ಆರೋಪ ಮಾಡುವುದು ಪೂಜ್ಯರ ಘನತೆಗೆ ತಕ್ಕದಲ್ಲ. ಬಿಜೆಪಿ ಸರ್ಕಾರ ಮಠ ಮಾನ್ಯಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ಅನುದಾನ ಕಲ್ಪಿದೆ.

ಸಿಸಿ ಪಾಟೀಲರು ಸಹ ಶಿರಹಟ್ಟಿಯಲ್ಲಿ ಕೋರ್ಟ್‌ ಸ್ಥಾಪನೆ, ಬಸ್‌ ಡಿಪೋ, ವಿವಿಧ ಕೆರೆ ತುಂಬಿಸುವ ಯೋಜನೆಯಡಿ 197 ಕೋಟಿ, ರೈಲು ಯೋಜನೆಗೆ 640 ಕೋಟಿ, ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ 500 ಕೋಟಿಗಿಂತಲ್ಲೂ ಅಧಿಕ ಅನುದಾನವನ್ನು ಕಲ್ಪಿಸಿದ್ದಾರೆ. ಇಂತಹ ಜನಪರ ಸರ್ಕಾರವನ್ನು ಆಧಾರರಹಿತ ಹೇಳಿಕೆಯಿಂದ ದೂಷಿಸುತ್ತಿರುವುದು ಖಂಡನೀಯ ಎಂದು ಹೇಳಿದರು.

ಬಿಜೆಪಿ ಶಿರಹಟ್ಟಿ ಮಂಡಲ ಅಧ್ಯಕ್ಷ ಫಕ್ಕೀರೇಶ ರಟ್ಟಿಹಳ್ಳಿ, ಚಂದ್ರಕಾಂತ ನೂರಶಟ್ಟರ, ರಾಮಣ್ಣ ಡಂಬಳ, ವಿರೂಪಾಕ್ಷಪ್ಪ ಅಣ್ಣಿಗೇರಿ, ನಾಗರಾಜ ಲಕ್ಕುಂಡಿ, ತಿಮ್ಮರೆಡ್ಡಿ ಮರಡ್ಡಿ ಮಾತನಾಡಿ, ದ್ವೇಷ ಬಿಡು ಪ್ರೀತಿ ಮಾಡು ಎಂಬ ದಿವ್ಯ ಸಂದೇಶದಂತೆ ಶ್ರೀ ಫಕೀರ ದಿಂಗಾಲೇಶ್ವರ ಶ್ರೀಗಳು ನಡೆದುಕೊಳ್ಳಬೇಕು. ನಿಮ್ಮ ಹೇಳಿಕೆಯನ್ನು ಸಮಾಜ ಗಂಭೀರವಾಗಿ ಪರಿಗಣಿಸುತ್ತದೆ. ವಿರೋಧ ಪಕ್ಷದ ಓಲೈಕೆಗಾಗಿ ಸಮಾಜದ ಸ್ವಾಸ್ಥ ಹಾಳು ಮಾಡಬಾರದು. ಭ್ರಷ್ಟಾಚಾರ ನಿಜವಾದರೆ ದಾಖಲೆ ನೀಡಿ ಮುಖ್ಯಮಂತ್ರಿಗಳು ತನಿಖೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಅದನ್ನು ಬಿಟ್ಟು ಸಚಿವ ಸಿಸಿ ಪಾಟೀಲರ ಮನೆ ಮುಂದೆ ಧರಣಿ ನಡೆಸಲು ಮುಂದಾದರೆ ಶಿರಹಟ್ಟಿ ಮಠದ ಮುಂದೆ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಬೇಕಾಗುತ್ತದೆ ಎಂದು ಹೇಳಿದರು.

ಭೀಮಸಿಂಗ ರಾಠೊಡ, ಜಾನು ಲಮಾಣಿ, ಮೋಹನ ಗುತ್ತೆಮ್ಮನವರ, ದೀಪು ಕಪ್ಪತ್ತನವರ, ರಾಮಣ್ಣ ಕಂಬಳಿ, ಮೋಹನ ಗುತ್ತೇಮ್ಮನವರ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.