ಫಕೀರೇಶ್ವರ ರಥೋತ್ಸವ
Team Udayavani, May 19, 2019, 11:55 AM IST
ಶಿರಹಟ್ಟಿ: ಇಲ್ಲಿನ ಶ್ರೀ ಜ| ಫಕೀರೇಶ್ವರರ ಮಹಾರಥೋತ್ಸವ ಶನಿವಾರ ಸಂಜೆ ವಿಜೃಂಭಣೆಯಿಂದ ಜರುಗಿತು. ಸಹಸ್ರಾರು ಭಕ್ತರ ಹರಹರ ಮಹಾದೇವ ಎಂಬ ಜಯಘೋಷಗಳ ನಡುವೆ ತೇರನ್ನು ಎಳೆಯಲಾಯಿತು.
ಬೆಳಗ್ಗೆ 8ಕ್ಕೆ ಜ| ಫಕೀರ ಸಿದ್ಧರಾಮ ಸ್ವಾಮೀಜಿ ಶ್ರೀ ಮಠದ ಪೀಠಪರಂಪರೆಯಂತೆ ಹರಿಪುರ ಗ್ರಾಮವನ್ನು ಬಿಟ್ಟು ಶಿರಹಟ್ಟಿಗೆ ಪುರಪ್ರವೇಶ ಮಾಡಿದ್ದು, ಬೃಹತ್ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು. ಡೊಳ್ಳಿನ ಮಜಲು, ಝಾಂಜ್ ಮೇಳ, ನಂದಿ ಧ್ವಜ ಹಾಗೂ ಆನೆ, ನಗಾರಿ ನಾದ ಗಮನ ಸೆಳೆಯಿತು. ಪಟ್ಟಣದ ಮ್ಯಾಗೇರಿ ಓಣಿಯಲ್ಲಿರುವ ಕರ್ತೃ ಫಕೀರೇಶ್ವರರ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಅಲ್ಲಿಂದ ಮಠಕ್ಕೆ ಬಂದು ಕರ್ತೃ ಫಕ್ಕಿರೇಶ್ವರರ ಪೂಜೆ ಹಾಗೂ ಇನ್ನಿತ್ಯಾದಿ ನಿಯಮಗಳನ್ನು ಕೈಗೊಂಡು ಶೆಟ್ಟರ ಓಣಿಯಲ್ಲಿನ ಬೋರಶೆಟ್ಟರವರ ಮನೆಯಲ್ಲಿ ಪ್ರಸಾದ ಸ್ವೀಕರಿಸಿದರು. ನಂತರ ಮೆರವಣಿಗೆ ಮೂಲಕ ಸಂಜೆ 4.30ಕ್ಕೆ ಮಠಕ್ಕೆ ಆಗಮಿಸಿ ಕೆಲ ಧಾರ್ಮಿಕ ವಿಧಿವಿಧಾನ ಕೈಗೊಂಡು ಲಕ್ಷ್ಮೀ ಪೂಜೆ ಕೈಗೊಂಡು ರಥದ ಕಡೆಗೆ ಸಾಗಿ ಬಂದರು. ನಂತರ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ