ನಳನಳಿಸುತ್ತಿದೆ ಬೆಳೆ..ರೈತನ ಮೊಗದಲ್ಲೀಗ ಕಳೆ..

•ಹೊಲದಲ್ಲಿ ಹಸಿರಿನಿಂದ ಕಂಗೊಳಿಸುತ್ತಿದೆ ಗೋವಿನ ಜೋಳ, ಹೆಸರು, ಸಜ್ಜಿ, ನೆವಣಿ ಬೆಳೆ

Team Udayavani, Jul 31, 2019, 12:03 PM IST

gadaga-tdy-1

ಗಜೇಂದ್ರಗಡ: ಕಾಲಕಾಲೇಶ್ವರ ಗ್ರಾಮ ಬಳಿಯ ಬೆಳೆದ ಗೋವಿನ ಜೋಳ ಫಸಲು ಕಂಗೊಳಿಸುತ್ತಿದೆ.

ಗಜೇಂದ್ರಗಡ: ಬರದ ನಾಡೆಂದೇ ಬಿಂಬಿತವಾಗಿರುವ ತಾಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಅನ್ನದಾತನನ್ನು ಕೈ ಹಿಡಿದಿದ್ದು,ಬೆಳೆಗಳು ನಳನಳಿಸುತ್ತಿವೆ. ನಿರೀಕ್ಷೆಗೂ ಮೀರಿ ಮುಂಗಾರಿನ ಫಸಲು ಬರುವ ಆಶಾಭಾವ ಒಡಮೂಡಿದೆ.

ಪ್ರಸಕ್ತ ವರ್ಷ ಮುಂಗಾರು ಮಳೆ ವಾಡಿಕೆಗಿಂತ ಉತ್ತಮವಾಗಿ ಸುರಿಯದಿದ್ದರೂ ಬೆಳೆ ಉಳಿಯುವಷ್ಟು ಸುರಿದಿದೆ. ಈಗಾಗಲೇ ಬಿತ್ತನೆ ಮಾಡಿರುವ ಹೆಸರು, ಗೋವಿನಜೋಳ, ಸಜ್ಜಿ, ನೆವಣಿ, ಗುರೆಳ್ಳು ಬೆಳೆ ಹಸಿರಿನಿಂದ ಕಂಗೊಳಿಸುತ್ತಿದೆ.

ತಾಲೂಕಿನಲ್ಲಿ ಕಳೆದ ಬಾರಿ 30 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು, 10 ಸಾವಿರ ಹೆಕ್ಟೇರ್‌ ಪ್ರದೇಶ ಗೋವಿನಜೋಳ, 5 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಮತ್ತು 1000 ಹೆಕ್ಟೇರ್‌ ಪ್ರದೇಶದಲ್ಲಿ ಸಜ್ಜಿ ಬಿತ್ತನೆಯಾಗಿತ್ತು. ಈ ಬಾರಿ ಹೆಸರು 20,989, ಗೋವಿನ ಜೋಳ 5805, ಶೇಂಗಾ 5355, ಸಜ್ಜಿ 394, ಗುರೆಳ್ಳು 200, ಸೂರ್ಯಕಾಂತಿ 350, ಬಿ.ಟಿ ಹತ್ತಿ 923, ತೊಗರಿ 424 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ಬೆಳೆಗಳು ಇದೀಗ ಸಮೃದ್ಧವಾಗಿದ್ದು, ಹೆಸರು ಹೂವು ಬಿಟ್ಟು ಕಾಯಿ ಕಟ್ಟುವ ಹಂತದಲ್ಲಿದೆ. ಮಳೆ ಹೆಚ್ಚಾದರೆ ಕೀಟಭಾದೆ ತಗುಲಿ ಎಲ್ಲಿ ಇಳುವರಿ ಕುಂಠಿತವಾಗುತ್ತದೆಯೋ ಎಂಬ ಭೀತಿ ರೈತರನ್ನು ಕಾಡುತ್ತಿದೆ. ಹೀಗಾಗಿ ಬೆಳೆಗಳ ರಕ್ಷಣೆಗಾಗಿ ರೈತರು ಕೀಟಭಾದೆ, ರೋಗ ಹತೋಟಿಗೆ ತರಲು ಔಷಧ ಸಿಂಪಡಣೆಯಲ್ಲಿ ತೊಡಗಿದ್ದಾರೆ.

ಗಜೇಂದ್ರಗಡ, ಕಾಲಕಾಲೇಶ್ವರ, ಗೊಗೇರಿ, ಗೌಡಗೇರಿ, ಕುಂಟೋಜಿ, ಮ್ಯಾಕಲಝರಿ, ಮಾಟರಂಗಿ, ಸೂಡಿ, ರಾಮಾಪುರ, ಪುರ್ತಗೇರಿ, ಕೊಡಗಾನೂರ, ವೀರಾಪುರ, ಚಿಲ್ಝರಿ, ಬೈರಾಪುರ, ಜಿಗೇರಿ, ರಾಜೂರ, ದಿಂಡೂರ, ಲಕ್ಕಲಕಟ್ಟಿ, ಕಲ್ಲಿಗನೂರ, ಮುಶಿಗೇರಿ, ಪ್ಯಾಟಿ, ನಾಗೇಂದ್ರಗಡ ಸೇರಿ ರೋಣ ಮತ್ತು ಗಜೇಂದ್ರಗಡ ತಾಲೂಕಿನಾದ್ಯಂತ 2019 ಜೂನ್‌ ಮತ್ತು ಜುಲೈನಲ್ಲಿ 233. 7 ಮಿ.ಮೀ. ಮಳೆ ಸುರಿದಿದೆ. 2018 ಜೂನ್‌ ಮತ್ತು ಜುಲೈನಲ್ಲಿ 112. 26 ಮಿ.ಮೀ. ಮಳೆ ಸುರಿದಿತ್ತು.

ಕಳೆದೊಂದು ವಾರದಿಂದ ತುಂತುರು ಮಳೆಯಾಗುತ್ತಿದ್ದು, ಬೆಳೆಗಳು ಮತ್ತಷ್ಟು ಸಮೃದ್ಧವಾಗಿ ಬರುವ ವಿಶ್ವಾಸ ರೈತರಲ್ಲಿದೆ. ಬೆಳೆಗಳ ಮಧ್ಯದಲ್ಲಿನ ಕಳೆ ತೆಗೆಯುವುದು, ಎಡೆಗುಂಟೆ ಹೊಡೆಯುವಂತಹ ಕೆಲಸಗಳಲ್ಲಿ ರೈತರು ತೊಡಗಿದ್ದಾರೆ.

ಸತತ ಬರಕ್ಕೆ ತುತ್ತಾಗಿ ನಲುಗಿದ್ದ ಅನ್ನದಾತರು ಈ ಬಾರಿ ನಿಟ್ಟುಸಿರು ಬಿಡುವಂತಾಗಿದೆ. ನೀರಿಲ್ಲದೆ ಬರಿದಾಗಿದ್ದ ಕೃಷಿ ಹೊಂಡ, ಚೆಕ್‌ ಡ್ಯಾಂಗಳಲ್ಲಿ ನೀರು ತುಂಬಿವೆ. ಕಳೆದೆರಡು ವರ್ಷಗಳಿಂದ ಅನುಭವಿಸಿದ್ದ ಬರಕ್ಕೆ ಗುಡ್‌ ಬೈ ಹೇಳಿದ ನೇಗಿಲ ಯೋಗಿ ಈಗ ಖುಷಿಯಾಗಿದ್ದಾನೆ.

ಭೂತಾಯಿ ನಂಬಿದರೆ ಎಂದಿಗೂ ಕೈ ಬಿಡಲ್ಲ ಎನ್ನುವ ಮಾತು ಸತ್ಯ ಐತ್ರಿ. ಕಳೆದೆರಡು ವರ್ಷ ಬಿತ್ತಿದ ಬೆಳಿ ಕೈಗೆ ಸಿಗದಂಗಾಗಿ ಬಾಳ್‌ ಕಷ್ಟ ಅನುಭವಿಸಿದ್ವಿ. ಆದ್ರ ಭೂ ತಾಯಿ ಮ್ಯಾಲ ನಂಬಿಕೆ ಇಟ್ಟಿದ್ವಿ ಸುಳ್ಳಾಗಲಿಲ್ರಿ.. ಮುಂಗಾರಿನ ಹೆಸರು ಬೆಳೆ ಭರ್ಜರಿ ಐತ್ರಿ. •ಕಳಕಪ್ಪ ಕುಂಬಾರ, ಹೆಸರು ಬೆಳೆದ ರೈತ.
ಕಳೆದ ಮಳೆಯ ಕೊರತೆಯಿಂದ ಮುಂಗಾರು ಬೆಳೆ ಬಾರದೇ ಕೈ ಸುಟ್ಟುಕೊಂಡಿದ್ದ ಅನ್ನದಾತರಿಗೆ ಈ ಬಾರಿ ಮುಂಗಾರು ಜೀವಕಳೆ ತಂದಿದೆ. ಫಸಲು ಉತ್ತಮ ಹಂತದಲ್ಲಿದ್ದು, ರೈತರ ಜಮೀನುಗಳು ಹಸಿರಿನಿಂದ ಕಂಗೊಳಿಸುತ್ತಿವೆ. ಜೂನ್‌ ತಿಂಗಳ ಕೊನೆಯ ವಾರದಲ್ಲಿ ಬಿತ್ತನೆಯಾಗಿದ್ದ ಗೋವಿನ ಜೋಳ ಉತ್ತಮವಾಗಿದೆ.
•ಡಿ. ಜಿ ಮೋಮಿನ್‌

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.