![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ವಿದ್ಯುತ್ ಖಾಸಗೀಕರಣಕ್ಕೆ ರೈತ ಸಂಘ ವಿರೋಧ
Team Udayavani, Jun 3, 2020, 7:50 AM IST
![ವಿದ್ಯುತ್ ಖಾಸಗೀಕರಣಕ್ಕೆ ರೈತ ಸಂಘ ವಿರೋಧ](https://www.udayavani.com/wp-content/uploads/2020/06/Gadaga-tdy-1-2-620x372.jpg)
ಗದಗ: ಕೇಂದ್ರ ಸರಕಾರ ದೇಶದ ವಿದ್ಯುತ್ ವಲಯವನ್ನು ಖಾಸಗೀಕರಣ ಮಾಡುವ ಚಿಂತನೆ ಅವೈಜ್ಞಾನಿಕ ಮತ್ತು ಜನವಿರೋಧಿ ನೀತಿಯಾಗಿದ್ದು, ತಕ್ಷಣವೇ ಕೈ ಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯಿಸಿದೆ.
ಈ ಕುರಿತು ಸಂಘದ ಪ್ರಮುಖರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು, ಕೇಂದ್ರ ಸರ್ಕಾರವು ದೇಶದ ವಿದ್ಯುತ್ ವಲಯವನ್ನು ಖಾಸಗೀಕರಣ ಮಾಡುವುದು ಅತ್ಯಂತ ಖೇದಕರ. ಇದರಿಂದ ಕೋಟ್ಯಂತರ ರೈತರು ಮತ್ತು ಕಡು ಬಡವರು ತೊಂದರೆಗೆ ಒಳಗಾಗುತ್ತಾರೆ. ಮಧ್ಯಮ ವರ್ಗದವರೂ ಸಹ ತೊಂದರೆ ಅನುಭವಿಸುವಂತಾಗುತ್ತದೆ. ಕೃಷಿ ವಲಯದಲ್ಲಿ ಉತ್ಪನ್ನ ಕಡಿಮೆಯಾಗುತ್ತದೆ. ಕೃಷಿ ವಲಯಕ್ಕೆ ಇರುವ ಭದ್ರತೆಯೂ ಕುಸಿದು ಹೋಗುತ್ತದೆ. ವಿದ್ಯುತ್ತನ್ನೇ ನಂಬಿರುವ ರೈತಾಪಿ ವರ್ಗದ ಎಲ್ ಪಂಪಸೆಟ್ಗಳು ಬಂದಾಗುತ್ತವೆ. ಆಹಾರಕ್ಕಾಗಿ ಆಹಾಕಾರ ಉಂಟಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಹೀಗಾಗಿ ಹಲವಾರು ರಾಜ್ಯಗಳು ಈ ಮಸೂದೆಯನ್ನು ವಿರೋಧಿಸಿವೆ. ಅದರಂತೆ ರಾಜ್ಯ ಸರ್ಕಾರ ಈ ಮಸೂದೆಯನ್ನು ತಿರಸ್ಕರಿಸಿ ಕೇಂದ್ರಕ್ಕೆ ಕಳುಹಿಸಬೇಕು. ಜೊತೆಗೆ ಅದೇ ರೀತಿ ರೈತರು, ಬಡವರು ಮತ್ತು ಜನ ಸಾಮಾನ್ಯರು ಪ್ರತಿಭಟನೆ, ಹೋರಾಟದ ಮೂಲಕ ಸರಕಾರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿದರು.
ರಾಜ್ಯ ರೈತ ಸಂಘ ರಾಜ್ಯಾಧ್ಯಕ್ಷ ಕೆ.ಜಿ.ಶಾಂತಸ್ವಾಮಿಮಠ, ರಾಮಣ್ಣ ಕೊಂಚಿಗೇರಿ, ಹನಮಂತ ಗೋಜನೂರ ಇತರೆ ರೈತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.