ಬೆಳೆಹಾನಿ ಪರಿಹಾರಕ್ಕೆ ರೈತರ ಒತ್ತಾಯ
ಮನೆ ಬಿದ್ದು ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೂ ಸರಕಾರ ಕೂಡಲೇ ಸ್ಪಂದಿಸುವುದು ಅವಶ್ಯ
Team Udayavani, Dec 1, 2021, 6:12 PM IST
ಲಕ್ಷ್ಮೇಶ್ವರ: ಅಕಾಲಿಕ, ಅತಿವೃಷ್ಟಿಯಿಂದ ರೈತರಿಗಾಗಿರುವ ಎಲ್ಲ ಬೆಳೆಗಳ ನಷ್ಟದ ಪರಿಹಾರವನ್ನು ಆದಷ್ಟು ಶೀಘ್ರ ರೈತರ ಖಾತೆಗಳಿಗೆ ಜಮೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಬಾಲೆಹೊಸೂರು ಗ್ರಾಮ ಘಟಕದಿಂದ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಲೋಕೇಶ್ ಜಾಲವಾಡಗಿ ಮಾತನಾಡಿ, ಅತಿವೃಷ್ಟಿಯಿಂದ ರೈತರ ಹೊಲದಲ್ಲಿ ಬೆಳೆದು ನಿಂತ ಮುಂಗಾರಿನ ಫಸಲು ನೆಲಕ್ಕೆ ಬಿದ್ದು ಹಾಳಾಗಿದೆ. ಹಿಂಗಾರಿನ ಸಣ್ಣ ಬೆಳೆ ಮಳೆಯ ಹೊಡೆತಕ್ಕೆ ಸಿಲುಕಿದೆ. ಪ್ರತಿವರ್ಷ ಅತಿವೃಷ್ಟಿ ಇಲ್ಲವೇ ಅನಾವೃಷ್ಟಿಯಿಂದ ರೈತರು ಹಾನಿ ಅನುಭವಿಸುವುದು ತಪ್ಪದಂತಾಗಿದೆ. ಶೇಂಗಾ, ಹತ್ತಿ ಮತ್ತು ಮೆಣಸಿನಕಾಯಿ ಬೆಳೆಗೆ ಮಾತ್ರ ಪರಿಹಾರ ಕೊಡುವರೆಂಬ ಆತಂಕದಲ್ಲಿ ರೈತರಿದ್ದಾರೆ. ಆದ್ದರಿಂದ ಗೋವಿನಜೋಳ,
ತೊಗರಿ ಸೇರಿ ಎಲ್ಲ ಬೆಳೆಗಳ ಹಾನಿಗೆ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಕಳೆದ ಎರಡು ವರ್ಷಗಳ ಹಿಂದೆಯೇ ಬಾಲೆಹೊಸೂರ ಗ್ರಾಮದ ಅನೇಕ ರೈತರ ಜಮೀನುಗಳಿಗೆ ವರದಾ ನದಿಯ ನೀರು ಹರಿದು ಬೆಳೆಹಾನಿಯಾದದ ಬಗ್ಗೆ ಪರಿಹಾರ ಗಗನ ಕುಸುಮವಾಗಿದೆ. ಬೆಳೆಹಾನಿಯ ಜತೆಗೆ ಮನೆ ಬಿದ್ದು ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೂ ಸರಕಾರ ಕೂಡಲೇ ಸ್ಪಂದಿಸುವುದು ಅವಶ್ಯವಾಗಿದೆ.
ರೈತರ ಜಮೀನುಗಳಿಗೆ ಕೃಷಿ ಇಲಾಖೆ, ತೋಟಗಾರಿಕೆ, ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ಸಮೀಕ್ಷೆ ಪೂರ್ಣಗೊಳಿಸಿದರೆ ರೈತರು ಜಮೀನು ಹಸನು ಮಾಡಿ ಬೆಳೆ ಬೆಳೆಯಲು ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.
ತಹಶೀಲ್ದಾರ್ ಕಚೇರಿಯ ಶಿರಸ್ತೆದಾರ ರೇಣುಕಾ ಮನವಿ ಸ್ವೀಕರಿಸಿದರು. ರೈತ ಸಂಘದ ಕಾರ್ಯದರ್ಶಿ ಕೇಶವ ಕಟ್ಟಿಮನಿ, ಸಂಘದ ಸದಸ್ಯರಾದ ಮಂಜುನಾಥ ಸುಣಗಾರ, ವೆಂಕಟೇಶ ಕಾಗನೂರ, ಹನುಮಂತಪ್ಪ ನಾವ್ಹಿ, ಬಸವರಡ್ಡಿ ಚನ್ನಳ್ಳಿ, ತಿರಕಪ್ಪ ಶಿಗ್ಲಿ, ಮಲ್ಲೇಶಪ್ಪ ತಿರಕಣ್ಣವರ, ಪ್ರಸನ್ನ ಲೋಹಾರ, ಹೊನಕೇರಪ್ಪ ಒಂಟಿ, ದರಿಯಪ್ಪ ಪಶುಪತಿಹಾಳ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!