ಮಳೆ ನಿರೀಕ್ಷೆಯಲ್ಲಿ ರೈತರು

ಬೆಳೆಗಳಿಗೆ ತೇವಾಂಶ ಕೊರತೆ

Team Udayavani, Jul 3, 2020, 5:29 PM IST

ಮಳೆ ನಿರೀಕ್ಷೆಯಲ್ಲಿ ರೈತರು

ಸಾಂದರ್ಭಿಕ ಚಿತ್ರ

ಗಜೇಂದ್ರಗಡ: ಮುಂಗಾರು ಆರಂಭಕ್ಕೂ ಅಬ್ಬರಿಸಿದ್ದ ಮಳೆರಾಯ ಇದೀಗ ಮುನಿಸಿಕೊಂಡಿದ್ದಾನೆ. ತಾಲೂಕಿನಲ್ಲಿ ಈ ಬಾರಿ ಮತ್ತೆ ಮುಂಗಾರು ಮಳೆ ಕೈ ಕೊಡುವ ಭೀತಿ ಎದುರಾಗಿದ್ದು, ಒಂದು ತಿಂಗಳಿಂದ ಸಮರ್ಪಕ ಮಳೆಯಾಗದೇ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆದ ಬೆಳೆಗಳಿಗೆ ತೇವಾಂಶದ ಕೊರತೆಯಿಂದ ರೋಗಗಳು ಹೆಚ್ಚಾಗುತ್ತಿದೆ. ಮೇ ಅಂತ್ಯದಲ್ಲಿ ಉತ್ತಮ ಮಳೆ ಸುರಿದಿದ್ದರಿಂದ ರೈತರು ಸಂತಸಗೊಂಡು ಹೆಸರು, ಸಜ್ಜಿ, ಹೈಬ್ರಿಡ್‌ ಜೋಳ, ಗುರೆಳ್ಳು, ಯಳ್ಳು, ತೊಗರಿ ಬಿತ್ತಿದ್ದಾರೆ. ಆದರೆ ಬೆಳೆದು ನಿಂತ ಬೆಳೆಗಳು ತೇವಾಂಶ ಕೊರತೆಯಿಂದ ಬಾಡುತ್ತಿರುವುದನ್ನು ಕಂಡು ಅನ್ನದಾತ ಕಣ್ಣೀರು ಸುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನಲ್ಲಿ ಗೋವಿನ ಜೋಳ ಬಿತ್ತನೆ ಮಾಡುವ ಕೆಲ ರೈತರು ಮಳೆಗಾಗಿ ಕಾಯುತ್ತಿದ್ದಾರೆ. ಮುಂಗಾರು ಹಂಗಾಮಿನ ಅರ್ಧ ಮಳೆಗಳು ಮುಗಿದರೂ ವರುಣದೇವ ಕೃಪೆ ತೋರಿಲ್ಲ. ಮಳೆ ಬಂದ್ರೆ ಮಾತ್ರ ನಮ್ಮ ಬದುಕು, ಆ ದೇವರು ನಮ್ಮ ಮೇಲೆ ಕರುಣೆ ತೋರಬೇಕು. ಇಲ್ಲದಿದ್ದರೆ ನಮಗೆ ಸಾವೇ ಗತಿ ಎನ್ನುವುದು ರೈತರ ಸಾಮೂಹಿಕ ಅಳಲಾಗಿದೆ.

ಹೆಸರು ಬೆಳೆಗೆ ಹಳದಿ ರೋಗ: ಮೇ ತಿಂಗಳಲ್ಲಿ ಸುರಿದ ಮಳೆಗೆ ಹೆಸರು ಬಿತ್ತನೆ ಮಾಡಿದ ರೈತರು ಇನ್ನಿಲ್ಲದ ಸಮಸ್ಯೆಗೆ ಸಿಲುಕಿದ್ದಾರೆ. ತಾಲೂಕಿನಲ್ಲಿ 40 ಸಾವಿರಕ್ಕೂ ಅಧಿ ಕ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಹೆಸರು ಫಸಲಿಗೆ ಹಳದಿ ರೋಗ ಬಂದಿದ್ದು, ಇಡೀ ಜಮೀನನ್ನೇ ಆವರಿಸಿಕೊಂಡಿದೆ. ಇದರಿಂದ ಇಳುವರಿ ಕಡಿಮೆ ಬರುವ ಸಾಧ್ಯತೆ ಇದೆ. ಇನ್ನು ಮಳೆಯ ಕೊರತೆಯಿಂದ ಅಲ್ಪಸ್ವಲ್ಪ ಜೀವಂತವಿರುವ ಬೆಳೆ ಸಹ ಒಣಗುವ ಹಂತ ತಲುಪುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಎರಡು ವಾರಗಳಿಂದ ತಾಲೂಕಿನಲ್ಲಿ ಮೋಡ ಕವಿದ ವಾತಾವರಣವಿದೆ. ಆದರೆ ಮಳೆಯ ಬರುವಿಕೆ ಮಾತ್ರ ಇಲ್ಲದಂತಾಗಿದೆ. ತಂಪಾದ ಗಾಳಿ ಬೀಸುವ ಮೂಲಕ ಮೋಡಗಳು ಮುಂದು ಸರಿಯುತ್ತಿವೆ. ಇದೀಗ ಪುನರ್ವಸು ಮಳೆ ಮಾತ್ರ ರೈತರನ್ನು ಕೈ ಹಿಡಿಯಬೇಕಿದೆ. ಇಲ್ಲದಿದ್ದರೆ ಬೆಳೆಗಳು ಸಂಪೂರ್ಣ ನೆಲಕಚ್ಚಲಿವೆ.

ಸಾಮೂಹಿಕ ಪ್ರಾರ್ಥನೆ: ವರುಣ ಕೃಪೆಗಾಗಿ ಪ್ರಾರ್ಥಿಸಿ ತಾಲೂಕಿನ ರೈತ ಸಮೂಹ ದೀರ್ಘ‌ದಂಡ ನಮಸ್ಕಾರ, ಮುತ್ತೈದೆಯರಿಗೆ ಉಡಿ ತುಂಬುವುದು, ಭಜನೆ, ಗುರ್ಜಿ ಆಡುವುದು, ಸಾಮೂಹಿಕ ಅನ್ನಸಂತರ್ಪಣೆ ಸೇರಿದಂತೆ ಹಲವಾರು ಧಾರ್ಮಿಕ ಕಾರ್ಯಗಳಿಗೆ ಮುಂದಾಗಿ ವರುಣನ ಕೃಪೆಗೆ ಮೊರೆ ಹೋಗಿದ್ದಾರೆ. ಹೀಗಾಗಿ ಎಲ್ಲರೂ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದಾರೆ.

ಹೋಲದಾಗ ಬೆಳಿ ಚೊಲೋ ಇದ್ರ ಮಾತ್ರ ಯಾರಾದ್ರು ನಾಲ್ಕಾರು ರೂಪಾಯಿ ಕೊಡ್ತಾರ್ರೀ. ಬೆಳಿ ಬಾಡಿ ಹೋಗಕತೈತ್ರಿ, ಕೈಯಾಗ ರೊಕ್ಕ ಇಲ್ಲರ್ರಿ. ಖುಷಿ ಎಲ್ಲೇ ಇರತೈತ್ರೀ. ಮಳಿಯಪ್ಪ ಮಾತ್ರ ನಮ್ಮ ಕಷ್ಟ ಕೇಳೊವಲ್ರಿ. -ಬಸಪ್ಪ ಮುದೇನಗುಡಿ, ರೈತ

ಮಳೆ ಅಭಾವದಿಂದ ತಾಲೂಕಿನಾದ್ಯಾಂತ ಈ ಬಾರಿ ಹೆಸರು ಫಸಲಿದೆ ಹಳದಿ ರೋಗ ಎದುರಾಗುತ್ತಿದೆ. ರೈತರು ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿರುವ ಕ್ರೀಮಿನಾಶಕಗಳನ್ನು ಸಿಂಪಡನೆ ಮಾಡಬೇಕು. -ರವೀಂದ್ರ ಪಾಟೀಲ, ತಾಲೂಕು ಸಹಾಯಕ ಕೃಷಿ ಅಧಿಕಾರಿ

 

ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.