ಹೆಸರು ಖರೀದಿಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Sep 1, 2020, 5:12 PM IST
ಸಾಂದರ್ಭಿಕ ಚಿತ್ರ
ನರೇಗಲ್ಲ: ಬೆಳೆವಿಮೆ ಕಂಪನಿಗಳು ನಿಯಮಗಾಳಿಗೆ ತೂರಿ ಬೇಜವಾಬ್ದಾರಿಯಿಂದ ವರ್ತಿಸಿವೆ ಎಂದು ಆರೋಪಿಸಿ ಹಾಗೂ ಬೆಂಬಲ ಬೆಲೆ ಯೋಜನೆಯಡಿ ಹೆಸರು ಬೆಳೆ ಖರೀದಿ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸಿ ರೈತ ಸೇನಾ ಕಾರ್ಯಕರ್ತರು ಸೋಮವಾರ ಪಟ್ಟಣದ ರೈತ ಸಂಪರ್ಕ ಕೇಂದ್ರದ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.
ಈ ವೇಳೆ ರೈತ ಸೇನಾ ಮುಖಂಡ ಶರಣಪ್ಪ ಧರ್ಮಾಯತ ಮಾತನಾಡಿ, 2017-18 ಹಾಗೂ 2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮೆ ಜಮೆಯಾಗಿಲ್ಲ. ಬೆಳೆವಿಮೆಯಲ್ಲಿ ರೈತರ ವಂತಿಕೆಯನ್ನು ಖಾಸಗಿ ವಿಮಾ ಕಂಪನಿಗಳು ಪಡೆದುಕೊಳ್ಳುತ್ತವೆ. ಆದರೆ ಬೆಳೆವಿಮೆ ಯೋಜನೆಯಲ್ಲಿ ರೈತರು ಭಾಗವಹಿಸುವಂತೆ ಕೃಷಿ ಇಲಾಖೆ ಪ್ರಚಾರ ಕೈಗೊಳ್ಳುತ್ತದೆ. ಆದ್ದರಿಂದ ಕೂಡಲೇ ಕೃಷಿ ಇಲಾಖೆ ಮಧ್ಯಸ್ಥಿಕೆ ವಹಿಸಿ ಸಕಾಲದಲ್ಲಿ ವಿಮೆ ಮೊತ್ತ ರೈತರ ಕೈ ಸೇರುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ರೈತ ಚಂದ್ರು ಹೊನವಾಡ ಮಾತನಾಡಿ, ಪ್ರಸಕ್ತ ಸಾಲಿನ ಮುಂಗಾರಿನಲ್ಲಿ ಇಲಿ, ಮಿಡತೆ ಹಾಗೂ ಜಿಂಕೆ ಹಾವಳಿಯಿಂದ ಅಲ್ಪಸ್ವಲ್ಪ ಹೆಸರು ಬೆಳೆ ಕೈ ಸೇರಿದ್ದು, ಮಾರುಕಟ್ಟೆಯಲ್ಲಿ ದರ ಕುಸಿತ ಕಂಡಿದೆ. ಆದ್ದರಿಂದ, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ಸ್ಥಾಪಿಸಬೇಕು. ಬೆಳೆವಿಮೆ, ಹೆಸರು ಖರೀದಿ ಕೇಂದ್ರ ಸ್ಥಾಪನೆಗೆ 15 ದಿನಗಳಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹಕ್ಕೆ ರೈತ ಸೇನೆ ಮುಂದಾಗಲಿದೆ ಎಂದು ಎಚ್ಚರಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವೀರಣ್ಣ ಗಡಾದ, ಇನ್ನೊಂದು ತಿಂಗಳು ಅಥವಾ ಎರಡು ತಿಂಗಳಲ್ಲಿ ವಿಮೆ ಜಮೆಯಾಗಲಿದೆ. ಜಮೆಯಾಗದ ರೈತರ ಯಾದಿ ನೀಡಿದಲ್ಲಿ ಪರಿಶೀಲನೆ ಕೈಗೊಳ್ಳಲಾಗುವುದು ಎಂದರು.
ರೈತಸೇನಾ ಅಧ್ಯಕ್ಷ ಆನಂದ ಕೋಟಗಿ, ವೀರಪ್ಪ ಹತ್ತಿಕಟಗಿ, ಕಳಕಪ್ಪ ಮುಗಳಿ, ವೀರೇಶ ಹಿರೇಮಠ, ಹಾಲಪ್ಪ ಹಲಗೇರಿ, ಕಲ್ಲಪ್ಪ ಗೊಸಗೊಂಡ, ಮೂಯುದ್ದೀನ್ ಬಾಳಿಕಾಯಿ, ರೆಹಮಾನಸಾಬ್ ಬಾಳಿಕಾಯಿ, ಗಂಗಯ್ಯ ಹಿರೇಮಠ, ಶಶಿಧರ ಓದಿಸೋಮಠ, ಸಂಗಯ್ಯ ಶಾಂತಯ್ಯನಮಠ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ