ಬೆಳೆ ವಿಮೆಗೆ ಆಗ್ರಹಿಸಿ ರೈತರ ಪ್ರತಿಭಟನೆ
Team Udayavani, Aug 12, 2020, 2:01 PM IST
ಸಾಂದರ್ಭಿಕ ಚಿತ್ರ
ರೋಣ: ತುಂಬಿದ ಬೆಳೆ ವಿಮೆ ಹಣ ಬಿಡುಗಡೆಯಾಗಿಲ್ಲ. ಈ ಕುರಿತು ಕಂದಾಯ ಇಲಾಖೆ, ಗ್ರಾಪಂ ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ಕೂಡಲೇ ಸಮರ್ಪಕ ಮಾಹಿತಿ ನೀಡಿ ಎಂದು ಆಗ್ರಹಿಸಿ ತಾಲೂಕಿನ ಮುಶಿಗೇರಿ ಗ್ರಾಮದ 100ಕ್ಕೂ ಹೆಚ್ಚು ರೈತರು ಮಂಗಳವಾರ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಳೆದ 2017-18, 2018-19 ಮತ್ತು 2019-20 ಸಾಲಿನಲ್ಲಿ ಬೆಳೆ ಹಾನಿ ಕುರಿತು ತುಂಬಿದ ಬೆಳೆ ವಿಮೆ ಹಣ ತಾಲೂಕಿನ ಬಹುತೇಕ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ರೈತರಿಗೆ ಬಿಡುಗಡೆಯಾಗಿದೆ. ಆದರೆ ಮುಶಿಗೇರಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಮಾತ್ರ ಬಿಡುಗಡೆಯಾಗಿಲ್ಲ. ಈ ಕುರಿತು ಗ್ರಾಪಂ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಕೇಳಿದರೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಬೆಳೆ ವಿಮೆ ಏಕೆ ಬಿಡುಗಡೆಯಾಗಿಲ್ಲ?. ಕೆಲ ರೈತರಿಗೆ ಬೆಳೆ ವಿಮೆ ಬಂದಿದೆ
ಎಂದು ಅಧಿಕಾರಿಗಳು ಹೇಳುತ್ತಾರೆ. ಆದರೆ ಮುಶಿಗೇರಿ ಗ್ರಾಮದ ಯಾರೊಬ್ಬ ರೈತರಿಗೂ ವಿಮೆ ಬಂದಿಲ್ಲ. ಈ ಕುರಿತು ಸಮರ್ಪಕ ಮಾಹಿತಿ ನಿಡಬೇಕು ಎಂದು ರೈತರು ಕೃಷಿ ಅಧಿಕಾರಿಗಳಿಗೆ ಒತ್ತಾಯಿಸಿದರು. ಸಹಾಯಕ ಕೃಷಿ ನಿರ್ದೇಶಕ ರವೀಂದ್ರಗೌಡ ಪಾಟೀಲ ಮಾತನಾಡಿ, ಮುಶಿಗೇರಿ ಗ್ರಾಪಂ ವ್ಯಾಪ್ತಿಯ ಸಾಕಷ್ಟು ರೈತರಿಗೆ ಕಳೆದ 2017-18 ಮತ್ತು 2018-19 ಸಾಲಿನಲ್ಲಿ ತುಂಬಿದ ಬೆಳೆ ವಿಮೆ ಬಿಡುಗಡೆಯಾಗಿದೆ. ಈ ಕುರಿತು ನಮ್ಮ ಇಲಾಖೆಯ ನಿಖರ ಮಾಹಿತಿ ಇದೆ. 2019-20ನೇ ಸಾಲಿನ ಬೆಳೆ ವಿಮೆ ಆಗಸ್ಟ್ ತಿಂಗಳಲ್ಲಿಯೇ ಬಿಡುಗಡೆಯಾಗುವ ಸಾಧ್ಯತೆಯಿದೆ. ಜೊತೆಗೆ 2020-21ನೇ ಸಾಲಿನ ಬೆಳೆ ವಿಮೆ ತುಂಬಲು ಅವಕಾಶವಿದ್ದು, ಪ್ರಯೋಜನ ಪಡೆಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ