ಅನ್ನದಾತರು ಆರ್ಥಿಕ ಪ್ರಗತಿ ಸಾಧಿಸಲಿ: ಸಚಿವ ಬಿ.ಸಿ.ಪಾಟೀಲ
ರಾಜ್ಯದ 10 ಕೃಷಿ ವಲಯದಲ್ಲಿ ಒಂದೊಂದು ಪ್ರದೇಶದಲ್ಲಿ ರೈತರ ಒಂದೊಂದು ಸಮಸ್ಯೆಗಳಿವೆ.
Team Udayavani, Nov 11, 2021, 6:12 PM IST
ನರಗುಂದ: ದೇಶಕ್ಕೆ ಅನ್ನ ಕೊಡುತ್ತೇನೆಂದು ಹೇಳಿಕೊಳ್ಳುವ ತಾಕತ್ತು ಇರೋದು ರೈತನಿಗೆ ಮಾತ್ರ. ಅಂತಹ ರೈತ ಕೃಷಿಯಲ್ಲಿ ಸಾಕಷ್ಟು ಬದಲಾವಣೆ ಕಾಣಬೇಕಿದೆ. ಹಾಗಾಗಿ, ಪ್ರತಿಯೊಬ್ಬ ರೈತರೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ರೈತರೊಂದಿಗೆ ಒಂದು ದಿನ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಗಂಗಾಪೂರ ಗ್ರಾಮದ ಪ್ರಗತಿಪರ ರೈತ ಮಲ್ಲಿಕಾರ್ಜುನ ಪಾಟೀಲ ಅವರ ಹೊಲದಲ್ಲಿ ಗೋವಿನಜೋಳ ಬೆಳೆ ಕ್ಷೇತ್ರೋತ್ಸವ ಹಾಗೂ ರಾಶಿ ಮಾಡುವ ಪದ್ಧತಿ ವೀಕ್ಷಿಸಿದ ಬಳಿಕ ನಡೆದ ಸಮಾರಂಭದಲ್ಲಿ ಸಚಿವರು ಮಾತನಾಡಿದರು.
ರಾಜ್ಯದ 10 ಕೃಷಿ ವಲಯದಲ್ಲಿ ಒಂದೊಂದು ಪ್ರದೇಶದಲ್ಲಿ ರೈತರ ಒಂದೊಂದು ಸಮಸ್ಯೆಗಳಿವೆ. ಸಮಗ್ರ ಕೃಷಿ ನೀತಿ, ಬಹುಬೆಳೆ ಪದ್ಧತಿ ಅಳವಡಿಸಿಕೊಳ್ಳಬೇಕು. ಕೃಷಿಯನ್ನೇ ಅವಲಂಬಿಸಿ ಸಾಕಷ್ಟು ಪ್ರಗತಿ ಸಾಧಿಸಿದ ಭೈರನಹಟ್ಟಿ ಬಸನಗೌಡ ಚಿಕ್ಕನಗೌಡ್ರ ಎಂಬ ರೈತ ಮಾದರಿಯಾಗಿದ್ದಾರೆ ಎಂದು ಸಚಿವರು ಹೇಳಿದರು.
ಭೂಮಿತಾಯಿ ನಂಬಿದವರನ್ನು ಯಾವತ್ತೂ ಕೈಬಿಡುವುದಿಲ್ಲ. ಹಸಿರೆಲೆ, ಸಗಣಿ ಗೊಬ್ಬರ ಬಳಕೆ ಮತ್ತು ಕೆರೆ ಮಣ್ಣು ಭೂಮಿಗೆ ಹಾಕುವ ಮೂಲಕ ಮಣ್ಣಿನ ಫಲವತ್ತತೆ ಹೆಚ್ಚಿಸಬೇಕು. ಬಿತ್ತನೆ ಪೂರ್ವದಲ್ಲಿ ರೈತರು ಕಡ್ಡಾಯವಾಗಿ ಮಣ್ಣು ಪರೀಕ್ಷೆ ಮಾಡಿಸುವುದು ಬಹಳಷ್ಟು ಉಪಯುಕ್ತವಾಗಿದೆ. ಬದುವಿನಲ್ಲಿ ಗಿಡ ಮರಗಳನ್ನು ಬೆಳೆಸಬೇಕು. ಹೈನುಗಾರಿಕೆ, ಕುರಿ ಸಾಕಾಣಿಕೆ ಮೂಲಕ ಆರ್ಥಿಕ ಬಲವರ್ಧನೆ ಹೊಂದಬೇಕು ಎಂದು ಹೇಳಿದರು.
ರೈತರೊಂದಿಗೆ ಸರ್ಕಾರವಿದೆ:
ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಜೊತೆಗೆ ಸರ್ಕಾರವೇ ನಿಮ್ಮ ಜೊತೆಗಿದೆ ಎಂದು ಭರವಸೆ ನೀಡಲು ರೈತರ ಮನೆ ಬಾಗಿಲಿಗೆ ಬಂದಿದ್ದೇವೆ. ರೈತರು ಎದೆಗುಂದದೇ ಕೃಷಿಯಲ್ಲಿ ಪ್ರಗತಿ ಸಾಧಿಸಬೇಕು ಎಂದು ಸಚಿವ ಬಿ.ಸಿ.ಪಾಟೀಲ ಹೇಳಿದರು. ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡ್ರ, ಎಂ.ಎಚ್.ತಿಮ್ಮನಗೌಡ್ರ, ಶಿವನಗೌಡ ಕರಿಗೌಡ್ರ, ಚಂದ್ರಶೇಖರ ದಂಡಿನ, ಬಿ.ಜಿ.ಸುಂಕದ, ಪ್ರಕಾಶಗೌಡ ತಿರಕನಗೌಡ್ರ, ಎಂ.ಬಿ.ವೀರನಗೌಡ್ರ,
ಮಲ್ಲಿಕಾರ್ಜುನ ಪಾಟೀಲ, ನಿಂಗಣ್ಣ ಗಾಡಿ, ಗುರಪ್ಪ ಆದೆಪ್ಪನವರ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ