ಅಮಾನತು ಪ್ರಶ್ನಿಸಿ ಪತ್ನಿಯೊಂದಿಗೆ ಎಫ್ಡಿಸಿ ಧರಣಿ
Team Udayavani, Aug 19, 2021, 1:16 PM IST
ಗಜೇಂದ್ರಗಡ: ಸಮರ್ಪಕ ಕಾರಣಗಳಿಲ್ಲದೇ ತಮ್ಮನ್ನು ಅಮಾನತು ಮಾಡಿರುವುದನ್ನು ಪ್ರಶ್ನಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎಫ್ಡಿಸಿ ಜೆ.ಪಿ.ಜಯರಾಮ್ ಅವರು ಪತ್ನಿಯೊಂದಿಗೆ ಕಾರ್ಯಾಲಯ ಮುಂಭಾಗ ಮಂಗಳವಾರ ಸಂಜೆ ಧರಣಿ ನಡೆಸಿದರು.
ಎಫ್ಡಿಸಿ ಜೆ.ಪಿ.ಜಯರಾಮ್ ಅವರ ವ್ಯಾಪ್ತಿಯ ಕಡತಗಳಿಗೆ ಸಂಬಂಧಿಸಿದಂತೆ ಈ ಹಿಂದೆ ನೋಟಿಸ್ ನೀಡಲಾಗಿತ್ತು. ಆದರೆ ಎಫ್ ಡಿಸಿ ಜೆ.ಪಿ.ಜಯರಾಮ್ ಅವರು ನೋಟಿಸ್ ಗೆ ಉತ್ತರ ನೀಡದ ಹಿನ್ನೆಲೆಯಲ್ಲಿ ಆ.6ರಂದು ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಂದಾಯ ನಿರೀಕ್ಷಕರೊಂದಿಗೆ ವಾಗ್ವಾದವೂ ನಡೆದಿತ್ತು. ಈ ಕುರಿತು ಕಂದಾಯ ನಿರೀಕ್ಷಕರು ನೀಡಿದ್ದ ದೂರಿನನ್ವಯ ತಹಶೀಲ್ದಾರರು ಜಿಲ್ಲಾಧಿ ಕಾರಿಗಳಿಗೆ ವರದಿ ಸಲ್ಲಿಸಿದ್ದರು. ವರದಿ ಆಧರಿಸಿ ಜಿಲ್ಲಾಧಿಕಾರಿಗಳು ಎಫ್ಡಿಸಿ ಜೆ.ಪಿ.ಜಯರಾಮ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಆದೇಶ ಹೊರ ಬೀಳುತ್ತಿದ್ದಂತೆ ಎಫ್ಡಿಸಿ ಜೆ.ಪಿ. ಜಯರಾಮ್ ಅವರು ಪತ್ನಿಯೊಂದಿಗೆ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆಗೆ ಮುಂದಾದರು.
ಈ ವೇಳೆ ಮಾತನಾಡಿದ ಅಮಾನತುಗೊಂಡ ಎಫ್ಡಿಸಿ ಜೆ.ಪಿ.ಜಯರಾಮ್, ಕಳೆದ ಹಲವಾರು ವರ್ಷಗಳಿಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತ ಬಂದಿದ್ದೇನೆ. ನನ್ನ ಕಾರ್ಯಕ್ಷೇತ್ರದ ವ್ಯಾಪ್ತಿಯ ಎಲ್ಲ ಕಡತಗಳನ್ನು ನಿರ್ವಹಣೆ ಮಾಡಿದ್ದೇನೆ. ಆದರೆ ನನಗೆ ಈ ಹಿಂದಿನ ತಹಶೀಲ್ದಾರರು ನೀಡಿದ ನೋಟಿಸ್ ಗೆ ಉತ್ತರವನ್ನೂ ನೀಡಿದ್ದೇನೆ. ಆದರೆ ಈಗ ಸಮರ್ಪಕ ಕಾರಣಗಳಿಲ್ಲದೇ ವಿನಾಕಾರಣ ನನ್ನನ್ನು ಅಮಾನತು ಮಾಡಿರುವುದು ಸರಿಯಲ್ಲ. ತಹಶೀಲ್ದಾರ್ ಸಮ್ಮುಖದಲ್ಲಿ ನಡೆದ ಮಾತುಕತೆಯನ್ನು ಯಾವ ಅರ್ಥದಲ್ಲಿ ಬಿಂಬಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಮನವಿ ಮಾಡಿದರು.
ನನ್ನ ಪತಿ ಇಂದು, ನಿನ್ನೆ ನೌಕರಿಗೆ ಸೇರಿದವರಲ್ಲ. ಕಳೆದ ಹಲವಾರು ವರ್ಷಗಳಿಂದ ಜಿಲ್ಲೆಯ ಲಕ್ಷ್ಮೇಶ್ವರ, ಶಿರಹಟ್ಟಿ ಸೇರಿದಂತೆ ವಿವಿಧೆಡೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇದೀಗ ಯಾವುದೋ ದುರುದ್ದೇಶದಿಂದ ಮೇಲಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿ ನಿಷ್ಠಾವಂತ ಸಿಬ್ಬಂದಿಯನ್ನು ಅಮಾನತು ಮಾಡಿರುವುದು ಖಂಡನೀಯ. ಈ ಕುರಿತು ಮೇಲಧಿಕಾರಿಗಳು ತಕ್ಷಣ ಪರಿಶೀಲಿಸಿ ನನ್ನ ಪತಿಗೆ ನ್ಯಾಯ ದೊರಕಿಸಿಕೊಡಬೇಕು. ಇಲ್ಲದಿದ್ದರೆ ಕುಟುಂಬ ಸಮೇತ ತಹಶೀಲ್ದಾರ್ ಕಚೇರಿ ಮುಂದೆ ಕುಳಿತುಕೊಳ್ಳುತ್ತೇವೆ ಎಂದು ಅಳಲು ತೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ