ಪೊಲೀಸ್ ಠಾಣೆಗೆ ಬೀಳುವ ಭೀತಿ!
Team Udayavani, Oct 20, 2019, 3:09 PM IST
ಗಜೇಂದ್ರಗಡ: ಎಲ್ಲೆಂದರಲ್ಲಿ ಒಡೆದ ಹೆಂಚು, ಇಕ್ಕಟ್ಟಾದ ಕೊಠಡಿ, ಗಬ್ಬೆದ್ದು ನಾರುವ ಶೌಚಾಲಯ, ಮಳೆ ಬಂದರೆ ಇಡೀ ಕೊಠಡಿ ತುಂಬೆಲ್ಲ ಆವರಿಸುವ ಮಳೆ ನೀರು. ಇದು ಓಬೇರಾಯನ ಕಾಲದ ಗಜೇಂದ್ರಗಡ ಪೊಲೀಸ್ ಠಾಣೆ ದುಸ್ಥಿತಿ. ಜಿಲ್ಲೆಯಲ್ಲಿಯೇ ದೊಡ್ಡ ಪಟ್ಟಣವಾಗಿರುವ ಗಜೇಂದ್ರಗಡ ತಾಲೂಕು ಕೇಂದ್ರದಲ್ಲಿನ ಪೊಲೀಸ್ ಠಾಣೆ ದುಸ್ಥಿತಿಗೆ ತಲುಪಿದೆ. ಸದ್ಯದ ಠಾಣೆಗೆ 3 ಕೊಠಡಿಗಳಿದ್ದು, ಕೆಂಪು ಹೆಂಚಿನ ಕಟ್ಟಡಕ್ಕೆ ಅಪಾಯವೇ ಹೆಚ್ಚಾಗಿದ್ದು, ಅಲ್ಲಿನ ಸಿಬ್ಬಂದಿ ಗೋಳು ನರಕವೇದನೆಯಾಗಿದೆ.
ಗಜೇಂದ್ರಗಡ ಪೊಲೀಸ್ ಠಾಣೆಗೆ ಸ್ವಂತ ಕಟ್ಟಡವಿದ್ದರೂ ಯಾವಾಗ ಬೀಳುತ್ತದೆಯೋ ಎಂಬ ಭಯ ಒಡಮೂಡಿದೆ. ಮಳೆ ಬಂದ ಸಂದರ್ಭದಲ್ಲಿ ಎಲ್ಲ ಕೊಠಡಿಗಳು ಸೋರುತ್ತದೆ. ಕಡತಗಳು, ಗಣಕಯಂತ್ರಗಳನ್ನು ಮಳೆಯಿಂದ ಉಳಿಸಿಕೊಳ್ಳಲು ಸಿಬ್ಬಂದಿ ಹೆಣಗಾಡಬೇಕಾದ ಪರಿಸ್ಥಿತಿ ಉದ್ಭವಿಸಿದೆ.
ಶತಮಾನದ ಠಾಣೆಗಿಲ್ಲ ಕಟ್ಟಡ ಭಾಗ್ಯ: ಗಜೇಂದ್ರಗಡ ಪೊಲೀಸ್ ಠಾಣೆ 1912ರಲ್ಲಿ ನಿರ್ಮಿಸಲಾಗಿದೆ. ಆ ಸಂದರ್ಭದಲ್ಲಿ ಕೆಂಪು ಹೆಂಚಿನಿಂದ ನಿರ್ಮಿಸಲಾಗಿತ್ತು. ಅದೇ ಪರಂಪರೆ ಮುಂದುವರೆದಿದ್ದು, ಹೆಂಚುಗಳು ಮುರಿದ ಸಂದರ್ಭದಲ್ಲಿ ಬದಲಾವಣೆ ಮಾಡಲಾಗುತ್ತಿದೆ ಹೊರತು ಕಟ್ಟಡವನ್ನು ಮೇಲ್ದರ್ಜೆಗೇರಿಸುವ ಗೋಜಿಗೆ ಜನಪ್ರತಿನಿಧಿಗಳಾಗಲಿ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹೋಗದಿರುವುದು ಕಾರಣವಾಗಿದೆ. ಹೀಗಾಗಿ ಕಟ್ಟಡದ ಸ್ಥಿತಿ ಅದೋಗತಿಗೆ ತಲುಪಿದೆ.
ಒಂದು ಸುಸಜ್ಜಿತ ಪೊಲೀಸ್ ಠಾಣೆಗೆ 2 ಬಂದಿಖಾನೆ, 1 ಪಿಎಸ್ಐ, 1 ಅಪರಾಧ ಪಿಎಸ್ಐ, 1 ಬರಹಗಾರ, 1 ಗಣಕಯಂತ್ರ, 1 ಸಂಗ್ರಹಕಾರ ಕೊಠಡಿ, 1 ವಿಶ್ರಾಂತಿ ಗೃಹ ಕೊಠಡಿಗಳು ಇರಬೇಕು. ಆದರೆ ಗಜೇಂದ್ರಗಡ ಪೊಲೀಸ್ ಠಾಣೆ ಇದಕ್ಕೆ ತದ್ವಿರುದ್ಧವಾಗಿದೆ. ಇವೆಲ್ಲವೂ ಕೇವಲ 3 ಕೊಠಡಿಗಳಲ್ಲಿ ಅಸಮರ್ಪಕವಾಗಿ ಕಾರ್ಯ ನಿರ್ವಹಣೆಯಾಗುತ್ತಿದೆ.
ಇದ್ದು ಇಲ್ಲವಾದ ಬಂದಿಖಾನೆ: ಬಂಧಿಸಿದ ಅಪರಾಧಿಗಳನ್ನು ಹಾಕಲು ಗಜೇಂದ್ರಗಡ ಠಾಣೆಯಲ್ಲಿ ಬಂದಿಖಾನೆ ಇದ್ದು ಇಲ್ಲದಂತಾಗಿ ನಿರುಪಯುಕ್ತವಾಗಿದೆ. ವಿದ್ಯುತ್, ಸ್ವತ್ಛತೆ ಕೊರತೆಯಿಂದ ಬಳಲುತ್ತಿದೆ. ಹೀಗಾಗಿ ಅಪರಾದಿಗಳನ್ನು ಪೊಲೀಸರು ಬಳಸುವ ಕೊಠಡಿಯಲ್ಲಿ ಕೂಡಿ ಹಾಕುವ ಸ್ಥಿತಿ ಠಾಣೆಯಲ್ಲಿದೆ.
ದುರ್ಗಮ ಹಾದಿ: ಶಿಥಿಲಾವಸ್ಥೆಯಲ್ಲಿರುವ ಪೊಲೀಸ್ ಠಾಣೆಗೆ ತೆರಳುವ ಮಾರ್ಗ ಮಣ್ಣಿನಿಂದ ಕೂಡಿದೆ. ಪೊಲೀಸರಿಗೆ ಪರೇಡ್ ಮೈದಾನವಿಲ್ಲ. ವಾಹನ ನಿಲುಗಡೆಗೆ ಸೂಕ್ತ ಜಾಗೆಯಿಲ್ಲದ ಪರಿಣಾಮ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಲಾಗಿದೆ. ಕಿಟಕಿಗಳ ಗಾಜು ಸಂಪೂರ್ಣ ಪುಡಿಪುಡಿಯಾಗಿವೆ. ಜೋರಾಗಿ ಗಾಳಿ ಬೀಸಿದರೆ ವಿದ್ಯುತ್ ಸಂಪರ್ಕವೂ ಕಿತ್ತು ಹೋಗುವಂತಿದೆ. ಇತಿಹಾಸದ ಮೆಲುಕಾಗಿರುವ ಗಜೇಂದ್ರಗಡ ಪೊಲೀಸ್ ಠಾಣೆ ವಾಸಿಸಲು ಯೋಗ್ಯವಿಲ್ಲ ಎಂದು 2016ರಲ್ಲಿಯೇ ಲೋಕೋಪಯೋಗಿ ಇಲಾಖೆ ಪೊಲೀಸ್ ಇಲಾಖೆಗೆ ತಿಳಿಸಿದೆ, ಆದರೆ ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಿ ಪೊಲೀಸ್ ಠಾಣೆಗೆ ಹೊಸ ಕಟ್ಟಡ ನಿರ್ಮಾಣದ ಗೋಜಿಗೆ ಹೋಗದಿರುವುದು ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿ: ಗಜೇಂದ್ರಗಡ ಪೊಲೀಸ್ ಠಾಣೆಯತ್ತ ಗಮನಹರಿಸಿ ಪೊಲೀಸ್ ಠಾಣೆಗೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಿಕೊಡಬೇಕಾದ ಅಗತ್ಯವಿದೆ. ಸಾರ್ವಜನಿಕರ ರಕ್ಷಣೆಗಾಗಿ ಹಗಲು ರಾತ್ರಿ ಎನ್ನದೆ ಕಾರ್ಯ ನಿರ್ವಹಿಸುವ ಪೊಲೀಸರು ನೆಮ್ಮದಿಯಾಗಿ ಕೆಲಸ ಮಾಡಲು ಸುಸಜ್ಜಿತ ಕಟ್ಟಡದಲ್ಲಿ ಠಾಣೆ ನಿರ್ಮಿಸಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕೆನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.
ಪೊಲೀಸ್ ಠಾಣೆಯೇ ಸುಸಜ್ಜಿತ ಕಟ್ಟಡವಿಲ್ಲದೆ ನಡೆಯುತ್ತಿರುವುದನ್ನು ಗಮನಿಸಿದರೆ ಬೇರೆ ಎಲ್ಲದಕ್ಕೂ ಲಕ್ಷಾಂತರ ರೂ. ಖರ್ಚು ಮಾಡುವ ಸರ್ಕಾರ ಪೊಲೀಸ್ ಇಲಾಖೆ ಠಾಣೆಗೆ ಒಂದು ಸುಸಜ್ಜಿತ ಕಟ್ಟಡ ನಿರ್ಮಿಸದಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ಕೂಡಲೇ ಗೃಹ ಇಲಾಖೆ ಗಜೇಂದ್ರಗಡ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಕ್ರಮ ಜರುಗಿಸಬೇಕಿದೆ.–ಅಜೀತ ಬಾಗಮಾರ, ಬಾಗಮಾರ ಸೇವಾ ಸಮಿತಿ ಕಾರ್ಯದರ್ಶಿ
-ಡಿ.ಜಿ. ಮೋಮಿನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ