![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ರೋಣಕ್ಕೆ ನೀರು ಕೊಡದಿದ್ದರೆ ಉಗ್ರ ಹೋರಾಟ
Team Udayavani, May 14, 2019, 1:57 PM IST
![gad-3](https://www.udayavani.com/wp-content/uploads/2019/05/gad-3-5-620x322.jpg)
ರೋಣ: ಗ್ರಾಮೀಣ ಪ್ರದೇಶದಲ್ಲಿನ ಬಹುಗ್ರಾಮ ಕುಡಿವ ನೀರಿನ ಯೋಜನೆ ವಿಸ್ತರಿಸಿ ಪಟ್ಟಣದ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತ ಮುಂದಾಗಬೇಕು. ಇಲ್ಲವಾದಲ್ಲಿ ಮಹಿಳಾ ರೈತ ಸಂಘದಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರೈತ ಮಹಿಳಾ ಸಂಘದ ರಾಜ್ಯ ಉಪಾಧ್ಯಕ್ಷೆ ಲೀಲಾವತಿ ಚಿತ್ರಗಾರ ಎಚ್ಚರಿಸಿದರು.
ಪಟ್ಟಣದ ರೈತ ಸಂಘದ ಕಾರ್ಯಾಲಯದಲ್ಲಿ ಮಹಿಳಾ ಸದಸ್ಯರ ಸಭೆ ನಡೆಸಿ ಅವರು ಮಾತನಾಡಿದರು.ಪಟ್ಟಣದಲ್ಲಿ ಸದ್ಯ ನೀರಿನ ಸಮಸ್ಯೆಯಿದ್ದು, ವಾರ, ಹದಿನೈದು ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದ್ದು, ಅವುಗಳು ಸಮರ್ಪಕ ಪೂರೈಕೆಯಾಗುತ್ತಿಲ್ಲ. ಇದರಿಂದ ಜನ, ಜಾನುವಾರುಗಳಿಗೆ ನೀರು ಸಾಕಾಗುತ್ತಿಲ್ಲ. ನಿತ್ಯವೂ ನೀರಿಗಾಗಿ ಪರದಾಡುವಂತ ಪರಿಸ್ಥಿತಿಯಿದೆ. ಮಹಿಳೆಯರು ಮನೆ ಕೆಲಸ, ಕೂಲಿ ಕೆಲಸ ಬಿಟ್ಟು ನೀರಿಗಾಗಿ ಕಾಯುವಂತಾಗಿದೆ. ಪಟ್ಟಣವು ಅನೇಕ ವರ್ಷಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದೆ. ಅಂತರ್ಜಲ ಕುಸಿತದಿಂದ ಕೊಳೆವೆಬಾವಿ ಜಲ ಆಳಕ್ಕಿಳಿದಿದ್ದು, ಈ ಮೂಲಕ ನೀರು ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ. ಪ್ರತಿವರ್ಷ ಬೇಸಿಗೆಯಲ್ಲಂತೂ ನೀರಿನ ಸಮಸ್ಯೆ ಹೇಳತೀರದಾಗಿದೆ. ಇದಕ್ಕಾಗಿ ರೈತರು, ರೈತ ಮಹಿಳೆಯರು, ವ್ಯಾಪಾರಸ್ಥರು ಬೀದಿಗಿಳಿದು ಹೋರಾಟ ಮಾಡುತ್ತಲೆ ಬರಲಾಗುತ್ತಿದೆ. ಆದರೂ ಶಾಶ್ವತ ಪರಿಹಾರ ಮಾತ್ರ ಈವರೆಗೂ ಸಿಕ್ಕಿಲ್ಲ. ಆದ್ದರಿಂದ ಜಿಲ್ಲಾಧಿಕಾರಿಗಳು ಪಟ್ಟಣದ ಬಹು ವರ್ಷದ ಬೇಡಿಕೆಯಾದ ನೀರಿನ ಸಮಸ್ಯೆ ನಿವಾರಣೆಗೆ ಮುಂದಾಗಬೇಕು. ಈ ದಿಶೆಯಲ್ಲಿ ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿನ ಬಹು ಗ್ರಾಮ ಕುಡಿವ ನೀರಿನ ಯೋಜನೆಯನ್ನು ರೋಣ ಪಟ್ಟಣಕ್ಕೂ ವಿಸ್ತರಿಸುವಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರೈತ ಮಹಿಳಾ ಸಂಘದ ಉಪಾಧ್ಯಕ್ಷೆ ಮೀನಾಕ್ಷಿ ಬಸನಗೌಡ್ರ, ಸುಮಂಗಲಾ ವಕ್ರಾಣಿ, ಕವಿತಾ ಹಿರೇಮಠ, ಶಾರದಾ ಸಂಗನಾಳ, ಮಲ್ಲಮ್ಮ ಜಗ್ಗಲ, ವರದಾ ವೀರಕ್ತಮಠ, ರುದ್ರಮ್ಮ ಸೊಬರದ, ರೇಣುಕಾ ಕಡಿವಾಲ, ಮಲ್ಲಮ್ಮ ಗದಗಿನ, ಗೀತಾ ಕುರಿ, ಅಂಬವ್ವ ಚಿತ್ರಗಾರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.