ರೋಣಕ್ಕೆ ನೀರು ಕೊಡದಿದ್ದರೆ ಉಗ್ರ ಹೋರಾಟ


Team Udayavani, May 14, 2019, 1:57 PM IST

gad-3

ರೋಣ: ಗ್ರಾಮೀಣ ಪ್ರದೇಶದಲ್ಲಿನ ಬಹುಗ್ರಾಮ ಕುಡಿವ ನೀರಿನ ಯೋಜನೆ ವಿಸ್ತರಿಸಿ ಪಟ್ಟಣದ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತ ಮುಂದಾಗಬೇಕು. ಇಲ್ಲವಾದಲ್ಲಿ ಮಹಿಳಾ ರೈತ ಸಂಘದಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರೈತ ಮಹಿಳಾ ಸಂಘದ ರಾಜ್ಯ ಉಪಾಧ್ಯಕ್ಷೆ ಲೀಲಾವತಿ ಚಿತ್ರಗಾರ ಎಚ್ಚರಿಸಿದರು.

ಪಟ್ಟಣದ ರೈತ ಸಂಘದ ಕಾರ್ಯಾಲಯದಲ್ಲಿ ಮಹಿಳಾ ಸದಸ್ಯರ ಸಭೆ ನಡೆಸಿ ಅವರು ಮಾತನಾಡಿದರು.ಪಟ್ಟಣದಲ್ಲಿ ಸದ್ಯ ನೀರಿನ ಸಮಸ್ಯೆಯಿದ್ದು, ವಾರ, ಹದಿನೈದು ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದ್ದು, ಅವುಗಳು ಸಮರ್ಪಕ ಪೂರೈಕೆಯಾಗುತ್ತಿಲ್ಲ. ಇದರಿಂದ ಜನ, ಜಾನುವಾರುಗಳಿಗೆ ನೀರು ಸಾಕಾಗುತ್ತಿಲ್ಲ. ನಿತ್ಯವೂ ನೀರಿಗಾಗಿ ಪರದಾಡುವಂತ ಪರಿಸ್ಥಿತಿಯಿದೆ. ಮಹಿಳೆಯರು ಮನೆ ಕೆಲಸ, ಕೂಲಿ ಕೆಲಸ ಬಿಟ್ಟು ನೀರಿಗಾಗಿ ಕಾಯುವಂತಾಗಿದೆ. ಪಟ್ಟಣವು ಅನೇಕ ವರ್ಷಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದೆ. ಅಂತರ್ಜಲ ಕುಸಿತದಿಂದ ಕೊಳೆವೆಬಾವಿ ಜಲ ಆಳಕ್ಕಿಳಿದಿದ್ದು, ಈ ಮೂಲಕ ನೀರು ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ. ಪ್ರತಿವರ್ಷ ಬೇಸಿಗೆಯಲ್ಲಂತೂ ನೀರಿನ ಸಮಸ್ಯೆ ಹೇಳತೀರದಾಗಿದೆ. ಇದಕ್ಕಾಗಿ ರೈತರು, ರೈತ ಮಹಿಳೆಯರು, ವ್ಯಾಪಾರಸ್ಥರು ಬೀದಿಗಿಳಿದು ಹೋರಾಟ ಮಾಡುತ್ತಲೆ ಬರಲಾಗುತ್ತಿದೆ. ಆದರೂ ಶಾಶ್ವತ ಪರಿಹಾರ ಮಾತ್ರ ಈವರೆಗೂ ಸಿಕ್ಕಿಲ್ಲ. ಆದ್ದರಿಂದ ಜಿಲ್ಲಾಧಿಕಾರಿಗಳು ಪಟ್ಟಣದ ಬಹು ವರ್ಷದ ಬೇಡಿಕೆಯಾದ ನೀರಿನ ಸಮಸ್ಯೆ ನಿವಾರಣೆಗೆ ಮುಂದಾಗಬೇಕು. ಈ ದಿಶೆಯಲ್ಲಿ ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿನ ಬಹು ಗ್ರಾಮ ಕುಡಿವ ನೀರಿನ ಯೋಜನೆಯನ್ನು ರೋಣ ಪಟ್ಟಣಕ್ಕೂ ವಿಸ್ತರಿಸುವಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೈತ ಮಹಿಳಾ ಸಂಘದ ಉಪಾಧ್ಯಕ್ಷೆ ಮೀನಾಕ್ಷಿ ಬಸನಗೌಡ್ರ, ಸುಮಂಗಲಾ ವಕ್ರಾಣಿ, ಕವಿತಾ ಹಿರೇಮಠ, ಶಾರದಾ ಸಂಗನಾಳ, ಮಲ್ಲಮ್ಮ ಜಗ್ಗಲ, ವರದಾ ವೀರಕ್ತಮಠ, ರುದ್ರಮ್ಮ ಸೊಬರದ, ರೇಣುಕಾ ಕಡಿವಾಲ, ಮಲ್ಲಮ್ಮ ಗದಗಿನ, ಗೀತಾ ಕುರಿ, ಅಂಬವ್ವ ಚಿತ್ರಗಾರ ಸೇರಿದಂತೆ ಅನೇಕರು ಇದ್ದರು.

ಉಗ್ರ ಪ್ರತಿಭಟನೆ ಎಚ್ಚರಿಕೆ

ಪುರಸಭೆ ಸದಸ್ಯರು ನೀರಿಗಾಗಿ ಮೇ 14ರಂದು ಹಮ್ಮಿಕೊಂಡ ಧರಣಿ ಸತ್ಯಾಗ್ರಹಕ್ಕೆ ರೈತ ಮಹಿಳಾ ಸಂಘದಿಂದ ಸಂಪೂರ್ಣ ಬೆಂಬಲವಿದ್ದು, ನಾವು ಸಹ ನಿರಂತರ ಹೋರಾಟದಲ್ಲಿ ಪಾಲ್ಗೊಳ್ಳುತ್ತೇವೆ. ಜೊತೆಗೆ ಮನೆಯಲ್ಲಿದ್ದ ಖಾಲಿ ಕೊಡ, ಎತ್ತು ಚಕ್ಕಡಿ ಸಮೇತ ಬೀದಿಗಿಳಿದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಈಗಾಗಲೇ ಗ್ರಾಮೀಣ ಪ್ರದೇಶದ ಬಹುಗ್ರಾಮ ಕುಡಿವ ನೀರಿನ ಯೋಜನೆಯನ್ನು ಗಜೇಂದ್ರಗಡ ಪಟ್ಟಣಕ್ಕೆ ವಿಸ್ತರಿಸಿದ್ದು, ಅದರಂತೆ ರೋಣ ಪಟ್ಟಣಕ್ಕೂ ವಿಸ್ತರಿಸಬೇಕು. ಕೂಡಲೇ ರೋಣ ಜನತೆಯ ನೀರಿನ ಬೇಡಿಕೆ ಈಡೇರಿಸುವಲ್ಲಿ ಜಿಲ್ಲಾಡಳಿತ ಗಮನ ಹರಿಸಬೇಕು. ಇಲ್ಲವಾದಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ರೈತ ಮಹಿಳಾ ಸಂಘದ ಉಪಾಧ್ಯಕ್ಷೆ ಲೀಲಾವತಿ ಚಿತ್ರಗಾರ ಎಚ್ಚರಿಸಿದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.