ರೋಣಕ್ಕೆ ನೀರು ಕೊಡದಿದ್ದರೆ ಉಗ್ರ ಹೋರಾಟ
Team Udayavani, May 14, 2019, 1:57 PM IST
ರೋಣ: ಗ್ರಾಮೀಣ ಪ್ರದೇಶದಲ್ಲಿನ ಬಹುಗ್ರಾಮ ಕುಡಿವ ನೀರಿನ ಯೋಜನೆ ವಿಸ್ತರಿಸಿ ಪಟ್ಟಣದ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತ ಮುಂದಾಗಬೇಕು. ಇಲ್ಲವಾದಲ್ಲಿ ಮಹಿಳಾ ರೈತ ಸಂಘದಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರೈತ ಮಹಿಳಾ ಸಂಘದ ರಾಜ್ಯ ಉಪಾಧ್ಯಕ್ಷೆ ಲೀಲಾವತಿ ಚಿತ್ರಗಾರ ಎಚ್ಚರಿಸಿದರು.
ಪಟ್ಟಣದ ರೈತ ಸಂಘದ ಕಾರ್ಯಾಲಯದಲ್ಲಿ ಮಹಿಳಾ ಸದಸ್ಯರ ಸಭೆ ನಡೆಸಿ ಅವರು ಮಾತನಾಡಿದರು.ಪಟ್ಟಣದಲ್ಲಿ ಸದ್ಯ ನೀರಿನ ಸಮಸ್ಯೆಯಿದ್ದು, ವಾರ, ಹದಿನೈದು ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದ್ದು, ಅವುಗಳು ಸಮರ್ಪಕ ಪೂರೈಕೆಯಾಗುತ್ತಿಲ್ಲ. ಇದರಿಂದ ಜನ, ಜಾನುವಾರುಗಳಿಗೆ ನೀರು ಸಾಕಾಗುತ್ತಿಲ್ಲ. ನಿತ್ಯವೂ ನೀರಿಗಾಗಿ ಪರದಾಡುವಂತ ಪರಿಸ್ಥಿತಿಯಿದೆ. ಮಹಿಳೆಯರು ಮನೆ ಕೆಲಸ, ಕೂಲಿ ಕೆಲಸ ಬಿಟ್ಟು ನೀರಿಗಾಗಿ ಕಾಯುವಂತಾಗಿದೆ. ಪಟ್ಟಣವು ಅನೇಕ ವರ್ಷಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದೆ. ಅಂತರ್ಜಲ ಕುಸಿತದಿಂದ ಕೊಳೆವೆಬಾವಿ ಜಲ ಆಳಕ್ಕಿಳಿದಿದ್ದು, ಈ ಮೂಲಕ ನೀರು ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ. ಪ್ರತಿವರ್ಷ ಬೇಸಿಗೆಯಲ್ಲಂತೂ ನೀರಿನ ಸಮಸ್ಯೆ ಹೇಳತೀರದಾಗಿದೆ. ಇದಕ್ಕಾಗಿ ರೈತರು, ರೈತ ಮಹಿಳೆಯರು, ವ್ಯಾಪಾರಸ್ಥರು ಬೀದಿಗಿಳಿದು ಹೋರಾಟ ಮಾಡುತ್ತಲೆ ಬರಲಾಗುತ್ತಿದೆ. ಆದರೂ ಶಾಶ್ವತ ಪರಿಹಾರ ಮಾತ್ರ ಈವರೆಗೂ ಸಿಕ್ಕಿಲ್ಲ. ಆದ್ದರಿಂದ ಜಿಲ್ಲಾಧಿಕಾರಿಗಳು ಪಟ್ಟಣದ ಬಹು ವರ್ಷದ ಬೇಡಿಕೆಯಾದ ನೀರಿನ ಸಮಸ್ಯೆ ನಿವಾರಣೆಗೆ ಮುಂದಾಗಬೇಕು. ಈ ದಿಶೆಯಲ್ಲಿ ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿನ ಬಹು ಗ್ರಾಮ ಕುಡಿವ ನೀರಿನ ಯೋಜನೆಯನ್ನು ರೋಣ ಪಟ್ಟಣಕ್ಕೂ ವಿಸ್ತರಿಸುವಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರೈತ ಮಹಿಳಾ ಸಂಘದ ಉಪಾಧ್ಯಕ್ಷೆ ಮೀನಾಕ್ಷಿ ಬಸನಗೌಡ್ರ, ಸುಮಂಗಲಾ ವಕ್ರಾಣಿ, ಕವಿತಾ ಹಿರೇಮಠ, ಶಾರದಾ ಸಂಗನಾಳ, ಮಲ್ಲಮ್ಮ ಜಗ್ಗಲ, ವರದಾ ವೀರಕ್ತಮಠ, ರುದ್ರಮ್ಮ ಸೊಬರದ, ರೇಣುಕಾ ಕಡಿವಾಲ, ಮಲ್ಲಮ್ಮ ಗದಗಿನ, ಗೀತಾ ಕುರಿ, ಅಂಬವ್ವ ಚಿತ್ರಗಾರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!