24 ಗಂಟೆ ವಿದ್ಯುತ್‌ ನೀಡದಿದ್ದರೆ ಉಗ್ರ ಹೋರಾಟ

ರೈತ ಹೋರಾಟ ಸಮಿತಿ ಅಧ್ಯಕ್ಷ ಮುತ್ತಣ್ಣ ಮ್ಯಾಗೇರಿ ಎಚ್ಚರಿಕೆ ; ಉಣಚಗೇರಿ ರೈತರಿಗೆ ಉಚಿತ ವಿದ್ಯುತ್‌ಗೆ ಆಗ್ರಹ

Team Udayavani, Sep 22, 2022, 4:53 PM IST

25

ಗಜೇಂದ್ರಗಡ: ಸರ್ಕಾರ ಪ್ರತಿ ರೈತರಿಗೂ ಮಾಸಿಕ 777 ಯೂನಿಟ್‌ ಉಚಿತ ವಿದ್ಯುತ್‌ ನೀಡಬೇಕೆಂದು ಆದೇಶ ಹೊರಡಿಸಿದ್ದರೂ ಹೆಸ್ಕಾಂ ಅಧಿಕಾರಿಗಳು ರೈತರಿಗೆ ದೊರಕಬೇಕಾದ ವಿದ್ಯುತ್‌ ಲೂಟಿ ಮಾಡುತ್ತಿರುವುದು ಖಂಡನೀಯ. ಕೂಡಲೇ ನಮಗೆ 24 ಗಂಟೆಗಳ ಕಾಲ ವಿದ್ಯುತ್‌ ನೀಡಬೇಕು. ಇಲ್ಲದಿದ್ದರೆ, ಹೋರಾಟ ತೀವ್ರ ಸ್ವರೂಪ ಪಡೆಯಲಿದೆ ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ಮುತ್ತಣ್ಣ ಮ್ಯಾಗೇರಿ ಎಚ್ಚರಿಕೆ ನೀಡಿದರು.

ಪಟ್ಟಣದ ಎಪಿಎಂಸಿ ಆವರಣದ ರೈತ ಭವನದಲ್ಲಿ ಬುಧವಾರ ಉಣಚಗೇರಿ ಹದ್ದಿನ ರೈತರು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 5 ಎಚ್‌ಪಿ ಮೋಟಾರ್‌ ಪಂಪ್‌ಸೆಟ್‌ ಹೊಂದಿರುವ ರೈತರಿಗೆ ಮಾಸಿನ 777 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡಬೇಕೆಂದು ಸರ್ಕಾರವೇ ಯೋಜನೆ ಜಾರಿಗೆ ತಂದು ಹಲವು ವರ್ಷಗಳೇ ಕಳೆದಿವೆ. ಅದರಂತೆಯೇ ಸರ್ಕಾರ ಇದಕ್ಕೆ ತಗಲುವ ಅನುದಾನವನ್ನು ಹೆಸ್ಕಾಂ ಇಲಾಖೆಗೆ ಭರಣಾ ಮಾಡುತ್ತದೆ. ಆದರೆ, ಈ ಭಾಗದ ರೈತರ ಬಹುತೇಕ 1 ರಿಂದ 2 ಎಚ್‌ಪಿ ಮಾತ್ರ ಇವೆ. ದಿನದ 24 ಗಂಟೆ ವಿದ್ಯುತ್‌ ಉಪಯೋಗಿಸಿದರೂ 600 ಯೂನಿಟ್‌ ಬಳಕೆಯಾಗುವುದಿಲ್ಲ. ಪ್ರತಿ ತಿಂಗಳು ನೂರಾರು ಯೂನಿಟ್‌ ಹೆಸ್ಕಾಂಗೆ ವಿದ್ಯುತ್‌ ಉಳಿತಾಯವಾಗುತ್ತದೆ. ಇಷ್ಟೆಲ್ಲಾ ಇದ್ದರೂ ವಿದ್ಯುತ್‌ ನೀಡದೇ ಹೆಸ್ಕಾಂ ವಿದ್ಯುತ್‌ ಹಗಲು ದರೋಡೆ ಮಾಡುತ್ತಿದೆ ಎಂದು ಆರೋಪಿಸಿದರು.

ಉಣಚಗೇರಿ ಹದ್ದಿನಲ್ಲಿ ಒಟ್ಟು 248 ಪಂಪ್‌ ಸೆಟ್‌ಗಳಿಗೆ ಪ್ರತಿ ವರ್ಷ 1.92 ಲಕ್ಷ ಯೂನಿಟ್‌ ವಿದ್ಯುತ್‌ ಉಪಯೋಗವಾಗುತ್ತಿದೆ. ಆದರೆ, ಸರ್ಕಾರ ಯೋಜನೆಯಿಂದ ಉಣಚಗೇರಿಯ ರೈತರಿಗೆ ಪ್ರತಿ ವರ್ಷ 23 ಲಕ್ಷ ಯೂನಿಟ್‌ ವಿದ್ಯುತ್‌ ಪೂರೈಕೆಯಾಗುತ್ತಿದೆ. ಇನ್ನುಳಿದ ವಿದ್ಯುತ್‌ ಎಲ್ಲಿ ಪೂರೈಕೆಯಾಗುತ್ತಿದೆ. ಇದೊಂದು ದೊಡ್ಡ ಹಗರಣವಾಗಿದ್ದು, ಇದರ ಹಿಂದೆ ಕಾಣದ ಕೈಗಳು ಅಡಗಿವೆ ಎಂದು ಅನುಮಾನ ವ್ಯಕ್ತಪಡಿಸಿದರು.

ರೈತರಿಗೆ ಹೆಸ್ಕಾಂ ದಿನದ 24 ಗಂಟೆಗಳ ಕಾಲ ವಿದ್ಯುತ್‌ ಪೂರೈಸಿದರೂ ಹೆಸ್ಕಾಂಗೆ ದೊಡ್ಡ ಪ್ರಮಾಣದಲ್ಲಿ ವಿದ್ಯುತ್‌ ಉಳಿತಾಯವಾಗುತ್ತದೆ. ಹೀಗಿದ್ದರೂ, 7 ಗಂಟೆ ಮಾತ್ರ ವಿದ್ಯುತ್‌ ನೀಡುವ ಮೂಲಕ ರೈತರನ್ನು ಕತ್ತಲು ಕೊಣೆಗೆ ತಳ್ಳುವ ನೀತಿ ಅನುಸರಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಹೆಸ್ಕಾಂ ಮುಗ್ಧ ರೈತರನ್ನು ವಂಚಿಸಿ, ದೊಡ್ಡ, ದೊಡ್ಡ ಕಾರ್ಖಾನೆಗಳು, ಜನಪ್ರತಿನಿಧಿಗಳ ಕಾರ್ಖಾನೆಗಳಿಗೆ ವಿದ್ಯುತ್‌ ಪೂರೈಕೆ ಮಾಡುವ ಜಾಲವನ್ನು ವ್ಯಾಪಕವಾಗಿ ಹರಡಿದೆ. ಈ ಕುರಿತು ದೊಡ್ಡ ಮಟ್ಟದ ತನಿಖೆಯಾಗಬೇಕು. ಉಣಚಗೇರಿ ರೈತರಿಗೆ ದಿನದ 24 ಗಂಟೆ ವಿದ್ಯುತ್‌ ನೀಡಲು ಮುಂದಾಗಬೇಕೆಂದು ಒತ್ತಾಯಿಸಿದರು.

ಹೋರಾಟ ಸಮಿತಿ ಉಪಾಧ್ಯಕ್ಷ ಇಸ್ಮಾಯಿಲಸಾಬ ಗೊಲಗೇರಿ ಮಾತನಾಡಿ, ಸರ್ಕಾರದ ಯೋಜನೆಯಂತೆ ಉಣಚಗೇರಿ ಹದ್ದಿನ ರೈತರಿಗೆ ದಿನದ 24 ಗಂಟೆಗಳ ಕಾಲ ವಿದ್ಯುತ್‌ ಪೂರೈಸಿದರೂ ಹೆಸ್ಕಾಂಗೆ ವಾರ್ಷಿಕ 51 ಸಾವಿರ ಯೂನಿಟ್‌ ವಿದ್ಯುತ್‌ ಉಳಿತಾಯವಾಗುತ್ತದೆ. ಆದರೂ, ಹೆಸ್ಕಾಂ ಅಧಿಕಾರಿಗಳು ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ರೈತರನ್ನೇ ಮೃತ್ಯುಕೂಪಕ್ಕೆ ತಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಈ ಕುರಿತು ಹೆಸ್ಕಾಂ ಎಂಡಿ ಅವರ ಜೊತೆಗೆ ರೈತರು ಚರ್ಚಿ ನಡೆಸಿ, ವಿದ್ಯುತ್‌ ಪೂರೈಕೆಗೆ ಮತ್ತೂಮ್ಮೆ ಒತ್ತಾಯಿಸಲಾಗುವುದು. ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಉಗ್ರ ಸ್ವರೂಪದ ಹೋರಾಟಗಳು ರೂಪುಗೊಳ್ಳಲಿವೆ ಎಂದು ಎಚ್ಚರಿಸಿದರು.

ಬಸವರಾಜ ಪಲ್ಲೇದ, ಹನೀಫ್‌ ಕಟ್ಟಿಮನಿ, ಅಮರೇಶ ಹಿರೇಕೊಪ್ಪ, ಮುರ್ತುಜಾ ಡಾಲಾಯತ್‌, ಬಸವರಾಜ ಚನ್ನಿ, ನರಸಿಂಗಸಾ ರಂಗ್ರೇಜಿ, ರಾಜಪ್ಪ ದಾರೋಜಿ, ಪುಲಕೇಶಿ ವದೆಗೋಳ, ಸಿದ್ದು ಗೊಂಗಡಶೆಟ್ಟಿಮಠ, ವಿಜಯಕುಮಾರ ಜಾಧವ, ನಾಗಪ್ಪ ವದೆಗೋಳ, ಶರಣಪ್ಪ ಭಗವತಿ, ಬಸವರಾಜ ನಂದಿಹಾಳ, ಚಂದ್ರು ಹೂಗಾರ, ಶಿವಪ್ಪ ಕುಂಬಾರ, ಯಲ್ಲಪ್ಪ ಗದ್ದಿ ಇತರರಿದ್ದರು.

ವಿಪಕ್ಷ ನಾಯಕರಿಗೆ ರೈತರ ಮನವಿ

ಕೆಲ ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಗಜೇಂದ್ರಗಡದ ಊಣಚಗೇರಿ ಹದ್ದಿನ ರೈತರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ ಅವರನ್ನು ಭೇಟಿ ಮಾಡಿ, ರೈತರಿಗೆ ಆಗುತ್ತಿರುವ ವಿದ್ಯುತ್‌ ಅಭಾವದ ಜೊತೆಗೆ ಹೆಸ್ಕಾಂ ವಿದ್ಯುತ್‌ ಹಗರಣದ ಕುರಿತು ಸದನದಲ್ಲಿ ಸರ್ಕಾರದ ಗಮನ ಸೆಳೆಯಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.