ರೋಗಿಗಳಲ್ಲಿ ಆತ್ಮಸ್ಥೈರ್ಯ ತುಂಬಿ

•ವೈದ್ಯಕೀಯ ಕಾರ್ಯಾಗಾರ-ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ

Team Udayavani, May 19, 2019, 12:01 PM IST

gadaga-tdy-2..

ದಗ: ಜಿಮ್ಸ್‌ ಕಾಲೇಜಿನಲ್ಲಿ ಆಯೋಜಿಸಿದ್ದ ವೈದ್ಯಕೀಯ ಕಾರ್ಯಾಗಾರ ಹಾಗೂ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಡಾ| ಸಿ.ಆರ್‌. ಚಂದ್ರಶೇಖರ್‌ ಅವರನ್ನು ಸನ್ಮಾನಿಸಲಾಯಿತು.

ಗದಗ: ವೈದ್ಯರಲ್ಲಿ ಸಂವಹನ ಕೊರತೆಯಿಂದಾಗಿ ರೋಗಿಗಳು ಮತ್ತು ವೈದ್ಯರ ನಡುವಿನ ಅಂತರ ಬೆಳೆಯುತ್ತಿದೆ. ರೋಗಿಗಳಿಗೆ ಔಷಧೋಪಚಾರ ನೀಡುವುದರೊಂದಿಗೆ ಅವರಲ್ಲಿ ಆತ್ಮಸ್ಥೈರ್ಯವನ್ನು ತುಂಬುವ ಮೂಲಕ ತ್ವರಿತಗತಿಯಲ್ಲಿ ಗುಣಮುಖರನ್ನಾಗಿಸಬೇಕು ಎಂದು ಬೆಂಗಳೂರು ನಿಮ್ಹಾನ್ಸ್‌ನ ನಿವೃತ್ತ ಮನೋವೈದ್ಯ ಡಾ| ಸಿ.ಆರ್‌. ಚಂದ್ರಶೇಖರ ಸಲಹೆ ನೀಡಿದರು.

ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮನೋವೈದ್ಯ ವಿಭಾಗದಿಂದ ನಗರದ ಜಿಮ್ಸ್‌ ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ವೈದ್ಯಕೀಯ ಕಾರ್ಯಾಗಾರ ಹಾಗೂ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನಾನಾ ಕಾರಣಗಳಿಂದಾಗಿ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ವೃತ್ತಿ ಕೌಶಲ ಹಾಗೂ ರೋಗಿಗಳೊಂದಿಗೆ ಸಂವಹನ ಕಡಿಮೆಯಾಗುತ್ತಿದೆ. ರೋಗಿಗಳಿಂದಲೇ ಕಾಯಿಲೆಗಳ ಗುಣಲಕ್ಷಣ ಅರಿತುಕೊಂಡು ಔಷಧೀಯ ಚೀಟಿ ಬರೆಯುವ ಪ್ರವೃತ್ತಿ ಬೆಳೆಯುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದರು.

ರೋಗಿಗಳಿಗೆ ಔಷಧೋಪಚಾರಕ್ಕಿಂತ ಅವರ ಆತ್ಮಸ್ಥೈರ್ಯವನ್ನು ತುಂಬುವ ಕೆಲಸ ಆಗಬೇಕಿದೆ. ಇದರಿಂದ ಮಾನಸಿಕವಾಗಿ ಕುಗ್ಗಿರುವ ರೋಗಿಗಳಲ್ಲಿ ಹೊಸ ಭರವಸೆ ಮೂಡಿಸುವುದರೊಂದಿಗೆ ಶೀಘ್ರಗತಿಯಲ್ಲಿ ಅವರನ್ನು ಗುಣಪಡಿಸಬಹುದಾಗಿದೆ. ಈ ನಿಟ್ಟಿನಲ್ಲಿ ರೋಗಿಗಳ ಕೌನ್ಸೆಲಿಂಗ್‌ ಎಂಬುದು ಚಿಕಿತ್ಸೆಗಿಂತ ಪರಿಣಾಮಕಾರಿ ಆಗುತ್ತದೆ. ಅಲ್ಲದೇ, ಆಧುನಿಕ ಜೀವನ ಶೈಲಿಯಿಂದಾಗಿ ಪ್ರತಿಯೊಬ್ಬರೂ ಒಂದಲ್ಲ ಒಂದು ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಕಾಯಿಲೆಗಳು ಗಂಭೀರ ಸ್ವರೂಪ ಪಡೆದುಕೊಳ್ಳದಂತೆ ರೋಗಿಗಳ ಕೌನ್ಸೆಲಿಂಗ್‌ ಮೂಲಕ ಪ್ರಾಥಮಿಕ ಹಂತದಲ್ಲೇ ಹತೋಟಿಗೆ ತರಲು ಮನೋವೈದ್ಯರು ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.

ಜಿಮ್ಸ್‌ ಕಾಲೇಜಿನ ಉಪನ್ಯಾಸಕ ಪ್ರೊ| ಡಾ| ಎಸ್‌.ಎಸ್‌. ಹರಸೂರ ಮಾತನಾಡಿ, ವೈದ್ಯಕೀಯ ವೃತ್ತಿ ಎಂಬುದು ಸೇವೆಯಾಗಬೇಕೇ ಹೊರತು, ಉದ್ಯಮವಾಗಿ ಬದಲಾಗಬಾರದು. ಆದರೆ, ಶೇ. 2ರಷ್ಟು ಉದ್ಯಮವಾಗಿ ಬೆಳೆದಿದ್ದರೂ ತನ್ನ ಸೇವಾ ಮನೋಭಾವನೆಯಿಂದ ದೂರ ಸರಿದಿಲ್ಲ. ವೈದ್ಯಕೀಯ ಕ್ಷೇತ್ರದಲ್ಲಿ ಇನ್ನೂ ಸೇವಾ ಮನೋಭಾವವಿದೆ ಎಂಬುದಕ್ಕೆ ನಾಡಿನ ಸರಕಾರಿ ಆಸ್ಪತ್ರೆಗಳ ಕಾರ್ಯನಿರ್ವಹಣೆಯೇ ಉತ್ತಮ ಉದಾಹರಣೆಯಾಗಿವೆ. ಒತ್ತಡದ ಜೀವನದಲ್ಲಿ ಸಿಲುಕಿರುವ ನಮಗೆ ನಾನಾ ಕಾಯಿಲೆಗಳು ಕಾಡುತ್ತಿವೆ. ಅವುಗಳನ್ನು ಆರಂಭಿಕ ಹಂತದಲ್ಲೇ ನಿವಾರಿಸಲು ಕುಟುಂಬ ವೈದ್ಯ ಪದ್ಧತಿ ರೂಢಿಸಿಕೊಳ್ಳಬೇಕು. ಇದನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಲು ವೈದ್ಯರು ಶ್ರಮಿಸಬೇಕು ಎಂದರು.

ಬಳಿಕ ಡಾ| ಗಿರೀಶ ಬಾಬು, ಡಾ| ಅನಿಲ ಕಾಕುಂಜೆ, ಡಾ| ಬಿ.ಎಂ. ಸುರೇಶ, ಡಾ| ಶ್ರೀನಿವಾಸ ಟಿ.ಆರ್‌., ಡಾ| ರಜನಿ ಮತ್ತು ಡಾ| ಮಂಜುನಾಥರವರು ವೈದ್ಯಕೀಯ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಿದರು.

ಜಿಮ್ಸ್‌ ನಿರ್ದೇಶಕ ಡಾ| ಪಿ.ಎಸ್‌. ಭೂಸರಡ್ಡಿ, ದಿಮ್ಹಾನ್ಸ್‌ ಧಾರವಾಡದ ನಿರ್ದೇಶಕ ಡಾ| ಮಹೇಶ ದೇಸಾಯಿ, ಭಾರತೀಯ ವೈದ್ಯಕೀಯ ಮಂಡಳಿ ಕರ್ನಾಟಕ ಶಾಖೆ ಅಧ್ಯಕ್ಷ ಡಾ| ಮಧುಸುಧನ ಕರಿಗಾನೂರ, ಭಾರತೀಯ ವೈದ್ಯಕೀಯ ಮಂಡಳಿ ಹುಬ್ಬಳ್ಳಿ ಶಾಖೆ ಅಧ್ಯಕ್ಷ ಡಾ| ಅಭಯ ಮಠಕರ್‌, ಡಾ| ಅರುಣಕುಮಾರ ಸಿ., ಡಾ| ಜಿತೇಂದ್ರ ಮುಗಳಿ, ಡಾ| ಶಿವಾನಂದ ಹಟ್ಟಿ, ಡಾ| ಶ್ರೀನಿವಾಸ ದೇಶಪಾಂಡೆ, ಡಾ| ರವೀಂದ್ರ ಪಿ.ಎನ್‌, ಡಾ| ರಾಜು ಜಿ.ಎಂ. ಇದ್ದರು.

ಜಿಮ್ಸ್‌ನ ವೈದ್ಯರು ಸೇರಿದಂತೆ 200ಕ್ಕೂ ಹೆಚ್ಚು ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.