ಗದಗ ಜಿಲ್ಲಾಡಳಿತ ಭವನದಲ್ಲಿ ಅಗ್ನಿ ಅವಘಡ: ಕಂಪ್ಯೂಟರ್, ಕಡತಗಳು ಭಸ್ಮ
Team Udayavani, Nov 2, 2019, 3:50 PM IST
ಗದಗ: ಇಲ್ಲಿನ ಜಿಲ್ಲಾಡಳಿತ ಭವನದ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಕಂಪ್ಯೂಟರ್ ಮತ್ತು ನೂರಾರು ಕಡತಗಳು ಸುಟ್ಟು ಕರಕಲಾಗಿವೆ.
ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 4 ರಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಂಪ್ಯೂಟರ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಒಂದು ಕಂಪ್ಯೂಟರ್, ಪ್ರಿಂಟರ್ ಹಾಗೂ ಅನೇಕ ಕಡತಗಳು ಸುಟ್ಟು ಕರಕಲಾಗಿದ್ದು, ಕಚೇರಿಯಲ್ಲಿ ದಟ್ಟವಾದ ಹೊಗೆ ಆವರಿಸಿತ್ತು.
ಇದರಿಂದ ಗಾಬರಿಗೊಂಡ ಸಿಬ್ಬಂದಿ ಕಚೇರಿಯಿಂದ ಹೊರಗೆ ಓಡಿ ಬಂದಿದ್ದಾರೆ. ಬಳಿಕ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಮೂಲಕ ಸಂಭವಿಸಬಹುದಾದ ಭಾರೀ ಅನಾಹುತವನ್ನು ತಪ್ಪಿಸಿದರು.
ಮಧ್ಯಾಹ್ನ ಊಟದ ಸಮಯವಾಗಿದ್ದರಿಂದ ಒಬ್ಬಿಬ್ಬರು ಸಿಬ್ಬಂದಿ ಮಾತ್ರ ಕಚೇರಿಯಲ್ಲಿದ್ದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ನಿಗಮದ ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ