ವೈಯಕ್ತಿಕ ವಿಚಾರಗಳಿಗಿಂತ ದೇಶವೇ ಮೊದಲು: ತೇಜಸ್ವಿನಿ
Team Udayavani, Apr 20, 2019, 1:51 PM IST
ಬೆಳಗಾವಿ: ದೇಶ ಮೊದಲು, ನಂತರ ಪಕ್ಷ ಹಾಗೂ ಕೊನೆಯದಾಗಿ ವೈಯಕ್ತಿಕ ವಿಚಾರಗಳು ಬರುತ್ತವೆ. ಹೀಗಾಗಿ ನಾನು ಮೊದಲಿನಿಂದಲೂ ದೇಶ ಮೊದಲು ಎಂಬ ಧೋರಣೆಯಿಂದ ಬೆಳೆದವಳು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ ಹೇಳಿದರು.
ನಗರದ ಟಿಳಕವಾಡಿಯ ಮಿಲೇನಿಯಂ ಗಾರ್ಡನ್ದಲ್ಲಿ ಶುಕ್ರವಾರ ನಡೆದ ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶ ಮೊದಲು ಎನ್ನುವ ಅರಿವಿದ್ದರೆ ಸಮಾಜಕ್ಕೆ ಏನಾದರೂ ಕೊಡುಗೆ ನೀಡಲು ಸಾಧ್ಯವಿದೆ. ಹೀಗಾಗಿ ಪ್ರತಿಯೊಬ್ಬರೂ ದೇಶದತ್ತ ಗಮನಹರಿಸಿದರೆ ಸುಂದರ ಪರಿಸರ ನಿರ್ಮಾಣ ಮಾಡಲು ಸಾಧ್ಯವಿದೆ ಎಂದು ಹೇಳಿದರು.
ಪ್ರಜಾಪ್ರಭುತ್ವದ ದೊಡ್ಡ ಹಬ್ಬ(ಚುನಾವಣೆ) ನಮ್ಮ ಮುಂದೆ ಬಂದಿದೆ. ಹಬ್ಬ ಅಂದರೆ ಮಹಿಳೆಯರಿಗೆ ಹೆಚ್ಚಿನ ಕೆಲಸ ಇರುತ್ತದೆ. ಜಗತ್ತಿನಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. ಪ್ರತಿ ಚುನಾವಣೆಯಲ್ಲಿ ನಮ್ಮ ಅಧಿಕಾರ(ಮತದಾನ)ವನ್ನು ಸರಿಯಾದ ರೀತಿಯಲ್ಲಿ ಕೊಡುತ್ತ ಬಂದಿದ್ದೇವೆ. ಈಗಲೂ ಮತ್ತೂಮ್ಮೆ ಮೋದಿ ಅವರನ್ನು 300 ಪ್ಲಸ್ ಎಂಬ ಘೋಷಣೆಯೊಂದಿಗೆ ಮುಂದೆ ಸಾಗಬೇಕಿದೆ. ರಾಜ್ಯ ಹಾಗೂ ದೇಶಾದ್ಯಂತ ಮೋದಿ ಅಲೆ ಜೋರಾಗಿದೆ. ಹೀಗಾಗಿ ಇಂಥ ಮಹಾನ್ ವ್ಯಕ್ತಿತ್ವದ ಮೋದಿ ಪ್ರಧಾನಿಯನ್ನಾಗಿ ಮಾಡಲು ನಾವೆಲ್ಲರೂ ಮತ ಚಲಾಯಿಸಬೇಕಿದೆ ಎಂದರು.
ನಾಯಕತ್ವ ಗುಣ ಹೊಂದಿದ್ದ ಪತಿ ದಿ| ಅನಂತಕುಮಾರ ಬಿಜೆಪಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಜನೌಷಧಿ ಕೇಂದ್ರಗಳ ಮೂಲಕ ಎಲ್ಲರಿಗೂ ಕಡಿಮೆ ದರದಲ್ಲಿ ಔಷಧ ನೀಡುವ ಕಾರ್ಯ ಆರಂಭಿಸಿದ ಶ್ರೇಯಸ್ಸು ಮೋದಿ ಹಾಗೂ ಅನಂತಕುಮಾರ ಅವರಿಗೆ ಸಲ್ಲುತ್ತದೆ ಎಂದ ಅವರು, ದೇಶದ ಇತಿಹಾಸದಲ್ಲಿ 70 ವರ್ಷಗಳ ಅವಧಿಯಲ್ಲಿ ಆಗದಿರುವುದನ್ನು ಐದೇ ವರ್ಷದಲ್ಲಿ ಮನೆ, ಮನೆಗೆ ಸಿಲಿಂಡರ್ ತಲುಪಿಸುವ ಕಾರ್ಯ ಮೋದಿ ಸರ್ಕಾರ ಮಾಡಿದೆ ಎಂದರು.
ಶಾಸಕ ಅಭಯ ಪಾಟೀಲ ಮಾತನಾಡಿ, ಕಾರ್ಯಕರ್ತರ ರೂಪದಲ್ಲಿ ಬಂದವರು ನಾವು ಈಗಲೂ ಕಾರ್ಯಕರ್ತರಾಗಿಯೇ ಇದ್ದೇವೆ. ಬೆಳಗಾವಿಯಲ್ಲಿ ಮಹಿಳಾ ಶಕ್ತಿ ಹೆಚ್ಚಾಗಿದೆ ಎಂದ ಅವರು, ಅಂಗಡಿ ಕಳೆದ ಸಲ 72 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು. ಅದರಲ್ಲಿ ದಕ್ಷಿಣ ಕ್ಷೇತ್ರದಲ್ಲಿಯೇ 65 ಸಾವಿರ ಅಂತರ ಆಗಿತ್ತು. ಈಗ ಗೆಲುವು ನಮ್ಮ ಕ್ಷೇತ್ರದಲ್ಲಿ ಅಷ್ಟೇ 75 ಸಾವಿರ ಮತಗಳ ಅಂತರ ಇರಲಿದೆ ಎಂದರು.
ಶಾಸಕ ಅನಿಲ ಬೆನಕೆ ಮಾತನಾಡಿ, ಪ್ರತಿ ಯಶಸ್ವಿ ಪುರುಷರ ಹಿಂದೆ ಮಹಿಳೆ ಇರುತ್ತಾರೆ. ತೇಜಸ್ವಿನಿ ಅನಂತಕುಮಾರ, ಮಂಗಲಾ ಅಂಗಡಿ, ಶಿಲ್ಪಾ ಶೆಟ್ಟರ ಹಾಗೂ ಅಭಯ ಪಾಟೀಲರ ಪತ್ನಿ ಆದರ್ಶರಾಗಿದ್ದಾರೆ ಎಂದು ಬಣ್ಣಿಸಿದರು.
ಮಂಗಲಾ ಅಂಗಡಿ ಮಾತನಾಡಿ, ಮೂರು ಬಾರಿ ಸಂಸದರನ್ನಾಗಿ ಸುರೇಶ ಅಂಗಡಿ ಅವರನ್ನು ಆಯ್ಕೆ ಮಾಡಿರುವ ಜನರಿಗೆ ನಾನು ಚಿರಋಣಿ. ನಾಲ್ಕನೇ ಬಾರಿಗೆ ಗೆಲ್ಲಿಸಿ ಕೊಡುವ ಜವಾಬ್ದಾರಿ ಜಿಲ್ಲೆಯ ಜನರ ಮೇಲಿದೆ ಎಂದು ಪತಿ ಪರ ಮತಯಾಚಿಸಿದರು. ಶಾಸಕ ರಘುಪತಿ ಭಟ್, ಜಗದೀಶ ಶೆಟ್ಟರ ಪತ್ನಿ ಶಿಲ್ಪಾ ಶೆಟ್ಟರ, ಬಿಜೆಪಿ ಮುಖಂಡ ಎಂ.ಬಿ. ಜಿರಲಿ ಸೇರಿದಂತೆ ದಕ್ಷಿಣ ಕ್ಷೇತ್ರದ ಮಹಿಳೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ