ಜೂನ್‌ ಮೊದಲ ವಾರದಲ್ಲೇ ಹೆಸರು ಬಿತ್ತನೆಗೆ ಸಲಹೆ


Team Udayavani, Jun 1, 2020, 12:46 PM IST

ಜೂನ್‌ ಮೊದಲ ವಾರದಲ್ಲೇ ಹೆಸರು ಬಿತ್ತನೆಗೆ ಸಲಹೆ

ನರಗುಂದ: ಹೆಸರು ಬೀಜ ಬಿತ್ತನೆಯನ್ನು ಜೂನ್‌ ಮೊದಲ ವಾರದಲ್ಲಿ ಕೈಗೊಳ್ಳುವುದು ಸೂಕ್ತ. ತಡವಾಗಿ ಬಿತ್ತಿದ ಬೆಳೆ ಕೀಟ ಮತ್ತು ರೋಗಕ್ಕೆ ತುತ್ತಾಗುವ ಸಾಧ್ಯವಿರುತ್ತದೆ ಎಂದು ಸಹಾಯಕ ಕೃಷಿ ನಿರ್ದೇಶಕ ಚನ್ನಪ್ಪ ಅಂಗಡಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ಕೃಷಿ ಇಲಾಖೆ ಪ್ರಸ್ತುತ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗೆ ಎಲ್ಲ ತಯಾರಿ ಮಾಡಿಕೊಂಡಿದೆ.

ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿದ್ದು, ನರಗುಂದ, ಕೊಣ್ಣೂರ ರೈತ ಸಂಪರ್ಕ ಕೇಂದ್ರಗಳಿಂದ ರೈತರು ಬೀಜ ಪಡೆಯುತ್ತಿದ್ದಾರೆ. ತಾಲೂಕಿನಲ್ಲಿ ಕೃಷಿ ಪರಿಕರ ಖಾಸಗಿ ಮಾರಾಟ ಮಳಿಗೆಗಳಲ್ಲಿ ಹತ್ತಿ ಬೀಜ ಸೇರಿ ವಿವಿಧ ಬಿತ್ತನೆ ಬೀಜ ದಾಸ್ತಾನು ಇದೆ. ರೈತ ಸಂಪರ್ಕ ಕೇಂದ್ರದಲ್ಲಿ ಅವಶ್ಯಕ ಕೀಟನಾಶಕ, ಸಸ್ಯಸಂರಕ್ಷಣಾ ಔಷಧ, ಜೀವಾನು ಗೊಬ್ಬರ, ಜೈವಿಕ ಕೀಟನಾಶಕ, ಔಷ ಧ ಸಿಂಪರಣಾ ಯಂತ್ರಗಳು, ಕೆಲವು ಕೃಷಿ ಉಪಕರಣಗಳು ರಿಯಾಯತಿ ದರದಲ್ಲಿ ಲಭ್ಯವಿರುತ್ತವೆ.

ಬಿತ್ತನೆಗೆ ಶಿಫಾರಸ್ಸು: ಬಿತ್ತನೆಗೆ ಸಂಬಂಧಿಸಿದಂತೆ ಹಲವು ಸಾಗುವಳಿ ಕ್ರಮಗಳನ್ನು ಶಿಫಾರಸ್ಸು ಮಾಡಿದ್ದಾರೆ. ಹೆಸರು ಬಿತ್ತನೆ ಬೀಜಕ್ಕೆ ಈಗಾಗಲೇ ಕ್ರಿಮಿನಾಶಕ ಔಷ ಗಳಿಂದ ಉಪಚರಿಸಲಾತ್ತದೆ. ರೈತ ಸಂಪರ್ಕ ಕೇಂದ್ರದಲ್ಲಿ ದ್ರವರೂಪದ ರೈಜೋಬಿಯಂ ಬ್ಯಾಕ್ಟೇರಿಯಾ ಲಭ್ಯವಿದ್ದು, ಬಿಜೋಪಚಾರಕ್ಕೆ ಬಳಸಬಹುದಾಗಿದೆ. ಹೆಸರು ಬಿತ್ತುವ ಮೊದಲು ರೈಜೋಬಿಯಂ ದ್ರವ ಪ್ರತಿ ಕಿಲೋ ಬೀಜಕ್ಕೆ 5,10 ಮಿ.ಲೀ. ಬೆರೆಸಿ ಬೀಜೋಪಚಾರ ಮಾಡಬೇಕು. 150 ಗ್ರಾಂ. ಪಿಎಸ್‌ಪಿ, ರಂಜಕ ಕರಗಿಸುವ ಬ್ಯಾಕ್ಟೇರಿಯಾವನ್ನು ಪ್ರತಿ ಎಕರೆ ಬೀಜಕ್ಕೆ ಬಳಸಬಹ್ಮದು ಎಂದು ಹೇಳಿದ್ದಾರೆ.

ಬದುವಿನ ಮೇಲೆ ತೊಗರಿ ಬಿತ್ತನೆಗೆ ಶಿಫಾರಸ್ಸು ಮಾಡಿದ್ದು, ತೊಗರಿ ಬೀಜ ಕೂಡ ಲಭ್ಯವಿದೆ. ಪ್ರತಿ 5 ಕಿಲೋ ಪ್ಯಾಕೇಟ್‌ ಗೆ ಸಾಮಾನ್ಯ ರೈತರಿಗೆ ರೂ.250, ಪಜಾ/ಪಪಂ ರೈತರಿಗೆ ರೂ.188 ದರದಲ್ಲಿ ಲಭ್ಯವಿರುತ್ತದೆ. ಯಾವುದೇ ಬೆಳೆಗೆ ಜೈವಿಕ ಗೊಬ್ಬರದಿಂದ ಬಿಜೋಪಚಾರ ಮಾಡುವ ಮೂಲಕ ರಸಗೊಬ್ಬರದ ಬಳಕೆ ಶೇ.25ರಷ್ಟು ಕಡಿಮೆ ಮಾಡಬಹುದು. ಇದರಿಂದ ಬೆಳೆ ಇಳುವರಿ ಮಟ್ಟ ಹೆಚ್ಚಾಗುತ್ತದೆ. ಮೈಟಾರೈಝಿಯಂ ಜೈವಿಕ ಶಿಲಿಂಧ್ರನಾಶಕ ಲಭ್ಯವಿದ್ದು, ಶೇ.50ರ ಸಹಾಯ ಧನದಲ್ಲಿ ವಿತರಿಸಲಾಗುತ್ತದೆ. ಗೊಣ್ಣೆ ಹುಳು ಸೇರಿ ಹತ್ತು ಹಲವು ಕೀಟ ನಿಯಂತ್ರಿಸುವ ಸಾಮರ್ಥ್ಯದ ಶಿಲಿಂದ್ರನಾಶಕ ಪ್ರತಿ ಎಕರೆಗೆ 4-5 ಕಿಲೋದಂತೆ 500 ಕಿಲೋ ಕೊಟ್ಟಿಗೆ ಗೊಬ್ಬರದೊಂದಿಗೆ ಬೆರೆಸಿ ಜಮೀನಿನಲ್ಲಿ ಎರಚಬೇಕು ಎಂದು ತಿಳಿಸಿದ್ದಾರೆ

Ad

ಟಾಪ್ ನ್ಯೂಸ್

Kharge-CM-Siddu

ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಜತೆ ಸಿಎಂ ಸಿದ್ದರಾಮಯ್ಯ  ಮಾತುಕತೆ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

1-aa-aa-pop

World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ

xi-Jinping

ಚೀನದ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಆಧಿಪತ್ಯ ಅಂತ್ಯ?

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

Madan-Gopal

ಪ್ರತಿಭೆಗೆ ಮುಕ್ತ ಅವಕಾಶ, ಸಾಧನೆಯೇ ಮೆರಿಟ್‌: ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌

Eshwar-Khndre

ಮೈಸೂರು, ಬನ್ನೇರುಘಟ್ಟ ಮೃಗಾಲಯದ ಪ್ರವೇಶ ಶುಲ್ಕ ಹೆಚ್ಚಳ: ಸಚಿವ ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Gadag: ಬೆಣ್ಣೆಹಳ್ಳ-ಮಲಪ್ರಭಾ ಉಕ್ಕಿ ಹರಿದರೆ ಕಂಟಕ

Gadag: ಜು.12ರಂದು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಯುವಧ್ವನಿ ಕಾರ್ಯಕ್ರಮ

Gadag: Robbery in petrol station

Gadag: ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

Gadag: ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಜೋಡಿ… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

16-gadag

Gadag: ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಹಣ ದೋಚಿ ಪರಾರಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kharge-CM-Siddu

ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಜತೆ ಸಿಎಂ ಸಿದ್ದರಾಮಯ್ಯ  ಮಾತುಕತೆ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

Shivalingegowda

Congress Govt: ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ: ಶಿವಲಿಂಗೇಗೌಡ

1-aa-aa-pop

World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ

xi-Jinping

ಚೀನದ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಆಧಿಪತ್ಯ ಅಂತ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.