ಪ್ರವಾಹ ಸಂತ್ರಸ್ಥರಿಗೆ ಕೂಡಲೇ ಪರಿಹಾರ ನೀಡಿ: ಕೇಂದ್ರಕ್ಕೆ ವಾಟಾಳ್ ನಾಗರಾಜ್ ಆಗ್ರಹ
Team Udayavani, Aug 17, 2019, 3:54 PM IST
ಗದಗ: ರಾಜ್ಯದಲ್ಲಿ ಜಲಪ್ರಳಯ ಆಗಿದ್ದು, ಲಕ್ಷಾಂತರ ಮನೆಗಳು ನೀರಿನಲ್ಲಿ ಮುಳುಗಡೆಯಾಗಿ ಜನ ಅತಂತ್ರ ಸ್ಥಿತಿಯಲ್ಲಿದ್ದಾರೆ. ಕೇಂದ್ರದ ಸಚಿವರು ರಾಜ್ಯಕ್ಕೆ ಬಂದು ಪರಿಸ್ಥಿತಿ ಅವಲೋಕಿಸಿದರೂ ಹಣ ಬಿಡುಗಡೆ ಮಾಡದೇ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
ಕರ್ನಾಟಕ ಹೊರತಾಗಿ ಇತರೆ ರಾಜ್ಯಗಳಿಗೆ ಪ್ರಧಾನಿಗಳೇ ಹಣ ಕೊಡುತ್ತಾರೆ. ಮುಖ್ಯಮಂತ್ರಿಗಳು ಭೇಟಿ ಮಾಡಿದರೂ, ಹಣ ಬಿಡುಗಡೆ ಮಾಡಿಲ್ಲ. ಇದು ರಾಜ್ಯದ ಮುಖ್ಯಮಂತ್ರಿ, ಕರುನಾಡಿನ ಜನತೆಗೆ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ವಾರದಲ್ಲಿ ಪ್ರಧಾನಿ ರಾಜ್ಯಕ್ಕೆ ಬಂದು ನೆರೆ ವೀಕ್ಷಣೆ ಮಾಡಬೇಕು. ಮೊದಲ ಕಂತಿನಲ್ಲಿ 50 ಸಾವಿರ ಕೋಟಿ ರೂ. ಎರಡನೇ ಕಂತಿನಲ್ಲಿ 50 ಸಾವಿರ ಕೋಟಿ ರೂ. ಒಟ್ಟಾರೆ 1 ಲಕ್ಷ ಕೋಟಿ ರೂ, ಪರಿಹಾರ ಬಿಡುಗಡೆ ಮಾಡಬೇಕು. ಈ ಬೇಡಿಕೆಗೆ ಸ್ಪಂದಿಸದಿದ್ದರೆ ರಾಜ್ಯದ ಸಂಸದರು ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.
ನವ ಕರ್ನಾಟಕ ನಿರ್ಮಾಣಕ್ಕಾಗಿ ಆಗ್ರಹಿಸಿ ಹುಬ್ಬಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಆ.18ರಂದು ಧರಣಿ ನಡೆಸಲಾಗುವುದೆಂದು ಇದೆ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ