ಬಲಿಷ್ಠ ಭಾರತ ನಿರ್ಮಾಣಕ್ಕೆ ಬಿಜೆಪಿ ಬೆಂಬಲಿಸಿ: ಪಾಟೀಲ
Team Udayavani, Apr 19, 2019, 4:12 PM IST
ನರಗುಂದ: ದೇಶದ ಜನರಲ್ಲಿ ದೇಶಾಭಿಮಾನ ಮೂಡಿಸುವ ಜೊತೆಗೆ ವಿಶ್ವದಲ್ಲೇ ಭಾರತದ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಪರಿಚಯಿಸಿದ ಪ್ರಧಾನಿ ನರೇಂದ್ರ ಮೋದಿ
ಅವರು ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ ಬಲಿಷ್ಠ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಬಿಜೆಪಿ ಮುಖಂಡ ಉಮೇಶಗೌಡ ಪಾಟೀಲ ಮನವಿ ಮಾಡಿದರು.
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಪರ ಪಟ್ಟಣದ ದಂಡಾಪುರ ಓಣಿಯಲ್ಲಿ ಚುನಾವಣಾ ಪ್ರಚಾರಾರ್ಥ ಪಾದಯಾತ್ರೆಯಲ್ಲಿ ತೆರಳಿ ಮತಯಾಚನೆ ಮಾಡಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಇಂದು ಜನರನ್ನು ಸ್ವಾಭಿಮಾನದ ಬದುಕಿನತ್ತ ಹೊರಳಿಸಿವೆ. ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನ ಸೇವಕರನ್ನಾಗಿ ಆಯ್ಕೆಗೊಳಿಸಲು ಪಿ.ಸಿ. ಗದ್ದಿಗೌಡರ ಅವರನ್ನು ಗೆಲ್ಲಿಸಿ ಸಹಕರಿಸಬೇಕು ಎಂದರು.
ಪಟ್ಟಣದ ಜಮಲಾಪುರ, ದೇಸಾಯಿ ಗಲ್ಲಿ, ಲೋದಿಗಲ್ಲಿ, ಜವಳಿ ಬಜಾರ್, ತರಕಾರಿ ಮಾರುಕಟ್ಟೆ ಮುಂತಾದ ಪ್ರದೇಶಗಳಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ಪ್ರಚಾರ ನಡೆಸಿದರು.
ಚಂದ್ರು ಪವಾರ, ಬಸು ಪಾಟೀಲ, ರವಿ ಹೊಂಗಲ, ನಾಗರಾಜ ಚಿತ್ರಗಾರ, ನಾಗೇಶ ಅಪೊ³àಜಿ, ಮಂಜು ಮೆಣಸಗಿ, ಪ್ರಕಾಶ ಪಟ್ಟಣಶೆಟ್ಟಿ, ಶಿವಾನಂದ ಮುತವಾಡ, ಚಂದ್ರಶೇಖರ ಕೋಟಿ, ಉಮೇಶ ಮೊರಬದ, ಎಲ್.ಎಂ. ಪಾಟೀಲ, ಅನಿಲ ಧರಿಯಣ್ಣವರ, ನಾಗರಾಜ ನೆಗಳೂರ, ಸಂತೋಷ ಹಂಚಿನಾಳ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ