ಸರಕಾರಿ ಕಾಲೇಜು ವರ್ಗಾವಣೆ ಹಿಂದೆ ಮಾಜಿ ಶಾಸಕರ ಹಸ್ತಕ್ಷೇಪ: ಬಂಡಿ

ಮೈತ್ರಿ ಸರಕಾರದ ಮೇಲೆ ಒತ್ತಡ ಹೇರಿ ಗುಳೇದಗುಡ್ಡಕ್ಕೆ ಸ್ಥಳಾಂತರ

Team Udayavani, Jun 3, 2019, 10:57 AM IST

gadaga-tdy-2..

ಗಜೇಂದ್ರಗಡ: ಶಾಸಕ ಕಳಕಪ್ಪ ಬಂಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಗಜೇಂದ್ರಗಡ: ಮಾಜಿ ಶಾಸಕರು ತಮ್ಮ ಶಿಕ್ಷಣ ಸಂಸ್ಥೆಗಳನ್ನು ಉಳಿಸಿಕೊಳ್ಳುವ ಸಲುವಾಗಿ ರೋಣದ ಸರಕಾರಿ ಪದವಿ ಕಾಲೇಜು ಮುಚ್ಚುವ ಹಂತಕ್ಕೆ ತಲುಪುವಂತೆ ಮಾಡಲು ಕಾರಣಿಬೂತರಾಗಿದ್ದಾರೆ. ಇದನ್ನು ಮರೆಮಾಚಲು ನನ್ನ ಮೇಲೆ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಶಾಸಕ ಕಳಕಪ್ಪ ಬಂಡಿ ಗಂಭೀರವಾಗಿ ಆರೋಪಿಸಿದರು.

ಪಟ್ಟಣದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಣದ ಗಿರಡ್ಡಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯವನ್ನು ಹಾಜರಾತಿ ನೆಪವೊಡ್ಡಿ ಸರ್ಕಾರ ಸ್ಥಳಾಂತರ ಆದೇಶ ಹೊರಡಿಸಿರುವುದರ ಹಿಂದೆ ನನ್ನ ಕೈವಾಡ ಇದೆ ಎಂದು ಮಾಜಿ ಶಾಸಕ ಜಿ.ಎಸ್‌ ಪಾಟೀಲ ಅವರು ಮಾಡಿದ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಈ ಹಿಂದಿನ ನನ್ನ ಅಧಿಕಾರವಧಿ ಸಂದರ್ಭದಲ್ಲಿ ಕಾಲೇಜಿಗೆ ಸರಿಯಾದ ಕಟ್ಟಡ ವಿಲ್ಲದೇ ಒಂದೇ ಕೊಠಡಿಯಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರು. ಆಗ 3ರಿಂದ 4 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮಲು ಅವರಿಂದ ಸುಸಜ್ಜಿತ ಕಟ್ಟಡ ನಿರ್ಮಿಲಾಗಿತ್ತು. ಆದರೆ ಕಳೆದ ಐದು ವರ್ಷಗಳಲ್ಲಿ ಹಾಜರಾತಿ ತೀವ್ರ ಪ್ರಮಾಣದಲ್ಲಿ ಕಡಿಮೆಯಾಗಿದೆ. ಇದಕ್ಕೆ ಅಂದಿನ ಶಾಸಕರಾಗಿದ್ದ ಜಿ.ಎಸ್‌. ಪಾಟೀಲ ಅವರೇ ಕಾರಣವಾಗಿದ್ದಾರೆ ಎಂದರು.

ರೋಣ ಪಟ್ಟಣದಲ್ಲಿನ ತಮ್ಮ ಶಿಕ್ಷಣ ಸಂಸ್ಥೆಗಳನ್ನು ಉಳಿಸಿಕೊಳ್ಳುವ ಸಲುವಾಗಿ ಮೈತ್ರಿ ಸರ್ಕಾರದ ಮೇಲೆ ಒತ್ತಡ ಹೇರಿ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ಪಟ್ಟಣಕ್ಕೆ ವರ್ಗಾವಣೆ ಮಾಡುವಲ್ಲಿ ಮಾಜಿ ಶಾಸಕರ ಪಾತ್ರ ಅಡಗಿದೆ. ಈ ಹಿಂದೆ ನನ್ನ ಅಧಿಕಾರವಧಿಯಲ್ಲಿ ರೋಣ ಪಟ್ಟಣಕ್ಕೆ ಮಿನಿ ವಿಧಾನಸೌಧ, ಬಸ್‌ ನಿಲ್ದಾಣ, ಆರ್ಯುವೇದ ಕಚೇರಿ, ಅಗ್ನಿಶಾಮಕ ದಳದ ಕಚೇರಿ ಸೇರಿದಂತೆ ಹಲವಾರು ಸರಕಾರಿ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ ಆದರೆ. ಜಿ.ಎಸ್‌. ಪಾಟೀಲ ಅವರ ಕೊಡುಗೆ ಶೂನ್ಯವಾಗಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಮೈತ್ರಿ ಸರ್ಕಾರ ಬಂದಾಗಿನಿಂದ ಲೆಟರ್‌ ಹೆಡ್‌ಗಳ ದರ್ಬಾರ ಎತೇಚ್ಚವಾಗಿ ನಡೆದಿದೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆ ದಂಧೆಗೆ ಕಡಿವಾಣ ಹಾಕಬೇಕಾದ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮಿಂದೆಳುತ್ತಿದೆ. ಜಿಲ್ಲೆಗೆ ಉಸ್ತುವಾರಿ ಮಂತ್ರಿಗಳು ಇದ್ದು ಇಲ್ಲದಂತಾಗಿದೆ. ಬಾದಾಮಿ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಸ ಕಾಲೇಜು ಮಂಜೂರು ಮಾಡಿಕೊಳ್ಳುವ ಬದಲು ನಮ್ಮ ಕ್ಷೇತ್ರದ ಕಾಲೇಜನ್ನು ತಮ್ಮ ಕ್ಷೇತ್ರಕ್ಕೆ ವರ್ಗಾವಣೆ ಮಾಡಿಕೊಳ್ಳುತ್ತಿರುವುದು ಸಮಂಜಸವಲ್ಲ. ಸರ್ಕಾರ ಕೂಡಲೇ ವರ್ಗಾವಣೆ ಆದೇಶ ಹಿಂಪಡೆದು ರೋಣ ಪಟ್ಟಣಕ್ಕೆ ಪದವಿ ಕಾಲೇಜು ನೀಡಬೇಕು ಎಂದು ಒತ್ತಾಯಿಸಿದರು.

ಮುತ್ತಣ್ಣ ಲಿಂಗನಗೌಡರ, ಶರಣಪ್ಪ ಕಂಬಳಿ, ಅಶೋಕ ವನ್ನಾಲ, ಪ್ರಕಾಶ ಸಂಕಣ್ಣವರ, ರವಿರಾಜ ಚವ್ಹಾಣ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.