ಪಂಚಮಸಾಲಿ ಸಂಘದಿಂದ ಶೆಟ್ಟಿಕೆರೆಗೆ ಬಾಗಿನ

ನಯಮಮನೋಹರವಾದ ಈ ಕೆರೆ ಅಭಿವೃದ್ಧಿಪಡಿಸಿದರೆ ಈ ಭಾಗದ ಪ್ರೇಕ್ಷಣೀಯ ತಾಣವಾಗಲಿದೆ

Team Udayavani, Aug 17, 2022, 6:13 PM IST

ಪಂಚಮಸಾಲಿ ಸಂಘದಿಂದ ಶೆಟ್ಟಿಕೆರೆಗೆ ಬಾಗಿನ

ಲಕ್ಷ್ಮೇಶ್ವರ: ಸಕಲ ಜೀವರಾಶಿಗಳ ಬದುಕಿಗೆ ಜೀವನಾಧಾರ ಮತ್ತು ಗಂಗಾಮಾತೆಯ ಸ್ವರೂಪವಾದ ಜೀವಜಲವನ್ನು ಪಾವಿತ್ರ್ಯತೆಯಿಂದ ಪೂಜಿಸುವುದು, ಮೈದುಂಬಿರುವ ನದಿ, ಕೆರೆ-ಕಟ್ಟೆಗಳಿಗೆ ಬಾಗಿನ ಸಮರ್ಪಿಸುವುದು ಈ ನೆಲದ ಸಂಸ್ಕೃತಿ, ಸಂಪ್ರದಾಯ ಎಂದು ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಮಂಜುನಾಥ ಮಾಗಡಿ ಹೇಳಿದರು.

ಲಕ್ಷ್ಮೇಶ್ವರ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ನೂರಾರು ವರ್ಷಗಳ ಇತಿಹಾಸವುಳ್ಳ ಜಿಲ್ಲೆಯ ದೊಡ್ಡದಾದ (214 ಎಕರೆ) ಶೆಟ್ಟಿಕೆರೆ ಬಹಳ ವರ್ಷಗಳ ನಂತರ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕೆರೆಗೆ ಬಾಗಿನ ಸಮರ್ಪಿಸಿ ಮಾತನಾಡಿದರು.

ಮನುಷ್ಯ ಸೇರಿ ಪ್ರಾಣಿ-ಪಕ್ಷಿಗಳಿಗೆ ಜೀವಜಲವಾದ ನೀರು ಅತ್ಯಮೂಲ್ಯ ಪ್ರಾಕೃತಿಕ ಸಂಪತ್ತಾಗಿದೆ. ಕೆರೆ-ಕಟ್ಟೆಗಳ ನಿರ್ಮಾಣಕ್ಕಾಗಿ ಹಿರಿಯರು ಶ್ರಮ, ತ್ಯಾಗ, ಬಲಿದಾನ ಮಾಡಿದ್ದಾರೆ. ಅಮೂಲ್ಯವಾದ ಜಲ ಸಂಪನ್ಮೂಲಗಳಾದ ಕೆರೆ, ಹಳ್ಳ, ನದಿಗಳ ಸಂರಕ್ಷಣೆಯ ಜತೆಗೆ ಅವುಗಳನ್ನು ಅತ್ಯಂತ ಗೌರವ, ಪೂಜ್ಯನೀಯ ಭಾವನೆಯಿಂದ ಕಾಣಬೇಕು. ಈ ಭಾವನೆಯನ್ನು ಪ್ರತಿಯೊಬ್ಬರು ಹೊಂದುವ ಮೂಲಕ ಹಿರಿಯರು ಹಾಕಿಕೊಟ್ಟ ಗಂಗಾಪೂಜೆ, ಬಾಗಿನ ಸಮರ್ಪಣೆಯ ಸಂಪ್ರದಾಯವನ್ನು ಜನಮಾನಸದಲ್ಲಿ ಬೇರೂರುವಂತೆ ಮಾಡಬೇಕು ಎಂದರು.

ಕೆರೆ ಅಭಿವೃದ್ಧಿಗೆ ಆಗ್ರಹ: ಜಿಲ್ಲೆಯಲ್ಲಿಯೇ ದೊಡ್ಡದಾದ(214 ಎಕರೆ) ಈ ಐತಿಹಾಸಿಕ ಕೆರೆ ಈ ಭಾಗದ ಅತ್ಯಮೂಲ್ಯ ಸಂಪತ್ತಾಗಿದೆ. ಸುತ್ತಲೂ ಗುಡ್ಡಗಾಡು, ಅರಣ್ಯ ಪ್ರದೇಶವಿದ್ದು, ಈ ಭಾಗದ ಹತ್ತಾರು ಗ್ರಾಮಗಳ ಜನ-ಜಾನುವಾರು, ಸಾವಿರಾರು ಪ್ರಾಣಿ-ಪಕ್ಷಿಗಳಿಗೆ ಆಸರೆಯಾಗಿದೆ. ಅತ್ಯಂತ ವಿಶಾಲ ಮತ್ತು ನಯಮಮನೋಹರವಾದ ಈ ಕೆರೆ ಅಭಿವೃದ್ಧಿಪಡಿಸಿದರೆ ಈ ಭಾಗದ ಪ್ರೇಕ್ಷಣೀಯ ತಾಣವಾಗಲಿದೆ.

ಈ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡುತ್ತಾರಲ್ಲದೇ ಬರಗಾಲದ ಸಂದರ್ಭದಲ್ಲಿ ಈ ಸ್ಥಳದಲ್ಲಿ ಗೋಶಾಲೆ ನಿರ್ಮಿಸಲಾಗುತ್ತದೆ. ಪ್ರತಿ ವರ್ಷ ಚಳಿಗಾಲದಲ್ಲಿ ಮಾಗಡಿ ಪಕ್ಷಿಧಾಮಕ್ಕೆ ಬರುವ ಸಾವಿರಾರು ವಿದೇಶಿ ಪಕ್ಷಿಗಳು ಕಳೆದ ಕೆಲ ವರ್ಷಗಳಿಂದ ಈ ಕೆರೆಯಲ್ಲಿ ಬಿಡಾರ ಹೂಡುತ್ತಿವೆ. ಈ ಕೆರೆಗೆ ನದಿಯಿಂದ ನೀರು ತುಂಬಿಸುವ ಯೋಜನೆಯಿಂದ ನೀರು ತುಂಬಿಸುವ ಕಾರ್ಯವೂ ಪ್ರಗತಿ ಹಂತದಲ್ಲಿದೆ. ಆದರೆ ಸಣ್ಣ ನೀರಾವರಿ ಇಲಾಖೆಗೆ ಸೇರಿದ ಈ ಕೆರೆಯ ಅಭಿವೃದ್ಧಿಗೆ ಇದುವರೆಗೂ ಯಾವುದೇ ಜನಪ್ರತಿನಿಧಿ , ಅಧಿಕಾರಿಗಳು ಕಿಂಚಿತ್ತೂ ಗಮನ ಹರಿಸಿಲ್ಲ. ಆದ್ದರಿಂದ ಶಾಸಕರ ಸ್ವಗ್ರಾಮಕ್ಕೆ ಹೊಂದಿಕೊಂಡಿರುವ ಈ ಕೆರೆಯ ಅಭಿವೃದ್ಧಿಗಾಗಿ ಶಾಸಕರು ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಗಮನ ಹರಿಸಬೇಕೆಂದು ಆಗ್ರಹಿಸಿದರು.

ಈ ವೇಳೆ ಸಮಾಜದ ಹಿರಿಯರಾದ ಚಂಬಣ್ಣ ಬಾಳಿಕಾಯಿ, ದೇವಣ್ಣ ಬಳಿಗಾರ, ಸುರೇಶ ರಾಚನಾಯಕರ, ಶಿವನಗೌಡ ಅಡರಕಟ್ಟಿ, ಬಸಣ್ಣ ಬಾಳಿಕಾಯಿ, ಮಲ್ಲನಗೌಡ ಪಾಟೀಲ, ರುದ್ರಪ್ಪ ಉಮಚಗಿ, ಎಸ್‌.ಎಫ್‌.ಆದಿ, ಸೋಮು ಚಿಕ್ಕತೋಟದ, ಶಿವಾನಂದ ಬನ್ನಿಮಟ್ಟಿ, ಪ್ರಭಣ್ಣ ಮುಳಗುಂದ, ದೇವಪ್ಪ ಅಂಗಡಿ, ಫಕೀರಪ್ಪ ಸಾಗರ, ನೇತ್ರ ಚಿಕ್ಕತೋಟದ, ಸರೋಜವ್ವ ಮಾಗಡಿ, ಲಲಿತಾ ಕೆರಿಮನಿ, ಶಾರದಾ ಮಹಾಂತಶೆಟ್ಟರ, ಅನ್ನಪೂರ್ಣ ಮಹಾಂತಶೆಟ್ಟರ, ಶೈಲಾ ಆದಿ, ಅನ್ನಪೂರ್ಣ ಬಾಳಿಕಾಯಿ, ಶಕುಂತಲಾ ಹೊರಟ್ಟಿ ಸೇರಿ ಶೆಟ್ಟಿಕೆರಿ, ಬಸಾಪುರ, ಕುಂದ್ರಳ್ಳಿ, ಯಲ್ಲಾಪುರ, ಬಾಲೆಹೊಸೂರು ಹಾಗೂ ಗೊಜನೂರು ಗ್ರಾಮದ ಸಮಾಜ ಬಾಂಧವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.