ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಭರದ ಸಿದ್ದತೆ

 ಪ್ರೊ ಕಬಡ್ಡಿ ಮಾದರಿ ಪಂದ್ಯಾವಳಿ-ಅ.12ರಿಂದ 3 ದಿನ ಕ್ರೀಡಾ ಉತ್ಸವ: ಉಮೇಶಗೌಡ ಪಾಟೀಲ

Team Udayavani, Oct 10, 2022, 4:32 PM IST

14

ನರಗುಂದ: ಉತ್ತರ ಕರ್ನಾಟಕದಲ್ಲೇ ಪ್ರಥಮ ಬಾರಿಗೆ ಪ್ರೊ ಕಬಡ್ಡಿ ಮಾದರಿಯಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಬಂಡಾಯ ನಾಡು ನರಗುಂದ ಸಾಕ್ಷಿಯಾಗಲಿದೆ. ಮೂರು ದಿನಗಳ ಕಾಲ ನಡೆಯುವ ಪಂದ್ಯಾವಳಿಯಲ್ಲಿ ಪ್ರೇಕ್ಷಕರು ಹೆಚ್ಚೆಚ್ಚು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಲಯನ್ಸ್‌ ಕ್ಲಬ್‌ ಅಧ್ಯಕ್ಷ ಹಾಗೂ ಬಿಜೆಪಿ ಯುವ ನಾಯಕ ಉಮೇಶಗೌಡ ಪಾಟೀಲ ಹೇಳಿದರು.

ರವಿವಾರ ಸಾಯಂಕಾಲ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯಾವಳಿಯ ಅಂಗಣದ ಸಿದ್ಧತೆ ವೀಕ್ಷಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ನಮ್ಮೆಲ್ಲರ ನೆಚ್ಚಿನ ನಾಯಕರು, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರ 64ನೇ ಜನ್ಮದಿನದ ಅಂಗವಾಗಿ ಲಯನ್ಸ್‌ ಕ್ಲಬ್‌, ಸಿ.ಸಿ.ಪಾಟೀಲ ಅಭಿಮಾನಿ ಬಳಗ, ಭಾರತೀಯ ಜನತಾ ಪಕ್ಷದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚ್ಯೂರ್‌ ಕಬಡ್ಡಿ ಅಸೋಸಿಯೇಷನ್‌ ಸಹಯೋಗದಲ್ಲಿ ಅ.12, 13, 14ರಂದು ಹೊನಲು-ಬೆಳಕಿನ ಅಖೀಲ ಭಾರತ ಪುರುಷ ಹಾಗೂ ಮಹಿಳಾ ಎ ಶ್ರೇಣಿಯ ಆಹ್ವಾನಿತ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಹೇಳಿದರು.

ಪಂದ್ಯಾವಳಿಯಲ್ಲಿ 7, 8 ರಾಜ್ಯಗಳ 65 ತಂಡಗಳು ಭಾವಗಹಿಸಲಿದ್ದು, ಈಗಾಗಲೇ ರಾಜ್ಯ-ರಾಷ್ಟ್ರಮಟ್ಟದ ಎಲ್ಲ ಅನುಮತಿಯೊಂದಿಗೆ ಸಿದ್ಧತೆ ಕೈಗೊಳ್ಳಲಾಗಿದೆ. ವಿಶೇಷವಾಗಿ ಪಂದ್ಯಾವಳಿಯಲ್ಲಿ ರಾಜ್ಯ, ರಾಷ್ಟ್ರಮಟ್ಟ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಿದ ಕಬಡ್ಡಿ ಕ್ರೀಡಾಳುಗಳು ಸೆಣಸಲಿದ್ದಾರೆ ಎಂದು ಹೇಳಿದರು.

12ರಂದು ಉದ್ಘಾಟನೆ: ಅ.12ರಂದು ಸಂಜೆ 4 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್‌ ಕಟೀಲ್‌ ಅವರು ಪಂದ್ಯಾವಳಿ ಉದ್ಘಾಟಿಸಲಿದ್ದು, ಈ ಭಾಗದ ಎಲ್ಲ ಸಂಸದರು, ಶಾಸಕರು, ಸಚಿವರು ಭಾಗವಹಿಸಲಿದ್ದಾರೆ. ಒಟ್ಟು 700 ಕ್ರೀಡಾಳುಗಳು ಭಾಗವಹಿಸಲಿದ್ದು, ನಿವೃತ್ತ ಕ್ರೀಡಾ ಧಿಕಾರಿಗಳು, ಅಂತಾರಾಷ್ಟ್ರೀಯ ಖ್ಯಾತಿಯ 100 ಜನ ನಿರ್ಣಾಯಕರು ಪಾಲ್ಗೊಳ್ಳಲಿದ್ದಾರೆ. ಈ ಭಾಗದ ಕಬಡ್ಡಿ ಪ್ರೇಮಿಗಳಿಗೆ ಇದನ್ನು ಕ್ರೀಡಾ ಔತಣವಾಗಿ ಆಯೋಜಿಸಲಾಗಿದೆ. ಪಂದ್ಯಾವಳಿಯನ್ನು ಅರ್ಥಪೂರ್ಣಗೊಳಿಸಲು ಸ್ಥಳೀಯವಾಗಿ ತಯಾರಿಸಲಾದ 17 ಮಾರಾಟ ಮಳಿಗೆ, ತಿಂಡಿ-ತಿನಿಸುಗಳ ಮಳಿಗೆ, ಸರ್ಕಾರದ ಸೌಲಭ್ಯಗಳನ್ನು ಸ್ಥಳದಲ್ಲಿ ಒದಗಿಸಲು ವಿವಿಧ ಮಳಿಗೆಗಳನ್ನು ನಿರ್ಮಿಸಲಾಗುತ್ತಿದೆ. ರಕ್ತದಾನ ಶಿಬಿರ ಏರ್ಪಡಿಸಲಾಗಿದೆ ಎಂದು ಉಮೇಶಗೌಡ ಪಾಟೀಲ ವಿವರಿಸಿದರು.

40ರಿಂದ 50 ಸಾವಿರ ಪ್ರೇಕ್ಷಕರ ನಿರೀಕ್ಷೆ: ಪಂದ್ಯಾವಳಿಯಲ್ಲಿ ಸುಮಾರು 40ರಿಂದ 50 ಸಾವಿರ ಪ್ರೇಕ್ಷಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಂಪೂರ್ಣ ವಾಟರ್‌ ಪ್ರೂಫ್‌ ಒಳಗೊಂಡ ಮ್ಯಾಟ್‌ ಕಬಡ್ಡಿ ಪಂದ್ಯಾವಳಿ ಇದಾಗಿದೆ. ಪ್ರೇಕ್ಷಕರಿಗೆ ಮತ್ತು ಕ್ರೀಡಾಳುಗಳಿಗೆ ಪ್ರತ್ಯೇಕ ಎರಡು ಹೊತ್ತಿನ ಭೋಜನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಕ್ರೀಡಾಳುಗಳಿಗೆ ಬಿಸಿಎಂ, ಎಂಜಿನಿಯರಿಂಗ್‌ ಕಾಲೇಜು ವಸತಿ ನಿಲಯಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಒಂದೇ ಬಾರಿಗೆ ನಾಲ್ಕು ಆಟಗಳ ಸಿದ್ಧತೆಗೆ ಮೈದಾನ ಸಿದ್ಧಪಡಿಸಿದ್ದು, ಒಟ್ಟು 75 ಮ್ಯಾಚ್‌ ನಡೆಯಲಿವೆ. 3 ದಿನಗಳ ಕಾಲ ಬಸ್‌ ನಿಲ್ದಾಣದಿಂದ ಕ್ರೀಡಾಂಗಣದವರೆಗೆ ಪ್ರೇಕ್ಷಕರ ಅನುಕೂಲಕ್ಕಾಗಿ ನಿರಂತರ ಎರಡು ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಉಮೇಶಗೌಡ ಪಾಟೀಲ ತಿಳಿಸಿದರು.

ಈ ವೇಳೆ ಟಿಎಪಿಸಿಎಂಎಸ್‌ ಅಧ್ಯಕ್ಷ ಅಜ್ಜಪ್ಪ ಹುಡೇದ, ಸಿ.ಸಿ.ಪಾಟೀಲ ಅಭಿಮಾನಿ ಬಳಗ ಅಧ್ಯಕ್ಷ ಮಲ್ಲಪ್ಪ ಮೇಟಿ, ಶಂಕರಗೌಡ ಪಾಟೀಲ, ಚನ್ನಯ್ಯ ಸಂಗಳಮಠ, ಚಂದ್ರಶೇಖರ ದಂಡಿನ, ಬಿ.ಎಸ್‌. ಪಾಟೀಲ, ಬಿ.ಎನ್‌.ಪಾಟೀಲ, ಸಂಗನಗೌಡ ಹಲಗೌಡ್ರ, ಸಿದ್ದಪ್ಪ ಯಲಿಗಾರ, ಹನುಮಂತ ಹವಾಲ್ದಾರ, ಪ್ರಕಾಶ ಹಾದಿಮನಿ, ಪ್ರಕಾಶ ಪಟ್ಟಣಶೆಟ್ಟಿ, ಅನೀಲ ಧರೆಣ್ಣವರ, ಎನ್‌.ವಿ.ಮೇಟಿ, ಶಿವರಾಜ ಕಲ್ಲಾಪೂರ, ಮಂಜು ಮೆಣಸಗಿ ಮುಂತಾದವರಿದ್ದರು.

ಸಚಿವ ಸಿ.ಸಿ.ಪಾಟೀಲ 64ನೇ ಜನ್ಮದಿನ

ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರ 64ನೇ ಜನ್ಮದಿನದ ಅಂಗವಾಗಿ ಲಯನ್ಸ್‌ ಕ್ಲಬ್‌, ಸಿ.ಸಿ.ಪಾಟೀಲ ಅಭಿಮಾನಿ ಬಳಗ, ಭಾರತೀಯ ಜನತಾ ಪಕ್ಷದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್‌ ಸಹಯೋಗದಲ್ಲಿ ಅ.12, 13, 14ರಂದು ಹೊನಲು-ಬೆಳಕಿನ ಅಖೀಲ ಭಾರತ ಪುರುಷ ಹಾಗೂ ಮಹಿಳಾ ಎ ಶ್ರೇಣಿಯ ಆಹ್ವಾನಿತ ಕಬಡ್ಡಿ ಪಂದ್ಯಾವಳಿ ನಡೆಯಲಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.