ಗದಗ: ಲೋಕಾರ್ಪಣೆಗೆ ಸಜ್ಜಾದ 3ಡಿ ತಾರಾಲಯ; 8 ಕೋಟಿ ವೆಚ್ಚದಲ್ಲಿ ನಿರ್ಮಾಣ

ರಾಜಧಾನಿ ಬೆಂಗಳೂರಿನಲ್ಲಿಯೇ 3ಡಿ ತಾರಾಲಯ ಇಲ್ಲದಿರುವುದು ಅಚ್ಚರಿಯ ಸಂಗತಿ

Team Udayavani, Jan 13, 2023, 6:46 PM IST

ಗದಗ: ಲೋಕಾರ್ಪಣೆಗೆ ಸಜ್ಜಾದ 3ಡಿ ತಾರಾಲಯ; 8 ಕೋಟಿ ವೆಚ್ಚದಲ್ಲಿ ನಿರ್ಮಾಣ

ಗದಗ: ನಗರದಲ್ಲಿ 8.08 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ರಾಜ್ಯದ ಎರಡನೇ ಅತೀ ದೊಡ್ಡ ಡಿಜಿಟಲ್‌ ಆ್ಯಕ್ಟಿವ್‌ 3ಡಿ ತಾರಾಲಯ ಶೀಘ್ರದಲ್ಲಿ ಉದ್ಘಾಟನೆಗೊಳ್ಳಲಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮುಕ್ತ ಅವಕಾಶ ದೊರೆಯಲಿದೆ.

ಬೆಟಗೇರಿಯ ಹೆಲ್ತ್‌ ಕ್ಯಾಂಪ್‌ನಲ್ಲಿ 10 ಮೀಟರ್‌ ವ್ಯಾಸ, 15 ಡಿಗ್ರಿ ಕೋನದಲ್ಲಿ ಇರಿಸಲ್ಪಟ್ಟ ಡೋಮ್‌ (ಗುಮ್ಮಟ)ಆಕೃತಿಯಲ್ಲಿ ನಿರ್ಮಾಣಗೊಂಡಿರುವ ಡಿಜಿಟಲ್‌ ಆ್ಯಕ್ಟಿವ್‌ 3ಡಿ ತಾರಾಲಯ ವಿಶಿಷ್ಟವಾಗಿದ್ದು, ಪ್ರದರ್ಶನಗಳು ವೀಕ್ಷಕರಿಗೆ ನೈಜ ಅನುಭವ ನೀಡಲಿವೆ. ಆಕಾಶಕಾಯಗಳು, ಮೋಡಗಳು ಹಾಗೂ ನಿಹಾರಿಕೆಗಳ ಚಲನವಲಗಳನ್ನು 3ಡಿ ಎಫೆಕ್ಟ್‌ನಲ್ಲಿ ವೀಕ್ಷಿಸಬಹುದಾಗಿದ್ದು, ಆಧುನಿಕ ಮತ್ತು ಐತಿಹಾಸಿಕ ಬಾಹ್ಯಾಕಾಶ ನೌಕೆ, ಧೂಮಕೇತುಗಳು, ಕ್ಷುದ್ರ ಗ್ರಹಗಳು, ಗ್ಯಾಲಕ್ಸಿಗಳನ್ನು ಅತೀ ಸಮೀಪದಿಂದ ಕಣ್ತುಂಬಿಕೊಳ್ಳಬಹುದಾಗಿದೆ.

ವಿದ್ಯಾರ್ಥಿಗಳು ಜೀವಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ತಂತ್ರಜ್ಞಾನ, ಎಂಜಿನಿಯರಿಂಗ್‌ ಹಾಗೂ ಖಗೋಳಶಾಸ್ತ್ರ, ಬಾಹ್ಯಾಕಾಶ ವಿಜ್ಞಾನ, ನೈಸರ್ಗಿಕ ವಿಜ್ಞಾನ, ಭೂ ವಿಜ್ಞಾನದ ದೃಶ್ಯಗಳನ್ನು ಕನ್ನಡ, ಇಂಗ್ಲಿಷ್‌ ಹಾಗೂ ಹಿಂದಿ ಭಾಷೆಯಲ್ಲಿ ವೀಕ್ಷಿಸಬಹುದಾಗಿದೆ.

2017ರಲ್ಲಿ ಆರಂಭಗೊಂಡಿದ್ದ ಕಾಮಗಾರಿ: ಬೆಟಗೇರಿಯ ಹೆಲ್ತ್ ಕ್ಯಾಂಪ್‌ ಬಳಿ 2016-17ನೇ ಸಾಲಿನಲ್ಲಿ ಅಂದಿನ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಸಚಿವರಾಗಿದ್ದ ಎಚ್‌.ಕೆ. ಪಾಟೀಲ ಅವರು ಡಿಜಿಟಲ್‌ ಆ್ಯಕ್ಟಿವ್‌ 3ಡಿ ತಾರಾಲಯದ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಕೋವಿಡ್‌ ಹಾಗೂ ಅನುದಾನದ ಕೊರತೆ ನಡುವೆ ಕಾಮಗಾರಿ ವಿಳಂಬಗೊಂಡಿತ್ತು. ನಂತರ ಎಲ್ಲ ಅಡೆತಡೆಗಳನ್ನು ಸರಿಪಡಿಸಿಕೊಂಡು ಉದ್ಘಾಟನೆಗೆ ಸಜ್ಜುಗೊಂಡಿದ್ದು, ಫೆಬ್ರವರಿಯೊಳಗಾಗಿ ಲೋಕಾರ್ಪಣೆಗೊಳ್ಳಲಿದೆ.

8.08 ಕೋಟಿ ವೆಚ್ಚದ ತಾರಾಲಯ: ನಿರ್ಮಿತಿ ಕೇಂದ್ರದಿಂದ 3.28 ಕೋಟಿ ರೂ. ವೆಚ್ಚದಲ್ಲಿ ತಾರಾಲಯದ ಕಟ್ಟಡ ನಿರ್ಮಾಣಗೊಂಡರೆ, ಹುಬ್ಬಳ್ಳಿಯ ವರ್‍ನಾಜ್‌ ಟೆಕ್ನಾಲಾಜಿ ಸಂಸ್ಥೆ 4.8 ಕೋಟಿ ರೂ. ವೆಚ್ಚದಲ್ಲಿ ತಂತ್ರಜ್ಞಾನ ಅಳವಡಿಸಿದೆ. ಒಟ್ಟು 8.08 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್‌ ಆ್ಯಕ್ಟಿವ್‌ 3ಡಿ ತಾರಾಲಯ ನಿರ್ಮಾಣಗೊಂಡಿದೆ.

65 ಆಸನ ವ್ಯವಸ್ಥೆ: ಹವಾ ನಿಯಂತ್ರಿತ ಡಿಜಿಟಲ್‌ ಆ್ಯಕ್ಟಿವ್‌ 3ಡಿ ತಾರಾಲಯ 65 ಆಸನಗಳನ್ನು ಹೊಂದಿದ್ದು, ಅರ್ಧ ಗಂಟೆ ಅವ ಧಿಯ ದೃಶ್ಯಾವಳಿಗಳನ್ನು ಒಂದು ಅವಧಿಯಲ್ಲಿ 65 ಜನರು ವೀಕ್ಷಿಸಬಹುದಾಗಿದೆ. ಪ್ರತಿಯೊಬ್ಬರಿಗೂ ಆ್ಯಕ್ಟಿವ್‌ 3ಡಿ ಗ್ಲಾಸ್‌ ಲಭ್ಯವಿದ್ದು, ದೃಶ್ಯಾವಳಿಗಳ ಜೊತೆಗೆ ಸಾಗಿದ ಅನುಭವ ಉಂಟಾಗಲಿದೆ.

ರಾಜ್ಯದಲ್ಲೇ ಎರಡನೇ ತಾರಾಲಯ: ಮಂಗಳೂರಿನ ಪಿಲಿಕುಳದಲ್ಲಿ 180 ಆಸನಗಳುಳ್ಳ 18 ಮೀಟರ್‌ ವ್ಯಾಸದ, 15 ಡಿಗ್ರಿ ಕೋನದಲ್ಲಿ ಇರಿಸಲ್ಪಟ್ಟ ಡೋಮ್‌ (ಗುಮ್ಮಟ) ಆಕೃತಿಯಲ್ಲಿ ನಿರ್ಮಾಣಗೊಂಡಿರುವ 3ಡಿ ತಾರಾಲಯ ರಾಜ್ಯದ ಮೊದಲ ಸ್ಥಾನ ಪಡೆದಿದ್ದರೆ, ಗದುಗಿನಲ್ಲಿ 65 ಆಸನಗಳುಳ್ಳ 18 ಮೀಟರ್‌ ವ್ಯಾಸದ, 15 ಡಿಗ್ರಿ ಕೋನದಲ್ಲಿ ಇರಿಸಲ್ಪಟ್ಟ ಡೋಮ್‌ (ಗುಮ್ಮಟ) ಆಕೃತಿಯಲ್ಲಿ ನಿರ್ಮಾಣಗೊಂಡಿರುವ ಡಿಜಿಟಲ್‌ ಆಕ್ಟಿವ್‌ 3ಡಿ ತಾರಾಲಯ ಎರಡನೇ ಸ್ಥಾನ ಪಡೆದಿದೆ. ರಾಜಧಾನಿ ಬೆಂಗಳೂರಿನಲ್ಲಿಯೇ 3ಡಿ ತಾರಾಲಯ ಇಲ್ಲದಿರುವುದು ಅಚ್ಚರಿಯ ಸಂಗತಿ.

ಗದಗ ನಗರದಲ್ಲಿ ಡಿಜಿಟಲ್‌ ಆ್ಯಕ್ಟಿವ್‌ 3ಡಿ ತಾರಾಲಯ ನಿರ್ಮಾಣಗೊಂಡಿರುವುದು ಹೆಮ್ಮೆಯ ಸಂಗತಿ. 3ಡಿ ತಾರಾಲಯ ಆದಷ್ಟು ಬೇಗ ಲೋಕಾರ್ಪಣೆಗೊಳ್ಳಲಿದ್ದು, ವಿದ್ಯಾರ್ಥಿಗಳ, ಪಾಲಕರ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಆದಷ್ಟು ಕಡಿಮೆ ದರದಲ್ಲಿ ಲಭ್ಯವಾಗುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಚ್‌.ಕೆ. ಪಾಟೀಲ, ಶಾಸಕರು

ಶಾಸಕ ಎಚ್‌.ಕೆ. ಪಾಟೀಲ ಅವರ ಆಸಕ್ತಿ, ಇಚ್ಛಾಶಕ್ತಿ ಹಾಗೂ ಪ್ರೋತ್ಸಾಹದ ಫಲವಾಗಿ ಗದಗ ನಗರದಲ್ಲಿ ಡಿಜಿಟಲ್‌ ಆ್ಯಕ್ಟಿವ್‌ 3ಡಿ ತಾರಾಲಯ ನಿರ್ಮಾಣಗೊಂಡಿದೆ. 4.8 ಕೋಟಿ ರೂ. ವೆಚ್ಚದ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಲಾಗಿದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ಹಾಗೂ
ವಿಜ್ಞಾನಿಗಳಿಗೆ ಅನುಕೂಲವಾಗಲಿದೆ.
ದಿನೇಶ ಬಾಡಗಂಡಿ, ವರ್‍ನಾಜ್‌ ಟೆಕ್ನಾಲಜಿ ಸಂಸ್ಥಾಪಕರು

*ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.