ಗದಗ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 42 ಜೋಡಿ


Team Udayavani, Feb 17, 2024, 5:36 PM IST

ಗದಗ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 42 ಜೋಡಿ

ಉದಯವಾಣಿ ಸಮಾಚಾರ
ಗದಗ: ಮದುವೆ ಎನ್ನುವುದು ಗಂಡು-ಹೆಣ್ಣನ್ನು ಕೂಡಿಸುವುದು ಮಾತ್ರವಲ್ಲ. ಎರಡು ಮನಸ್ಸು ಒಂದುಗೂಡಿಸುವುದಾಗಿದೆ. ಮನಸ್ಸುಗಳು ಒಂದುಗೂಡಿದಾಗ ಮಾತ್ರ ಮದುವೆಗೆ ಅರ್ಥ ಬರುತ್ತದೆ ಎಂದು ಶಿರಹಟ್ಟಿ-ಬಾಲೆಹೊಸೂರ ಸಂಸ್ಥಾನಮಠದ ಫಕ್ಕೀರ ದಿಂಗಾಲೇಶ್ವರ ಶ್ರೀಗಳು ಹೇಳಿದರು.

ಬಳಗಾನೂರಿನಲ್ಲಿ ಮೌನಯೋಗಿ ಚಿಕೇನಕೊಪ್ಪ ಚನ್ನವೀರ ಶರಣರ 29ನೇ ಪುಣ್ಯಸ್ಮರಣೋತ್ಸವ, ಸಾಮೂಹಿಕ ವಿವಾಹ ಹಾಗೂ ಜಾತ್ರಾಮಹೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಯಾವ ಮದುವೆಗಳು ದೇಹದಿಂದ ಕೂಡಿರುತ್ತವೆ, ಅಂತಹ ಮದುವೆಗಳು ವಿಚ್ಛೇದನದಲ್ಲಿ ಅಂತ್ಯಗೊಳ್ಳುತ್ತವೆ. ಎರಡು ಮನಸ್ಸುಗಳು ಕೂಡಿ ಮದುವೆಯಾದ ಜೋಡಿ ಬ್ರಹ್ಮನಿಂದಲೂ ಅಗಲಿಸಲು ಸಾಧ್ಯವಿಲ್ಲ. ಅದುವೇ ನಿಜವಾದ ಸಂಸಾರ ಎಂದು ಹೇಳಿದರು.

ಮದುವೆಗಳಲ್ಲಿ ವರದಕ್ಷಿಣೆ ಎನ್ನುವುದು ಅತ್ಯಂತ ಕೆಟ್ಟ, ದೌರ್ಜನ್ಯ ಹಾಗೂ ದೌರ್ಬಲ್ಯದ ಪದ್ಧತಿ. ವರದಕ್ಷಿಣೆ ತೆಗೆದುಕೊಂಡು ಮದುವೆಯಾದವನು, ಮದುವೆಯಾದ ನಂತರ ಹೆಂಡತಿ ಅಥವಾ ಪರರ ಮಾತು ಕೇಳಿ ತಂದೆ-ತಾಯಿ ಬಳಿ ಆಸ್ತಿ ಪಾಲು ಕೇಳುವವನು ನಿಜವಾದ ಪುರುಷನಲ್ಲ. ವ್ಯಕ್ತಿಯು ಊಟಕ್ಕೆ ಕುಳಿತ ಸಂದರ್ಭ ಅಡುಗೆ ಬಡಿಸಿದ ಕೂಡಲೇ ತುತ್ತನ್ನು ಕೈಯಲ್ಲಿಟ್ಟುಕೊಂಡು ಇದು ತಾನು ದುಡಿದು ತಿನ್ನುತ್ತಿರುವ ತುತ್ತಾ ಎಂದು ಪ್ರಶ್ನಿಸುವವನು ನಿಜವಾದ ಪುರುಷ ಎಂದು ಹೇಳಿದರು.

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಮಠಗಳು ಸಾಕಷ್ಟಿವೆ. ಆದರೆ, ತಮ್ಮದೆ ದಾರಿಯಲ್ಲಿ ಮಠಗಳನ್ನು ಕಟ್ಟಿ ಶಿಕ್ಷಣ, ದಾಸೋಹ ಹಾಗೂ ಸಾಮೂಹಿಕ ವಿವಾಹ ಮಾಡುವ ಮೂಲಕ ಅಂದಿನ ಹಾಗೂ ಇಂದಿನ ಸ್ವಾಮೀಜಿಗಳು ಮಠದ ಅಭಿವೃದ್ಧಿಗೆ
ಶ್ರಮಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.

ಚಿಕ್ಕಮಲ್ಲಿಗವಾಡದ ಆಶ್ರಮದ ಎ.ಪಿ. ಪಾಟೀಲ ಗುರೂಜಿ ಮಾತನಾಡಿ, ಗೃಹಸ್ಥಾಶ್ರಮ ಬಹಳ ಸೂಕ್ಷ್ಮ ಜೀವನವಾಗಿದೆ. ಪೂಜ್ಯರ ನುಡಿಯೊಳಗೆ ಶಬ್ದದ ಅರ್ಥವಿರುತ್ತದೆ. ಅದನ್ನು ಬರಿ ಕಿವಿಯಿಂದ ಕೇಳಿದರೆ ಸಾಲದು. ಸತ್ಸಂಗದ ಅನುಭವ ಪಡೆದು, ಅನುಷ್ಟಾನಕ್ಕೆ ತರಬೇಕೆಂದರು.

ಗದುಗಿನ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಮಾತನಾಡಿ, ಕಲ್ಲಿಗೆ ಸಂಸ್ಕಾರ ಕೊಟ್ಟು ನೀರು ಹಾಕಿದಾಗ ಹೂವಾಗಿ ಅರಳುವಂತೆ ಚನ್ನವೀರ ಶರಣರು ಭಕ್ತರಿಗೆ ಜೀವನದ ಮಾರ್ಗದರ್ಶನ ಮಾಡಿದ್ದಾರೆ. ದಾನಿಗಳು ಕೊಟ್ಟ ದೇಣಿಗೆಯಿಂದ ಶಿಕ್ಷಣ,
ದಾಸೋಹ ಹಾಗೂ ಸಾಮೂಹಿಕ ಮದುವೆ ಮಾಡಿ ಸಮಾಜದ ಹಣ ಸಮಾಜಕ್ಕೆ ನೀಡುತ್ತಿದ್ದಾರೆ ಎಂದು ಹೇಳಿದರು.

ವೇದಿಕೆ ಮೇಲೆ ಬಳಗಾನೂರಿನ ಶಿವಶಾಂತವೀರ ಶರಣರು, ಹೊಸಳ್ಳಿ ಅಭಿನವ ಬೂದೀಶ್ವರ ಶ್ರೀಗಳು, ಕುಂದಗೋಳ ಕಲ್ಯಾಣಮಠದ ಅಭಿನವ ಬಸವಣ್ಣನವರು, ಬಿಜೆಪಿ ಯುವ ಮುಖಂಡ ಉಮೇಶಗೌಡ ಪಾಟೀಲ ಸೇರಿ ಮುಂತಾದವರು ಇದ್ದರು.

ಈ ಸಂದರ್ಭ 42 ಜೋಡಿಗಳು ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕಾರಟಗಿ ಸಂಜಯ ಜೆ.ಸಿ. ಹಾಗೂ ಬಳ್ಳಾರಿ ದಿ. ಎಸ್‌.ಕೆ.ಆರ್‌. ಜಿಲಾನಿ ಭಾಷಾ ಅವರಿಗೆ ಶರಣಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಂತರ ಭಕ್ತರಿಂದ ಶಿವಶಾಂತವೀರ ಶರಣರಿಗೆ ತುಲಾಬಾರ ಸೇವೆ, ರಕ್ತದಾನ ಶಿಬಿರ ಜರುಗಿದವು. ಬೆಂಗಳೂರಿನ ಮಹೇಶಕುಮಾರ ಹೇರೂರ ಸಂಗೀತ ಕಾರ್ಯಕ್ರಮ ನೀಡಿದರು. ಶಿವಲಿಂಗಯ್ಯಶಾಸ್ತ್ರಿ ಹಿರೇಮಠ ಸಿದ್ದಾಪೂರ ಕಾರ್ಯಕ್ರಮ ನಿರೂಪಿಸಿದರು. ಬಿ.ವೈ. ಡೊಳ್ಳಿನ ವಂದಿಸಿದರು.

ಟಾಪ್ ನ್ಯೂಸ್

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.