ಗದಗ: ಬಿಸಿಲಿನ ಬೇಗೆಗೆ ಸ್ವಿಮ್ಮಿಂಗ್‌ ಫೂಲ್‌ಗೆ ಲಗ್ಗೆ


Team Udayavani, May 14, 2024, 2:50 PM IST

ಗದಗ: ಬಿಸಿಲಿನ ಬೇಗೆಗೆ ಸಿಮ್ಮಿಂಗ್‌ ಫೂಲ್‌ಗೆ ಲಗ್ಗೆ

ಉದಯವಾಣಿ ಸಮಾಚಾರ
ಗದಗ: ಸಾರ್ವಜನಿಕರು ಬಿಸಿಲಿನ ತಾಪದಿಂದ ಹೊರಬರಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಗದಗ-ಬೆಟಗೇರಿ ಅವಳಿ ನಗರದಲ್ಲಿ ನಿರ್ಮಾಣಗೊಂಡಿರುವ ನಾಲ್ಕು ಸ್ವಿಮ್ಮಿಂಗ್‌ ಪೂಲ್‌ಗ‌ಳಿಗೆ ಲಗ್ಗೆಯಿಟ್ಟಿದ್ದಾರೆ.

ಕಳೆದ ನಾಲ್ಕು ತಿಂಗಳ ಅವಧಿ ಯಲ್ಲಿ ಅಂದರೆ ಜನವರಿಯಿಂದ ಏಪ್ರಿಲ್‌ ಅಂತ್ಯದವರೆಗೆ 30 ಸಾವಿರಕ್ಕೂ ಅಧಿಕ ಜನರು ಸ್ವಿಮ್ಮಿಂಗ್‌ ಪೂಲ್‌ ಬಳಕೆ ಮಾಡಿಕೊಂಡಿದ್ದು, 14.62 ಲಕ್ಷ ರೂ. ಕಲೆಕ್ಷನ್‌ ಆಗಿದೆ. ಕಳೆದ ಕೆಲ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಏಪ್ರಿಲ್‌ ತಿಂಗಳಲ್ಲಿ ಬಿಸಿಲು ರೌದ್ರಾವತಾರ ತಾಳಿದಂತಿತ್ತು.

ಉಷ್ಣಾಂಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗಿತ್ತು. ಪ್ರಸಕ್ತ ವರ್ಷ ಏಪ್ರಿಲ್‌ 6ರಂದು 41 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿರು ವುದು ಕಳೆದ 12 ವರ್ಷಗಳ ಇತಿಹಾಸದಲ್ಲಿ ದಾಖಲೆಯಾಗಿತ್ತು. ಉಷ್ಣಾಂಶದಲ್ಲಿ ಏರಿಕೆ, ಬಿಸಿಲಿನ ತಾಪ
ಹಾಗೂ ಈಜು ಕಲಿಯುವ ಹುಮ್ಮಸ್ಸಿನಲ್ಲಿ ಅತ್ಯಧಿಕ ಸಂಖ್ಯೆಯ ಸ್ವಿಮ್ಮಿಂಗ್‌ ಪೂಲ್‌ಗೆ ಆಗಮಿಸಿ ಈಜುವ ಮೂಲಕ ತಣಿದಿದ್ದಾರೆ, ಸಂತಸ ಪಟ್ಟಿದ್ದಾರೆ..

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ನಗರದ ಕೆ.ಎಚ್‌. ಪಾಟೀಲ ಜಿಲ್ಲಾ ಕ್ರೀಡಾಂಗಣದ ಆವರಣ, ಕಳಸಾಪೂರ ರಸ್ತೆ ನಂದೀಶ್ವರ ಈಜುಕೊಳ, ರಾಜೀವಗಾಂಧಿ ನಗರದ ಸ್ವಾಮಿ ವಿವೇಕಾನಂದ ಈಜುಕೊಳ, ವಸಂತಸಿಂಗ್‌ ಜಮಾದಾರ ನಗರದಲ್ಲಿರುವ ಈಜುಕೊಳ ಸೇರಿ ಒಟ್ಟು ನಾಲ್ಕು ಈಜುಗೊಳದಲ್ಲಿ ಸಾರ್ವಜನಿಕರು ಬಿಸಿಲಿನ ಬೇಗೆಯಿಂದ ತಣಿಯಲು ಪ್ರಯತ್ನಿಸಿದ್ದಾರೆ.

ಅವಳಿ ನಗರದಲ್ಲಿರುವ ನಾಲ್ಕೂ ಈಜುಕೊಳಗಳಲ್ಲಿ ಪ್ರತಿದಿನ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಸ್ವಿಮ್ಮಿಂಗ್‌ ಫೂಲ್‌ ತೆರೆದಿದ್ದು ತಲಾ 45 ನಿಮಿಷಗಳಿಗೆ 50 ರೂ. ವಂತಿಗೆ ಪಾವತಿಸಿ ಪ್ರತಿದಿನ ಸುಮಾರು 250ರಿಂದ 300 ಜನರು ಸ್ವಿಮ್ಮಿಂಗ್‌ ಪೂಲ್‌ ಬಳಕೆ
ಮಾಡಿಕೊಂಡಿದ್ದಾರೆ. ಈಜು ಕಲಿಯುವವರು ತರಬೇತಿ ಸಹಿತ 21 ದಿನಗಳಿಗೆ 3 ಸಾವಿರ ರೂ., ಮಾಸಿಕ ಪಾಸ್‌ 1,000 ರೂ. ಶುಲ್ಕ ಪಾವತಿಸಿ ಈಜುಕೊಳಗಳನ್ನು ಸದ್ಬಳಕೆ ಮಾಡಿಕೊಂಡಿದ್ದಾರೆ.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ಮಕ್ಕಳಿಗೆ ಮತ್ತು ವಯಸ್ಕರಿಗೆ ವಿಶೇಷ ಬೇಸಿಗೆ ಶಿಬಿರ ಆರಂಭಿಸಿತ್ತು. ನಗರದ ಕೆ.ಎಚ್‌. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿನ ಈಜುಕೊಳದಲ್ಲಿ 3 ಸಿಬ್ಬಂದಿ, ಕಳಸಾಪೂರ ರಸ್ತೆಯ ನಂದೀಶ್ವರ ಈಜುಕೊಳ, ರಾಜೀವಗಾಂಧಿ ನಗರದ ಸ್ವಾಮಿ ವಿವೇಕಾನಂದ ಈಜುಕೊಳ ಹಾಗೂ ವಸಂತಸಿಂಗ್‌ ಜಮಾದಾರ ನಗರದಲ್ಲಿರುವ ಈಜುಕೊಳದಲ್ಲಿ ತಲಾ ಇಬ್ಬರಂತೆ ಒಟ್ಟು 9 ಸಿಬ್ಬಂದಿ ಈಜುಕೊಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈ ವಿಶೇಷ ಶಿಬಿರದಲ್ಲಿ ಮನರಂಜನೆಗಾಗಿ ಮಾತ್ರ ಗಂಟೆ ಮತ್ತು ತಿಂಗಳ ಲೆಕ್ಕದಲ್ಲಿ ಶುಲ್ಕ ಪಾವತಿಸಿ
ಈಜುಕೊಳಕ್ಕೆ ಆಗಮಿಸಿ ದೇಹ ತಣ್ಣಗೆ ಮಾಡಿಕೊಳ್ಳುತ್ತಿದ್ದಾರೆ. ಶಿಬಿರಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಕ್ರೀಡಾ ತರಬೇತುದಾರ ಮಾಹಿತಿ ನೀಡಿದರು.

ಮಾರ್ಚ್‌, ಏಪ್ರಿಲ್‌ನಲ್ಲೆ ಅತೀ ಹೆಚ್ಚು ಶುಲ್ಕ ಸಂದಾಯ: ಕಳೆದ ಮಾರ್ಚ್‌ ತಿಂಗಳಿನಲ್ಲಿ ನಾಲ್ಕು ಈಜುಕೊಳ ಮೂಲಕ ಸಾರ್ವಜನಿಕರಿಂದ 3,90, 100 ರೂ. ಹಣ ಸಂದಾಯವಾದರೆ, ಏಪ್ರಿಲ್‌ನಲ್ಲಿ ದಾಖಲೆಯ 9,24,350 ರೂ. ಸಂದಾಯವಾಗುವ
ಮೂಲಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೊಕ್ಕಸಕ್ಕೆ ಅತ್ಯಧಿಕ ಹಣ ಪಾವತಿಯಾಗಿರುವುದು ಇದೇ ಮೊದಲ ಬಾರಿಯಾಗಿದೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ನಾಲ್ಕು ಈಜುಕೊಳಗಳು ಕಾರ್ಯ ನಿರ್ವಹಿಸುತ್ತಿರುವುದು
ಹೆಮ್ಮೆಯ ವಿಷಯ. ಈ ಭಾಗದ ವಿದ್ಯಾರ್ಥಿಗಳಿಗೆ, ಈಜುಪಟುಗಳಿಗೆ, ಸಾರ್ವಜನಿಕರಿಗೆ ಈಜುಕೊಳಗಳು ಸದ್ಬಳಕೆಯಾಗುತ್ತಿವೆ. ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌., ಜಿಪಂ ಸಿಇಒ ಭರತ್‌ ಎಸ್‌. ಸಂಪೂರ್ಣ ಸಹಾಯ, ಸಹಕಾರ ನೀಡಿದ್ದರಿಂದಲೇ ಇಷ್ಟೆಲ್ಲ ಸಾಧ್ಯವಾಗಿದೆ.

ಡಾ|ಶರಣು ಗೊಗೇರಿ, ಸಹಾಯಕ
ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ.

*ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.