Gadag:ಬಿರುಬಿಸಿಲ ದಾಹ ನೀಗಿಸುವ ನೀರಿನ ಅರವಟ್ಟಿಗೆ;ನಿಟ್ಟುಸಿರು ಬಿಡುತ್ತಿರುವ ಸಾರ್ವಜನಿಕರು

ಬಿಡಾಡಿ ದನಗಳು ಇಲ್ಲಿನ ನೀರನ್ನು ಕುಡಿದು ದಾಹ ನೀಗಿಸಿಕೊಳ್ಳುತ್ತಿವೆ.

Team Udayavani, May 19, 2023, 6:11 PM IST

Gadag:ಬಿರುಬಿಸಿಲ ದಾಹ ನೀಗಿಸುವ ನೀರಿನ ಅರವಟ್ಟಿಗೆ;ನಿಟ್ಟುಸಿರು ಬಿಡುತ್ತಿರುವ ಸಾರ್ವಜನಿಕರು

ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಬಿಸಿಲಿನ ತಾಪ ಹೆಚ್ಚಿದ್ದು, ಸಾರ್ವಜನಿಕರು, ಪ್ರಯಾಣಿಕರು ಪರಿತಪಿಸುವಂತಾಗಿದೆ.
ಬಿರುಬಿಸಿಲಿಗೆ ಬಸವಳಿದ ಜನತೆಯ ದಾಹ ನೀಗಿಸಲು ನಗರದ ವಿವಿಧೆಡೆ ಅರವಟ್ಟಿಗೆ ಸ್ಥಾಪಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿರುವುದರಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ.

ನಗರದಲ್ಲಿ ದಿನೇ ದಿನೆ ಬಿಸಿಲ ತಾಪ ಹೆಚ್ಚುತ್ತಿದೆ. ನಗರ ಪ್ರದೇಶದ ಜನರು ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಭಾಗಗಳಿಂದ ನಾನಾ ಕೆಲಸಗಳಿಗೆ ನಗರಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಲ್ಲಲ್ಲಿ ಅರವಟ್ಟಿಗೆ ಸ್ಥಾಪಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.

ನಗರದ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿರುವ ಅರವಟ್ಟಿಗೆಗೆ ನಾನಾ ಸಂಘ ಸಂಸ್ಥೆಗಳು, ಕೆಲವರು ವೈಯಕ್ತಿಕವಾಗಿ ನೀರು ತುಂಬಿಸುವ ಕಾಯಕದಲ್ಲಿ ನಿತ್ಯವೂ ತೊಡಗಿದ್ದಾರೆ. ಕೆಲವೆಡೆ ಪ್ಲಾಸ್ಟಿಕ್‌ ಕ್ಯಾನ್‌ಗಳಲ್ಲಿ, ಕೆಲವು ಕಡೆ ಮಣ್ಣಿನ ಮಡಕೆಗೆ ಬಟ್ಟೆ ಸುತ್ತಿ ನೀರನ್ನು ತುಂಬಿಡಲಾಗಿದೆ. ಪರಿಣಾಮ ನಾನಾ ಕೆಲಸ-ಕಾರ್ಯಗಳಿಗಾಗಿ ಜಿಲ್ಲಾ ಕೇಂದ್ರಕ್ಕೆ ಆಗಮಿಸುವ ಗ್ರಾಮೀಣರು,
ಕಾರ್ಮಿಕರು ಅರವಟ್ಟಿಗೆ ನೀರು ಕುಡಿದು ದಾಹ ನೀಗಿಸಿಕೊಳ್ಳುತ್ತಿದ್ದಾರೆ.

ವಿವಿಧೆಡೆ ಅರವಟ್ಟಿಗೆ: ಗದಗ-ಬೆಟಗೇರಿ ನಗರಸಭೆ ಮುಂಭಾಗ, ಬಸವೇಶ್ವರ ವೃತ್ತ, ಕೆ.ಸಿ. ರಾಣಿ ರಸ್ತೆ, ಬ್ಯಾಂಕ್‌ ರಸ್ತೆ, ಸರಾಫ್‌ ಬಜಾರ್‌, ಜನತಾ ಬಜಾರ್‌, ಹಳೆಯ ಜಿಲ್ಲಾಧಿಕಾರಿ ಕಚೇರಿ, ಬನ್ನಿ ಮಹಾಂಕಾಳಿ ದೇವಸ್ಥಾನ, ಕನ್ನಿಕಾಪರಮೇಶ್ವರಿ ದೇವಸ್ಥಾನ ಸೇರಿದಂತೆ ವಿವಿಧೆಡೆ ಅರವಟ್ಟಿಗೆಗಳನ್ನು ಇಡಲಾಗಿದೆ.

ಅಲ್ಲದೇ, ನಗರದ ಪ್ರಮುಖ ಮಾರ್ಗ, ವೃತ್ತಗಳಲ್ಲಿ ನಾನಾ ಸಂಘಟನೆಗಳು ಬೇಸಿಗೆ ದಾಹ ನೀಗಿಸಲೆಂದು ಅರವಟ್ಟಿಗೆಗಳನ್ನು
ಸ್ಥಾಪಿಸಿವೆ. ಸಂಘಟನೆಗಳ ಪದಾಧಿಕಾರಿಗಳು ನಿತ್ಯ ಅರವಟ್ಟಿಗೆಗಳಿಗೆ ನೀರು ತುಂಬಿಸುತ್ತಾರೆ. ಕೆಲವೆಡೆ ಮಣ್ಣಿನ ಮಡಕೆ, ಇನ್ನೂ ಕೆಲವೆಡೆ ನೀರಿನ ಕ್ಯಾನ್‌ ಗಳನ್ನು ಇಡಲಾಗಿದೆ. ಕಾರ್ಯ ನಿಮಿತ್ತ ನಗರಕ್ಕೆ ಬರುವ ಜನತೆ, ಅಲ್ಲಲ್ಲಿ ಸ್ಥಾಪಿಸಿರುವ ಅರವಟ್ಟಿಗೆ ನೀರು ಕುಡಿದೇ ಮುಂದೆ ಹೋಗುತ್ತಾರೆ. ಅರವಟ್ಟಿಗೆ ಸ್ಥಾಪಿಸಿದವರ ಹೊಟ್ಟೆ ತಣ್ಣಗಿರಲಿ ಎಂದು ಹಾರೈಸುವ ದೃಶ್ಯ ಸಹಜವಾಗಿ ಕಾಣುತ್ತದೆ.

ದುಬಾರಿ ನೀರು
ನಗರದಲ್ಲಿ ಒಂದು 20ಲೀ. ನೀರಿನ ಕ್ಯಾನ್‌ಗೆ 30 ರಿಂದ 50 ರೂ., 2 ಲೀಟರ್‌ ನೀರಿನ ಬಾಟಲ್‌ಗೆ 30 ರೂ., ಲೀಟರ್‌ ನೀರಿನ ಬಾಟಲ್‌ಗೆ 20 ರೂ. ಇದೆ. ಸಣ್ಣ ಪುಟ್ಟ ಹೋಟೆಲ್‌ಗ‌ಳಲ್ಲಿ ಬರೀ ನೀರು ಕೇಳಿದರೆ ಕೊಡುವ ಮನಸ್ಥಿತಿಯಲ್ಲಿ ಕೆಲವರು ಇಲ್ಲ. ಊಟ, ತಿಂಡಿ, ಕಾಫಿಗೆ ಬರುವವರಿಗೆ ಮಾತ್ರ ನೀರು ಕೊಡುತ್ತಾರೆ. ಹೋಟೆಲ್‌ನವರು ಸಹ ಹಣ ಪಾವತಿಸಿ ಟ್ಯಾಂಕರ್‌ಗಳಲ್ಲಿ ನೀರನ್ನು ಹಾಕಿಸಿಕೊಳ್ಳುತ್ತಿರುವುದರಿಂದ ಪುಕ್ಕಟೆ ನೀರು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಅರವಟ್ಟಿಗೆಗಳಲ್ಲಿ ಇರುವ ನೀರೇ ಬಹುಪಾಲು ಮಂದಿಗೆ ಆಸರೆಯಾಗಿದೆ.

ಬಿಡಾಡಿ ದನಗಳಿಗೂ ನೀರಿನ ವ್ಯವಸ್ಥೆ ಬಿಸಿಲಿನ ಧಗೆಗೆ ಜನಸಾಮಾನ್ಯರಂತೆ ಜಾನುವಾರುಗಳು ಕೂಡ ದಾಹದಿಂದ
ಬಳಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು, ನಗರದ ವೀರನಾರಾಯಣ ದೇವಸ್ಥಾನದ ಬಳಿ ತೋಂಟದಾರ್ಯ ಮಠದ
ಜಾತ್ರಾ ಮಹೋತ್ಸವ ಸಮಿತಿ ಕಳೆದ 2017ರಲ್ಲಿ ಬಿಡಾಡಿ ದನಗಳಿಗೆ ದನದ ನಿರ್ಮಾಣ ಮಾಡಿರುವ ಅರವಟ್ಟಿಗೆಗೆ ಪ್ರತಿದಿನ ನೀರು
ಹಾಕಲಾಗುತ್ತಿದೆ. ಬಿಸಿಲಿನ ಸಮಯದಲ್ಲಿ ಬಿಡಾಡಿ ದನಗಳು ಇಲ್ಲಿನ ನೀರನ್ನು ಕುಡಿದು ದಾಹ ನೀಗಿಸಿಕೊಳ್ಳುತ್ತಿವೆ.

ಗರಿಷ್ಠ ಉಷ್ಣಾಂಶ ದಾಖಲೆ
ಗದಗ-ಬೆಟಗೇರಿ ಅವಳಿ ನಗರದಲ್ಲಿ ಕಳೆದೊಂದು ವಾರದಿಂದ ಗರಿಷ್ಠ 39ರಿಂದ 40 ಹಾಗೂ ಕನಿಷ್ಠ 22ರಿಂದ 24 ಡಿಗ್ರಿ
ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗುತ್ತಿದ್ದು, ಸಾರ್ವಜನಿಕರು ಬಿರುಬಿಸಿಲಿನ ಹೊಡೆತಕ್ಕೆ ಕಂಗಾಲಾಗುತ್ತಿದ್ದಾರೆ. ಆದಷ್ಟು ಬೇಗ ಮಳೆಗಾಲ ಆವರಿಸಿ ಭೂಮಿ ತಂಪಾಗಲೆಂದು ದೇವರಲ್ಲಿ ದುಬಾರಿ ಪ್ರಾರ್ಥಿಸುತ್ತಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಬೇಸಿಗೆ ಚುರುಕಾಗಿದೆ. ಬಿರುಬಿಸಿಲಿಗೆ ದಾಹ, ಆಯಾಸ ಉಂಟಾಗುತ್ತಿದ್ದು, ಕೆಲವು ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಸಾರ್ವಜನಿಕರು ದಾಹ ನೀಗಿಸಲು ಅರವಟ್ಟಿಗೆ ನಿರ್ಮಿಸಿರುವುದು ಖುಷಿ
ಕೊಟ್ಟಿದೆ.
ಮಂಜುನಾಥ ದ್ಯಾಮಣ್ಣವರ
ಹರ್ತಿ ಗ್ರಾಮದ ನಿವಾಸಿ

*ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.