Gadag-Betageri: ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸ್ ಇಲಾಖೆ

ವಿವಿಧ ದಾಖಲಾತಿ ಪರಿಶೀಲಿಸಿ ಸೀಜ್...

Team Udayavani, Feb 7, 2024, 8:54 PM IST

1-asddasd

ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ವಾಹನ ಚಾಲನಾ ಲೈಸೆನ್ಸ್, ಶಹರ/ಗ್ರಾಮೀಣ ಪರವಾನಿಗೆ, ಯುನಿಫಾರ್ಮ್ ಮತ್ತು ನೋಂದಣಿ ಹೀಗೆ ವಿವಿಧ ದಾಖಲಾತಿ ಪರಿಶೀಲಿಸಿದ ಪೊಲೀಸ್ ಇಲಾಖೆಯು ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದೆ.

ಗದಗ-ಬೆಟಗೇರಿ ನಗರದ 8 ಪ್ರಮುಖ ಸರ್ಕಲ್‌ಗಳಲ್ಲಿ ವಿಶೇಷ ಅಧಿಕಾರಿಗಳ ತಂಡಗಳ ಮೂಲಕ ಕಾರ್ಯಾಚರಣೆ ನಡೆಸಿದ ಜಿಲ್ಲಾ ಪೊಲೀಸ್ ಇಲಾಖೆಯು ದೋಷಪೂರಿತ ದಾಖಲಾತಿಯ 116 ಆಟೋಗಳನ್ನು ಸೀಜ್ ಮಾಡುವ ಮೂಲಕ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಿದೆ.

ಅವಳಿ ನಗರದಲ್ಲಿ ಆಟೋಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು, ಪ್ರಯಾಣಿಕರಿಗಾಗಿ ರಸ್ತೆ ಮಧ್ಯೆ ನಿಲ್ಲಿಸುವುದು, ಡ್ರೈವರ್ ಪಕ್ಕದಲ್ಲಿ ಪ್ರಯಾಣಿಕರನ್ನು ಕೂಡಿಸುವುದು, ಅಡ್ಡಾದಿಡ್ಡಿ ಚಾಲನೆ ಮಾಡುವುದು, ಪ್ರಯಾಣಿಕರಿಗೆ ಪೀಡಿಸುವಂತಹ ಘಟನೆಗಳು ನಡೆಯುತ್ತಿರುವಂತಹ ಘಟನೆಗಳಿಗೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸ್ ಇಲಾಖೆ ದಿಟ್ಟ ಕ್ರಮ ಕೈಗೊಂಡಿತು.

ಕಳೆದ ತಿಂಗಳು ಜಿಲ್ಲಾ ಪೊಲೀಸಸ್ ಇಲಾಖೆಯು ಹೆಲ್ಮೆಟ್ ಧರಿಸದೇ ಇರುವುದು, ಸಿಗ್ನಲ್ ಬ್ರೇಕ್ ಮಾಡುವುದು, ಒನ್ ವೇ ನಲ್ಲಿ ಸಂಚಾರ ಹೀಗೆ ಸಂಚಾರಿ ನಿಯಮಗಳನ್ನು ಪಾಲಿಸದೇ ಇರುವ ದ್ವಿಚಕ್ತ ವಾಹನ ಸವಾರರಿಗೆ ಬಿಸಿ ಮುಟ್ಟಿಸಿ, 145 ಬೈಕ್‌ಗಳನ್ನು ಮಾಡಿತ್ತು. ಈಗ ಆಟೋಗಳ ಚಾಲಕರಿಗೆ ಬಿಸಿ ಮುಟ್ಟಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಸೂಕ್ಷ್ಮವಾಗಿ ಗಮನಿಸಿದ್ದ ಜಿಲ್ಲಾ ಪೊಲೀಸ್ ಇಲಾಖೆಯು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯ ಅಧಿಕಾರಿಗಳನ್ನು ಬ‍‍ಳಸಿಕೊಂಡು ಗದಗ-ಬೆಟಗೇರಿ ಅವಳಿ ನಗರದ ಮಹಾತ್ಮ ಗಾಂಧೀ ವೃತ್ತ, ಮುಳಗುಂದ ನಾಕಾ, ಹಳೆ ಜಿಲ್ಲಾಧಿಕಾರಿ ಕಚೇರಿ, ಕೆ.ಎಚ್. ಪಾಟೀಲ ವೃತ್ತ, ಬಸವೇಶ್ವರ ವೃತ್ತ, ಹಾತಲಗೇರಿ ನಾಕಾ ಸೇರಿ 8 ಪ್ರಮುಖ ವೃತ್ತಗಳಲ್ಲಿ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಿ 116ಕ್ಕೂ ಅಧಿಕ ಆಟೋಗಳನ್ನು ಸೀಜ್ ಮಾಡಿ, ಕಾನೂನು ಉಲ್ಲಂಘಿಸುವವರಿಗೆ ಚುರುಕು ಮುಟ್ಟಿಸಿದರು. ಮುಂದಿನ ದಿನಗಳಲ್ಲಿ ಇದೇ ರೀತಿಯ ವರ್ತನೆ ಮುಂದುವರಿಸಿದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದ ಎಚ್ಚರಿಕೆ ನೀಡಿ ದಂಡ ಭರಿಸಿದ ನಂತರ ವಾಹನಗಳನ್ನು ರಿಲೀಸ್ ಮಾಡಿದರು.

ಗ್ರಾಮೀಣ ಪರವಾನಿಗೆ, ಸಿಟಿಯಲ್ಲಿ ಸಂಚಾರ
ಗದಗ ತಾಲೂಕಿನ ವಿವಿಧ ಗ್ರಾಮಗಳ ಹೆಸರಿನಲ್ಲಿ ಆಟೋ ಹಾಗೂ ಟಂಟಂ ವಾಹನಗಳನ್ನು ಖರೀದಿಸಿ ಗ್ರಾಮೀಣ ಭಾಗದಲ್ಲಿ ಸಂಚರಿಸುವ ಪರವಾನಗಿ ಪಡೆದ ವಾಹನಗಳು ನಗರದಲ್ಲಿ ಸಂಚರಿಸುತ್ತಿದೆ. ಹೀಗಾಗಿ ನಗರದ ಆಟೋಗಳು ಹಾಗೂ ಗ್ರಾಮೀಣ ಭಾಗದ ಆಟೋಗಳ ಚಾಲಕರು ನಿತ್ಯ ಒಂದಿಲ್ಲೊಂದು ವಿಷಯಗಳಿಗೆ ಗಲಾಟೆ, ಗೊಂದಲ ಉಂಟಾಗುವುದು ಸಾಮಾನ್ಯವಾಗಿದೆ. ಜೊತೆಗೆ ಅವಳಿ ನಗರದಲ್ಲಿ ಟ್ರಾಫಿಕ್ ಸಮಸ್ಯೆಗೂ ಕಾರಣವಾಗಿದೆ. ಆದ್ದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರು ಸ್ಪೇಶಲ್ ಡ್ರೈವ್ ಮೂಲಕ ಆಟೋ ಚಾಲಕರಿಗೆ ಎಚ್ಚರಿಕೆಯ ಜೊತೆಗೆ ತಿಳಿವಳಿಕೆ ನೀಡಿದ್ದಾರೆ.

ಗದಗ ಜಿಲ್ಲಾ ಪೊಲೀಸ್ ವತಿಯಿಂದ ಟ್ರಾಫಿಕ್ ಕಾರ್ಯಾಚರಣೆ ಮೂಲಕ ಚಾಲನಾ ಲೈಸೆನ್ಸ್, ಶಹರ/ಗ್ರಾಮೀಣ ಪರವಾನಿಗೆ, ಯುನಿಫಾರ್ಮ್ ಮತ್ತು ನೋಂದಣಿ ಹೀಗೆ ವಿವಿಧ ದಾಖಲಾತಿ ಪರಿಶೀಲಿಸಿ ದೋಷಪೂರಿತ ದಾಖಲಾತಿ ಹೊಂದಿದ್ದ 116 ಆಟೋಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ವಾಹನ ಸವಾರರು ಸಂಚಾರಿ ನಿಯಮಗಳನ್ನು ಪಾಲಿಸುವುದರೊಂದಿಗೆ, ಸುರಕ್ಷತಾ ಕ್ರಮಗಳನ್ನು ಅನುಸರಿಬೇಕು. ಇಲ್ಲವಾದಲ್ಲಿ ಟ್ರಾಫಿಕ್ ಪೊಲೀಸರಿಂದ ದಂಡಕ್ಕೆ ಗುರಿಯಾಗಬೇಕಾಗುತ್ತದೆ.

-ಬಿ.ಎಸ್. ನೇಮಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಗದಗ

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.