![1-assam](https://www.udayavani.com/wp-content/uploads/2024/07/1-assam-415x233.jpg)
Gadag; ಜಟಾಪಟಿಗೆ ಕಾರಣವಾದ ಗದಗ-ಬೆಟಗೇರಿ ನಗರಸಭೆ ಸಾಮಾನ್ಯ ಸಭೆ
Team Udayavani, Mar 1, 2024, 1:38 PM IST
![Gadag; ಜಟಾಪಟಿಗೆ ಕಾರಣವಾದ ಗದಗ-ಬೆಟಗೇರಿ ನಗರಸಭೆ ಸಾಮಾನ್ಯ ಸಭೆ](https://www.udayavani.com/wp-content/uploads/2024/03/betageri-620x342.jpg)
ಗದಗ: ಗದಗ-ಬೆಟಗೇರಿ ನಗರಸಭೆ ಮಾಲಿಕತ್ವದ ಆಸ್ತಿಗಳ ಚರ್ಚೆ ಕುರಿತು ವಿಶೇಷ ಸಾಮಾನ್ಯ ಸಭೆಯಲ್ಲಿ ಆಡಳಿತ, ವಿರೋಧ ಪಕ್ಷದ ಸದಸ್ಯರ ನಡುವೆ ಜಟಾಪಟಿ ನಡೆದಿದೆ.
ಸಭೆ ಆರಂಭದಲ್ಲೇ ಕಾನೂನು ಬಾಹಿರಸಭೆ ಕರೆಯಲಾಗಿದೆ ಎಂದು ವಿರೋಧ ಪಕ್ಷದ ಸದಸ್ಯರು ಆರೋಪಿಸಿದರು.
ನಗರಸಭೆ ವ್ಯಾಪ್ತಿಯಲ್ಲಿ ನೂರಾರು ಮಾಲಿಕತ್ವದ ಆಸ್ತಿಗಳಿದ್ದು, ಯಾವ ಆಸ್ತಿಯ ಕುರಿತು ಚರ್ಚೆ ಎಂಬುದರ ಕುರಿತು ಅಜೆಂಡಾದಲ್ಲಿ ಸ್ಪಷ್ಟವಾಗಿ ತಿಳಿಸಿಲ್ಲ. ಆರ್ಟಿಕಲ್ 48, 49ರ ನಿಯಮದ ವಿರುದ್ಧವಾಗಿ ಸಭೆ ಕರೆಯಲಾಗಿದೆ ಎಂದು ವಿರೋಧ ಪಕ್ಷದ ಸದಸ್ಯರು ಪೌರಾಯುಕ್ತರನ್ನು ತರಾಟೆಗೆ ತೆಗೆದುಕೊಂಡರು.
ಸಭೆಯನ್ನು ಮುಂದೂಡುವಂತೆ ಪಟ್ಟು ಹಿಡಿದ ಸದಸ್ಯರು, ಸಭೆಯಲ್ಲೇ ಪೌರಾಯುಕ್ತರನ್ನು ವಿರೋಧ ಪಕ್ಷದ ಸದಸ್ಯರು ಘೇರಾವ್ ಹಾಕಿದರು. ನಗರಸಭೆ ಆಸ್ತಿಯನ್ನು ಉಳಿಸಿಕೊಳ್ಳಲು ನಮ್ಮ ಆಸ್ತಿ ನಮ್ಮ ಹಕ್ಕು ಅಭಿಯಾನ ಮುಂದುವರಿಸುವುದಾಗಿ ಆಡಳಿತ ಪಕ್ಷದ ಸದಸ್ಯರು ತಿಳಿಸಿದರು. ರಾಜ್ಯಪಾಲರ ಬಳಿ ನಿಯೋಗ ತೆಗೆದುಕೊಂಡು ಹೋಗುವುದಾಗಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಘೋಷಣೆ ಮಾಡಿದರು.
ಸಚಿವ ಎಚ್.ಕೆ. ಪಾಟೀಲ ಅವರು ನಗರಸಭೆ ವಕ್ತಾರ ಸಾಲುಗಳ ಆಸ್ತಿಯನ್ನು ವಾಣಿಜ್ಯ, ಸಾಂಸ್ಕೃತಿಕ ವಸ್ತು ಪ್ರದರ್ಶನ ಅಭಿವೃದ್ಧಿ ಪ್ರಾಧಿಕಾರ ರಚಿಸಿ ವಿಧಾನಸಭೆಯಲ್ಲಿ ವಿಧೇಯಕ ಮಂಡನೆ ಮಾಡಿರುವುದು ಸರಿಯಲ್ಲ ಎಂಬ ಆರೋಪಿಸಿದರು.
ನಗರಸಭೆ ಆಡಳಿತ ಪಕ್ಷದ ಸದಸ್ಯರು ಸಚಿವ ಎಚ್.ಕೆ. ಪಾಟೀಲ್ ವಿರುದ್ಧ ಧಿಕ್ಕಾರ ಎಂಬ ಘೋಷಣೆ ಕೂಗಿದರು.
ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ ಹಾಗೂ ಆಡಳಿತ ಪಕ್ಷದ ಸದಸ್ಯರು ಸಭೆಯಿಂದ ಹೊರನಡೆದರು.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.