Gadag: ಹಾರ್ನ್ ಮಾಡಿದ್ದಕ್ಕೆ ಸಾರಿಗೆ ಬಸ್ ಅಡ್ಡಗಟ್ಟಿ ಪುಂಡಾಟ; ಚಾಲಕ ಆಸ್ಪತ್ರೆಗೆ ದಾಖಲು
Team Udayavani, Feb 9, 2024, 11:25 AM IST
ಗದಗ: ಹಾರ್ನ್ ಮಾಡಿದ್ದಕ್ಕೆ ಸಾರಿಗೆ ಬಸ್ ಅಡ್ಡಗಟ್ಟಿದ ಯುವಕರ ತಂಡವೊಂದು ಪುಂಡಾಟ ಮೆರೆದ ಘಟನೆ ಗದಗ ಹೊರವಲಯದ ಅಸುಂಡಿ ಬಳಿ ನಡೆದಿದೆ.
ಸಾರಿಗೆ ಬಸ್ ಗದಗದಿಂದ ಹುಬ್ಬಳ್ಳಿ ಕಡೆಗೆ ಹೊರಟಿತ್ತು. ಇದೇ ವೇಳೆ ನಾಲ್ವರು ಅಸುಂಡಿ ಬಳಿ ಸ್ವಿಫ್ಟ್ ಕಾರ್ ನಲ್ಲಿ ಹೊರಟಿದ್ದರು. ಹಿಂಬದಿಯಿಂದ ಹೊರಟಿದ್ದ ಸಾರಿಗೆ ಬಸ್ ಚಾಲಕ ಹಾರ್ನ್ ಮಾಡಿದ್ದಾನೆ. ಕಾರ್ ಸೈಡ್ ಮಿರರ್ ಕ್ಲೋಸ್ ಮಾಡಿದ್ದನ್ನು ಗಮನಿಸಿ ಐದಾರು ಬಾರಿ ಬಸ್ ಡ್ರೈವರ್ ಹಾರ್ನ್ ಮಾಡಿದ್ದ. ಇದಕ್ಕೆ ಕೋಪಗೊಂಡ ಯುವಕರ ತಂಡ ಬಸ್ ನಿಲ್ಲಿಸಿ ವಾಗ್ವಾದಕ್ಕಿಳಿದ್ದಾರೆ.
ಸ್ವಿಫ್ಟ್ ನಲ್ಲಿ ಹೊರಟಿದ್ದ ನಾಲ್ವರು ಬಸ್ ಅಡ್ಡಗಟ್ಟಿ ರಂಪಾಟ ಮಾಡಿದ್ದಾರೆ. ಯಾಕೆ ಹಾರ್ನ್ ಹಾಕಿದೆ ಎಂದು ತಗಾದೆ ತೆಗೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಗಲಾಟೆಯಲ್ಲಿ ಬಸ್ ಡ್ರೈವರ್ ಸಂತೋಷ್ ಅಸೂಟಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ