ಗದಗ: ಮನೆಗೊಂದು ರೊಟ್ಟಿ-ರೂಪಾಯಿ ಭಿಕ್ಷೆಗೆ ಚಾಲನೆ

ಗ್ರಾಮದ ಪ್ರತಿ ಮನೆ-ಮನೆಗೆ ಭೇಟಿ ನೀಡಿ ರೊಟ್ಟಿ, ನಾಣ್ಯದ ಭಿಕ್ಷೆ ಪಡೆದರು.

Team Udayavani, Mar 6, 2023, 6:37 PM IST

ಗದಗ: ಮನೆಗೊಂದು ರೊಟ್ಟಿ-ರೂಪಾಯಿ ಭಿಕ್ಷೆಗೆ ಚಾಲನೆ

ಗದಗ: ಇಂದು ನೋಟಿನ ಮೂಲಕ ಚುನಾವಣೆ ನಡೆಯುತ್ತಿದ್ದು, ನೋಟಿನ ಮೂಲಕ ವೋಟು ಗಿಟ್ಟಿಸುವ ಕೆಲಸವಾಗುತ್ತಿದೆ. ಆದ್ದರಿಂದ, ಚುನಾವಣೆಗಳು ಬದಲಾವಣೆಯಾಗಬೇಕು. ಯೋಗ್ಯ ಹಾಗೂ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ಸಾರ್ವಜನಿಕರು ಕೂಡ ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಹೇಳಿದರು.

ತಾಲೂಕಿನ ಸೊರಟೂರು ಗ್ರಾಮದಲ್ಲಿ ನಿಮ್ಮದೊಂದು ರೊಟ್ಟಿ ನಾ ಎಂದಿಗೂ ಗಟ್ಟಿ, ನಿಮ್ಮದೊಂದು ಪ್ರೀತಿಯ ನಾಣ್ಯ ಪಡೆದ ನಾನೇ ಧನ್ಯ. ನಮ್ಮ ನಡೆ ನಿಮ್ಮೆಲ್ಲರ ಮನೆ-ಮನದ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮತದಾರರು 100, 500 ರೂ.ಗೆ ಮತವನ್ನು ಮಾರಿಕೊಳ್ಳಬಾರದು ಎಂಬ ದೃಷ್ಟಿಯಿಂದ ಹೊಸ ಪರಿಕಲ್ಪನೆಯೊಂದಿಗೆ ನಿಮ್ಮದೊಂದು ರೊಟ್ಟಿ ನಾ ಎಂದಿಗೂ ಗಟ್ಟಿ, ನಿಮ್ಮದೊಂದು ಪ್ರೀತಿಯ ನಾಣ್ಯ ಪಡೆದ ನಾನೇ ಧನ್ಯ. ನಮ್ಮ ನಡೆ ನಿಮ್ಮೆಲ್ಲರ ಮನೆ-ಮನದ ಕಡೆ ಕಾರ್ಯಕ್ರಮದೊಂದಿಗೆ ಜನರ ಮನೆಗೆ ಹೋಗಿ ರೊಟ್ಟಿಯ ಜೊತೆಗೆ ಒಂದು ರೂ. ನಾಣ್ಯದ ಭಿಕ್ಷೆ ಪಡೆದು ಆಶೀರ್ವಾದ ಕೇಳುತ್ತಿದ್ದೇನೆ ಎಂದು ಹೇಳಿದರು.

ಗದಗ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 59 ಸಾವಿರ ಮನೆಗಳಿದ್ದು, ಪ್ರತಿ ಮನೆಗೆ ಭೇಟಿ ನೀಡಿ, ಅದರಿಂದ ಕೂಡಿದ ಹಣದಲ್ಲಿ ಬಿಜೆಪಿ ಪಕ್ಷದ ನಾಮಪತ್ರ ಸಲ್ಲಿಸಲು ಬಳಸಲಾಗುತ್ತದೆ. ಜನರ ಶಾಸಕನಾಗಬೇಕು. ಜನರ ಹಿಡಿತದಲ್ಲಿರುವ ಹಾಗೂ ಜನರ ನೋವು, ಕಷ್ಟ ಅರ್ಥ ಮಾಡಿಕೊಳ್ಳುವ ಶಾಸಕನಾಗಬೇಕು. ಅಂದಾಗ ಮಾತ್ರ ಜನರು ಕೊಟ್ಟ ರೊಟ್ಟಿಗೂ, ನಾಣ್ಯಕ್ಕೂ, ಮಾಡಿದ ಮತದಾನಕ್ಕೂ ಬೆಲೆ ಬರುತ್ತದೆ ಎಂದು ಹೇಳಿದರು.

ಇತ್ತೀಚೆಗೆ ಕಾಂಗ್ರೆಸ್‌ ನಾಯಕರು ಅನಿಲ ಮೆಣಸಿನಕಾಯಿ ಚಿಲ್ಲರೆ ರಾಜಕಾರಣ ಮಾಡುತ್ತಾನೆಂದು ಹೇಳಿದ್ದಾರೆ. ಅವರಿಗೆ ನೋಟಿನ ಬಗ್ಗೆ ಮಾತ್ರ ಗೊತ್ತಿದೆ. ಚಿಲ್ಲರೆ ಮಹತ್ವ ಅರಿತುಕೊಂಡಿಲ್ಲ. ಯಾವುದೇ ಮನೆಯಲ್ಲಿ ಶುಭ ಕಾರ್ಯ ನಡೆಯಬೇಕಾದರೆ ಒಂದು ಸಾವಿರ ನೋಟಿದ್ದರೂ ಅದರ ಮೇಲಿನ 1ರೂ. ಚಿಲ್ಲರೆಗೆ ಬಹಳ ಬೆಲೆ, ಮಹತ್ವ ಬರುತ್ತದೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಗದಗ ವಿಧಾನಸಭಾ ಮತಕ್ಷೇತ್ರದ ಸ್ವಾಭಿಮಾನದ ಜನತೆ ಚಿಲ್ಲರೆಯ ಮಹತ್ವ ತಿಳಿಸಿಕೊಡುತ್ತಾರೆ ಎಂದು ಹೇಳಿದರು.

ನಿಮ್ಮದೊಂದು ರೊಟ್ಟಿ ನಾ ಎಂದಿಗೂ ಗಟ್ಟಿ, ನಿಮ್ಮದೊಂದು ಪ್ರೀತಿಯ ನಾಣ್ಯ ಪಡೆದ ನಾನೇ ಧನ್ಯ ಅಭಿಯಾನದ ಅಂಗವಾಗಿ ಸೊರಟೂರ ಗ್ರಾಮದ ಹಾಲುಮತ ಸಮುದಾಯದ ನೀಲಪ್ಪ ಸೀತಾರಹಳ್ಳಿ ಅವರ ಮನೆಗೆ ಭೇಟಿ ನೀಡಿದ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಅವರು ಸಂಗಟಿ, ಮಜ್ಜಿಗೆ, ರೊಟ್ಟಿ, ಕಡಲೆಕಾಳು, ಹೆಸರಕಾಳು, ಬದನೆಕಾಯಿ ಪಲ್ಯೆ ಹಾಗೂ ಮೊಸರು, ಚಿತ್ರಣ್ಣ ಊಟ ಸವಿದರು. ನಂತರ ಗ್ರಾಮದ ಪ್ರತಿ ಮನೆ-ಮನೆಗೆ ಭೇಟಿ ನೀಡಿ ರೊಟ್ಟಿ, ನಾಣ್ಯದ ಭಿಕ್ಷೆ ಪಡೆದರು.

ಅನಿಲಗೆ ಮೆಣಸಿನಕಾಯಿ ಹಾರ: ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಅವರು ಸೊರಟೂರ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಗ್ರಾಮದ ಮುಖಂಡರು ಕಿತ್ತಳೆ ಹಣ್ಣು, ದೊಣ್ಣೆ ಮೆಣಸಿನಕಾಯಿ, ಚೆಂಡು ಹೂವು, ಮೆಣಸಿನಕಾಯಿ ಬಳಸಿ ತಯಾರಿಸಿದ 15 ಅಡಿ ಎತ್ತರದ ಹಾರವನ್ನು ಜೆಸಿಬಿ ಮೂಲಕ ಹಾಕಲಾಯಿತು. ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದಣ್ಣ ಪಲ್ಲೇದ, ಗದಗ-ಬೆಟಗೇರಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಘವೇಂದ್ರ ಯಳವತ್ತಿ, ಮುಖಂಡರಾದ ಭದ್ರೇಶ ಕುಸಲಾಪೂರ, ಎಂ.ಎಂ. ಹಿರೇಮಠ, ಪರಮೇಶ ನಾಯ್ಕ, ಕೆ.ಪಿ. ಕೋಟಿಗೌಡರ, ವಿಜಯಲಕ್ಷ್ಮೀ ಮಾನ್ವಿ ಇತರರಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.