ಗದಗ: ಆಟೋ ಚಾಲಕನ ಬೆದರಿಸಿ ಚಿನ್ನಾಭರಣ ಸುಲಿಗೆ-ಮೂವರ ಸೆರೆ


Team Udayavani, Feb 29, 2024, 5:47 PM IST

ಗದಗ: ಆಟೋ ಚಾಲಕನ ಬೆದರಿಸಿ ಚಿನ್ನಾಭರಣ ಸುಲಿಗೆ-ಮೂವರ ಸೆರೆ

ಉದಯವಾಣಿ ಸಮಾಚಾರ
ಗದಗ: ಬೆಟಗೇರಿ ಬಡಾವಣೆ ಠಾಣೆ ವ್ಯಾಪ್ತಿಯ ಎಪಿಎಂಸಿ ದನದ ಮಾರ್ಕೆಟ್‌ನಲ್ಲಿ ಆಟೋ ಚಾಲಕನನ್ನು ಹೆದರಿಸಿ, ಜೀವ ಬೆದರಿಕೆ ಹಾಕಿ 1.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿಕೊಂಡು ಹೋದ ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ದಾಖಲಾದ 48 ಗಂಟೆಯೊಳಗಾಗಿ ಬೆಟಗೇರಿ ಬಡಾವಣೆ ಠಾಣೆಯ ಪೊಲೀಸರು ಆರೋಪಿಗಳಾದ ಸಿದ್ಧಾರ್ಥ ನಗರದ
ನಿವಾಸಿಗಳಾದ ಕಿಶೋರ ಯಲ್ಲಪ್ಪ ಕಟ್ಟಿಮನಿ(25), ಶಿವಕುಮಾರ ನಾಗಪ್ಪ ಗುಡಿಮನಿ(20) ಹಾಗೂ ಪ್ರತಾಪ ಧರ್ಮಣ್ಣ ಹೊಸಮನಿ(32) ಅವರನ್ನು ಆಭರಣ ಸಮೇತ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಘಟನೆ ವಿವರ: ಹಾತಲಗೇರಿ ನಿವಾಸಿ ಬಸವರಾಜ ಜಂಬಣ್ಣ ಹಡಗಲಿ ಎಂಬುವವರು 18ರಂದು ಸಂಜೆ 6ಕ್ಕೆ ಹಳೆ ಬಸ್‌ ನಿಲ್ದಾಣದಿಂದ ನಗರದಲ್ಲಿನ ಶಿಕ್ಷಕರ ಬಡಾವಣೆಯಲ್ಲಿರುವ ತಮ್ಮ ನಿವಾಸಕ್ಕೆ ಆಟೋದಲ್ಲಿ ತೆರಳುತ್ತಿರುವ ಸಂದರ್ಭ ಮೂರು ಜನ ಆರೋಪಿಗಳು ಡ್ರಾಪ್‌ ಕೇಳುವ ನೆಪದಲ್ಲಿ ಆಟೋ ಹತ್ತಿ ಎಪಿಎಂಸಿ ದನದ ಮಾರ್ಕೆಟ್‌ ಬಳಿ ಆಟೋ ನಿಲ್ಲಿಸಿ, ಅಡ್ಡಗಟ್ಟಿ ಹೆದರಿಸಿ, ಜೀವ ಬೆದರಿಕೆ ಹಾಕಿದ್ದಲ್ಲದೇ ಚಾಲಕನು ತನ್ನ ಮೈಮೇಲೆ ಹಾಕಿಕೊಂಡಿದ್ದ 15 ಗ್ರಾಂ ತೂಕದ 60 ಸಾವಿರ ಮೌಲ್ಯದ ಒಂದು ಬಂಗಾರದ ಬ್ರಾಸ್ಲೆಟ್‌, 15 ಗ್ರಾಂ ತೂಕದ 60 ಸಾವಿರ ರೂ. ಮೌಲ್ಯದ ಒಂದು ಬಂಗಾರದ ಚೈನ್‌ ಹಾಗೂ 5 ಗ್ರಾಂ ತೂಕದ ಬಂಗಾರದ ಉಂಗುರವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು.

18 ರಂದು ಸುಲಿಗೆಯಾಗಿದ್ದರೂ ಆಟೋ ಚಾಲಕನು ಭಯದಿಂದ ಪ್ರಕರಣ ದಾಖಲಿಸಿರಲಿಲ್ಲ. 26ರಂದು ನಗರದ ಬೆಟಗೇರಿ
ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್‌. ನೇಮಗೌಡ, ಹೆಚ್ಚುವರಿ ಎಸ್‌ಪಿ
ಎಂ.ಬಿ. ಸಂಕದ ಹಾಗೂ ಡಿವೈಎಸ್‌ಪಿ ಜೆ.ಎಚ್‌. ಇನಾಮದಾರ ಮಾರ್ಗದರ್ಶನದಲ್ಲಿ ಸಿಪಿಐ  ಧೀರಜ್‌ ಬಿ. ಹಾಗೂ ಪಿಎಸ್‌ಐ ವಿಜಯಕಮಾರ ತಳವಾರ ನೇತೃತ್ವದ ತಂಡ ಪ್ರಕರಣ ದಾಖಲಾದ 48 ಗಂಟೆಗಳಲ್ಲಿ ಆರೋಪಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿ ಪತ್ತೆ ಹಚ್ಚುವಲ್ಲಿ ಶ್ರಮಿಸಿದ ಎಎಸ್‌ಐ ಆರ್‌.ಜಿ. ಬೇವಿನಕಟ್ಟಿ, ಬಿ.ಎಫ್‌. ಯರಗುಪ್ಪಿ, ಸಿಬ್ಬಂದಿಯಾದ ಪಿ.ಎಚ್‌. ದೊಡ್ಡಮನಿ, ಅಶೋಕ ಗದಗ, ನಾಗರಾಜ ಬರಡಿ, ಸಿ.ವಿ. ನಾಯ್ಕರ್‌, ಎಸ್‌.ಎಚ್‌. ಕಮತರ, ಶ್ರೀಶೈಲ ನಾಗನೂರ ಹಾಗೂ ಕೆ.ವಿ. ಕಿತ್ತಲಿರನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್‌. ನೇಮಗೌಡ ಶ್ಲಾಘಿಸಿದ್ದಾರೆ.

ಟಾಪ್ ನ್ಯೂಸ್

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.